ವಿದ್ಯಾರ್ಥಿಗಳಿಗೆ ಉಚಿತ ಪೌಷ್ಟಿಕ ಆಹಾರ ವಿತರಣೆ ಕಾರ್ಯಕ್ರಮಕ್ಕೆ ಶಾಸಕಿ ಕನೀಜ್ ಫಾತೀಮಾ ಚಾಲನೆ

0
41

ಕಲಬುರಗಿ: ನಗರದ ಕಪನೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಜ್ಯ ಸರ್ಕಾರದ ಅಕ್ಷರ ದಾಸೋಹ-ಮಧ್ಯಾಹ್ನ ಉಪಾಹಾರ ಯೋಜನೆಯಡಿ ಅಜೀಂ ಪ್ರೇಮ್‌ಜಿ ಫೌಂಡೇಷನ್, ಬೆಂಗಳೂರು ಇವರ ಸಹಭಾಗಿತ್ವದಲ್ಲಿ ಶಾಲಾ ಮಕ್ಕಳ ಪೌಷ್ಟಿಕತೆ ವೃದ್ಧಿಸಲು ರಾಜ್ಯದ ಎಲ್ಲ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ ಆರು ದಿನಗಳು ಪೂರಕ ಪೌಷ್ಟಿಕ ಆಹಾರವನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮಕ್ಕೆ ಉತ್ತರ ಮತಕ್ಷೇತ್ರದ ಶಾಸಕಿ ಖನೀಜ್ ಫಾತೀಮಾ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೇಸ್ ಯುವ ಮುಖಂಡರಾದ ಫರಾಜ್ ಉಲ್ ಇಸ್ಲಾಂ, ಮಹಾನಗರ ಪಾಲಿಕೆ ಸದಸ್ಯರಾದ ಪ್ರಕಾಶ ಹೆಚ್ ಕಪನೂರ್, ಉತ್ತರ ಕ್ಷೇತ್ರ ಬಿ.ಓ ಸೋಮಶೇಖರ ಹಂಚನಾಳ, ಕಲಬುರಗಿ ತಾಲೂಕ ಪಂಚಾಯತ ಇ.ಓ ಸೈಯ್ಯದ್ ಪಟೇಲ್, ಬಿಸಿಯೂಟ ಎ.ಡಿ ಚಂದ್ರಕಾAತ, ಮುಖ್ಯಗುರುಗಳಾದ ಕೆ.ಎನ್ ಪೂಜಾರಿ, ಮೊಹಿನ್ ಖಾನ್, ಸುಭಾಶ್ ಡಾಂಗೆ, ಗೋಪಾಲ್ ಭೊಸಗಾ, ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here