ಕಲಬುರಗಿ: ಕಲಬುರಗಿಯಲ್ಲಿ ನಡೆಯಲಿರುವ `ಕಾವ್ಯ ಸಂಸ್ಕೃತಿ ಯಾನ’ದ ಸರ್ವಾಧ್ಯಕ್ಷರಾಗಿ ಹಿರಿಯ ಕವಿ ಡಾ.ಕಾಶೀನಾಥ ಅಂಬಲಗಿ ಅವರು ಆಯ್ಕೆಯಾಗಿದ್ದಾರೆ ಎಂದು ಆಯೋಜಕರಾದ ಮಲ್ಲಿಕಾರ್ಜುನ ಮಹಾಮನೆ ಹಾಗೂ ಮಹಿಪಾಲರೆಡ್ಡಿ ಮುನ್ನೂರ ತಿಳಿಸಿದ್ದಾರೆ.
ಬೆಂಗಳೂರಿನ ರಂಗಮಂಡಲ ಆಯೋಜಿಸಿದ್ದು, ಸ್ಥಳೀಯ ಸೇಡಂನ ರಾಷ್ಟ್ರಕೂಟ ಸಾಂಸ್ಕೃತಿಕ ಪ್ರತಿμÁ್ಠನ ಸಹಯೋಗದಲ್ಲಿ ಸೆಪ್ಟೆಂಬರ್ 29 ರಂದು ಕಲಬುರಗಿ ನಗರದ ದಿ ಐಡಿಯಲ್ ಫೈನ್ ಆಟ್ರ್ಸ್ ಕಾಲೇಜಿನಲ್ಲಿ ಒಂದು ದಿನದ ಕಾವ್ಯ ಯಾನ ನಡೆಯಲಿದೆ.
ಈ ಯಾನವನ್ನು ಕವಿ ಡಾ.ಕಾಶಿನಾಥ ಅಂಬಲಗೆ ಅವರು ಮುನ್ನಡೆಸಲಿದ್ದಾರೆ. ಕಾವ್ಯ ಸಂಸ್ಕೃತಿ ಯಾನದ ಮೊದಲ ಕಾರ್ಯಕ್ರಮವು ಜುಲೈ ತಿಂಗಳಲ್ಲಿ ಚಾಮರಾಜನಗರದಲ್ಲಿ ಆರಂಭವಾಗಿದ್ದು, ಆಗಸ್ಟ್ ತಿಂಗಳಲ್ಲಿ ಧಾರವಾಡ, ಇದೀಗ ಸೆಪ್ಟೆಂಬರ್ ತಿಂಗಳಲ್ಲಿ ಕಲಬುರಗಿಯ ಕಲಾನಿಕೇತನದಲ್ಲಿ ತೃತೀಯ ಕಾವ್ಯ ಸಂಸ್ಕøತಿ ಯಾನ ಜರುಗಲಿದೆ. ಸೆ. 29 ರಂದು ಭಾನುವಾರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೂ ಕಾವ್ಯ ಸಂಸ್ಕøತಿ ಯಾನ ನಡೆಯಲಿದೆ.
ಸಾಹಿತಿಗಳಾದ ಜಿ ಎನ್ ಮೋಹನ, ಹೇಮಾ ಪಟ್ಟಣಶೆಟ್ಟಿ, ಆರ್ ಜಿ ಹಳ್ಳಿ ನಾಗರಾಜ್, ಚನ್ನಪ್ಪ ಅಂಗಡಿ, ಮೂಡ್ನಾಕೂಡು ಚಿನ್ನಸ್ವಾಮಿ, ಭೈರಮಂಗಲ ರಾಮೇಗೌಡ, ರಂಗಸ್ವಾಮಿ ಸಿದ್ದಯ್ಯ ಸೇರಿದಂತೆ ಅನೇಕರು ಡಾ.ಕಾಶಿನಾಥ ಅಂಬಲಗೆ ಅವರನ್ನು ಸರ್ವಾಧ್ಯಕ್ಷರನ್ನಾಗಿ ಮಾಡುವಂತೆ ಸಲಹೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಜಾತಿ ಹಾಗೂ ಮಹಿಳಾ ನಿಂದನೆ ಗಂಭೀರ ಸ್ವರೂಪದ್ದಾಗಿರುವಾಗಲೆ, ಹನಿಟ್ರ್ಯಾಪ್ ಜೀವ ವಿರೋಧಿ ಏಡ್ಸ್ ರೋಗಹರಡುವ ದುಷ್ಖೃತ್ಯದ ಆರೋಪದಲ್ಲಿ ಜೈಲು…
ಕಲಬುರಗಿ: ಬಸವಾದಿ ಶರಣರ ಪರಂಪರೆ, ಬಸವತತ್ವ ಪರಿಪಾಲನೆಯಲ್ಲಿ ಸುಲಫಲ ಮಠದ ಕೊಡುಗೆ ಅನನ್ಯವಾಗಿದೆ ಎಂದು ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ…
ಕಲಬುರಗಿ: ಸಾಮರಸ್ಯವೆಂದರೆ ಕೇವಲ ಹಿಂದು ಮುಸ್ಲಿಂ ಅಷ್ಟೇ ಅಲ್ಲ. ಅಲ್ಲಿ ಕೆಳ,ಮಧ್ಯಮ, ಮೇಲ್ವರ್ಗ ಇರುವಂತೆ ವಿವಿಧ ಸಂಸ್ಕೃತಿಗಳು ಕೂಡ ಅಡಕವಾಗಿರುತ್ತವೆ.…
ಕಲಬುರಗಿ: ಮಹಿಳೆಯರ ಆರೋಗ್ಯವು ಅನೇಕ ವಿಶಿಷ್ಟ ರೀತಿಯಲ್ಲಿ ಪುರುಷರ ಆರೋಗ್ಯಕ್ಕಿಂತ ಭಿನ್ನವಾಗಿದೆ. ಹೀಗಾಗಿ ಎಲ್ಲಾ ಮಹಿಳೆಯರಿಗೆ ಆರೋಗ್ಯವೆ ಭಾಗ್ಯ ಎಂದು…
ಮುಂಬೈ; ನಮ್ಮ ದೇಶವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ವೇಗದಲ್ಲಿ ಸಾಗುತ್ತಿದೆ, ಮುಂಬರುವ ವರ್ಷಗಳಲ್ಲಿ ದೇಶವನ್ನು ವಿಶ್ವದ ಅಭಿವೃದ್ಧಿ ಹೊಂದಿದ ರಾಷ್ಟ್ರಗಳ…
ಮೈಸೂರು; ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ…