ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಗತ್ ಸಿಂಗ್ ಅವರ 117ನೇ ಜಯಂತಿ ಆಚರಿಸಲಾಯಿತು.
ಈ ವೇಳೆ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ ಕ್ರಾಂತಿಕಾರಿ ಚಿಂತನೆ, ದೇಶಪ್ರೇಮ ಮೈಗೂಡಿಸಿಕೊಂಡಿದ್ದ ಭಗತ್ ಸಿಂಗ್ ನಮಗೆಲ್ಲಾ ದಾರಿ ದೀಪ ಎಂದರು.
ಸಾವಿರಾರು ಅಪ್ರತಿಮ ವೀರರ, ದೇಶಪ್ರೇಮದ ತ್ಯಾಗ, ಬಲಿದಾನದ ಫಲವಾಗಿ ನಾವು ಇಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಹೀಗಾಗಿ, ಸದಾ ಅವರು ಹಾಕಿಕೊಟ್ಟ ದೇಶ ಪ್ರೇಮದ ದಾರಿಯಲ್ಲಿ ಸಾಗಿ ಅವರಿಗೆ ಗೌರವಿಸುವುದು ನಮ್ಮ ಕರ್ತವ್ಯವಾಗಿದೆ.
ಭಗತ್ ಸಿಂಗ್ ಅವರನ್ನು 23 ನೇ ವಯಸ್ಸಿನಲ್ಲಿ ಬ್ರಿಟಿಷರು ಗಲ್ಲಿಗೇರಿಸಿದರು.1919ರಲ್ಲಿ ಭಗತ್ ಸಿಂಗ್ ತಮ್ಮ 12ನೇ ವಯಸ್ಸಿನಲ್ಲಿ ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಸ್ಥಳಕ್ಕೆ ಭೇಟಿ ನೀಡಿದಾಗ ಅವರಲ್ಲಿ ಮೊದಲ ಬಾರಿಗೆ ಕ್ರಾಂತಿ ಮನೋಭಾವನೆ ಹುಟ್ಟಿತು. ಇದಾದ ಬಳಿಕ ಭಗತ್ ಸಿಂಗ್ ತಮ್ಮ 14ನೇ ವಯಸ್ಸಿನಲ್ಲಿ ತಮ್ಮ ಹಳ್ಳಿಯಲ್ಲಿ ಪ್ರತಿಭಟನಾಕಾರರಲ್ಲಿ ಒಬ್ಬರಾಗಿದ್ದರು.
ನಂತರ ಭಗತ್ ಸಿಂಗ್ ಅವರು ಯುವ ಕ್ರಾಂತಿಕಾರಿ ಚಳುವಳಿಯಲ್ಲಿ ಭಾಗಿಯಾದರು. ಜೊತೆಗೆ ಬ್ರಿಟಿಷರನ್ನು ಭಾರತದಿಂದ ಓಡಿಸಲು ಹಿಂಸಾತ್ಮಕ ಮಾರ್ಗವನ್ನು ಹಿಡಿದು ನಮ್ಮ ಸ್ವಾತಂತ್ರ್ಯಕ್ಕೆ ನಾಂದಿ ಹಾಡಿದರು. ಅಂತ ಹೋರಾಟಗಾರರ ತ್ಯಾಗ ಬಲಿದಾನ ಸ್ಮರಿಸಿ,ಅವರಿಗೆ ಕೃತಜ್ಞತರಾಗೋಣ ಎಂದು ಹೇಳಿದರು.
ಈ ಸಂಧರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ರವಿ ನಾಯಕ,ಯುವ ಮೂರ್ಚಾ ಅಧ್ಯಕ್ಷ ಭಾಗಣ್ಣ ದೊರೆ, ಮುಖಂಡರಾದ ಗಿರಿಮಲ್ಲಪ್ಪ ಕಟ್ಟಿಮನಿ,ಭೀಮರಾವ ದೊರೆ,ಅಶೋಕ ಪವಾರ,ಪ್ರಮೋದ ಚೊಪಡೆ,
ಭೀಮರಾವ ಕಾನಕುರ್ತೆ,ದತ್ತಾ ಖೈರೆ,ಯಂಕಮ್ಮ ಗೌಡಗಾಂವ, ಶರಣಮ್ಮ ಯಾದಗಿರಿ,ಉಮಾ ಭಾಯಿ ಗೌಳಿ ಸೇರಿದಂತೆ ಇತರರು ಇದ್ದರು
ಕಲಬುರಗಿ: ಈ ಕಥಾ ಸಂಕಲವನ್ನು ಓದಿದರೆ ಮಾತು ಬಾರದ ಮೌನ ಆವರಿಸುತ್ತದೆ. ಉತ್ತರ ಕರ್ನಾಟಕದ ಜನ ಮತ್ತೆ ಮತ್ತೆ ಬರೆದು…
ಕಲಬುರಗಿ: ವಿಶ್ವ ಹಿಂದೂ ಪರಿಷತ್, ಕಲಬುರಗಿ ಮಹಾನಗರ, ಗೋರಕ್ಷಾ ವಿಭಾಗ ವತಿಯಿಂದ ಸೆ.30.ರಂದು ಬೆಳಿಗ್ಗೆ 10.ರಿಂದ ಸಂಜೆ 5ರ ವರೆಗೆ…
ಕಲಬುರಗಿ: “ಸ್ವಚ್ಚತೆಯೇ ಆರೋಗ್ಯದ ಮೂಲ ಮಂತ್ರ” ಎಂದು ಶಾಂತಾ ಆಸ್ಪತ್ರೆಯ ವೈದ್ಯೆ ಡಾ. ಅಂಬಿಕಾ ಪಾಟಿಲ್ ಹೇಳಿದರು. ಇಂದು ಅವರು ಕರ್ನಾಟಕ…
ಅಫಜಲಪುರ: ಇಲ್ಲಿನ ಸರಕಾರಿ ಪಾಲಿಟೆಕ್ನಿಕ್ ಅಫಜಲಪೂರ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಪ್ರಾದೇಶಿಕ ಕೇಂದ್ರ ಕಲಬುರಗಿಯ…
ಆಳಂದ; ಕೇಂದ್ರ ಸರ್ಕಾರದಿಂದ ಗ್ರಾಮ ಪಂಚಾಯತಗಳಿಗೆ ಮಂಜೂರಿಯಾಗಿರುವ ಪ್ರಧಾನಮಂತ್ರಿ ಆವಾಸ್ ಯೋಜನೆಯ ಮನೆಗಳಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ಬಿಜೆಪಿ ಬೆಂಬಲಿತ…
ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶವು ಹಲವು ಹಿರಿಮೆಗಳಿಗೆ ಪ್ರಸಿದ್ಧಿಯಾಗಿದೆ. ಸ್ವತಂತ್ರ ಪೂರ್ವದ ಇತಿಹಾಸ ನೋಡಿದರೆ ಈ ಪ್ರದೇಶದಲ್ಲಿ ಅನೇಕ ರಾಜ…