ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು ಹೆಗಲು ಕೊಟ್ಟು ಸಂಘಟನೆಯನ್ನು ಮತ್ತಷ್ಟು ಗಟ್ಟಿಯಾಗಿ ಬೆಳೆಸಿ ನಾಡಿನಲ್ಲಿಯ ನೊಂದವರಿಗೆ ನ್ಯಾಯ ಕೊಡಿಶೋಣ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಸಂಘಟನೆಯ ರಾಜ್ಯ ಉಪ ಪ್ರಧಾನ ಸಂಚಾಲಕ ನಾಗಣ್ಣ ಬಡಿಗೇರ ತಿಳಿಸಿದರು.
ನಗರದ ಟೈಲರ್ ಮಂಜಿಲ್ ಪ್ರವಾಸಿ ಮಂದಿರದಲ್ಲಿ ನಡೆದ ಸಂಘಟನೆಯ ಮಹಾಸಭೆಯಲ್ಲಿ ಭಾಗವಹಿಸಿ ಮಾತನಾಡಿ,ಎಲ್ಲರು ಸಂಘಟಿತರಾಗಿ ಸಮಾಜದ ಏಳಿಗೆಗಾಗಿ ದುಡಿಯೋಣ ಎಂದರು.

ಇದೇ ಸಂದರ್ಭದಲ್ಲಿ ಕಲಬುರ್ಗಿ ವಿಭಾಗಿಯ ಸಂಚಾಲಕ ರಾಮಣ್ಣ ಕಲ್ಲದೇವನಹಳ್ಳಿ ಅಧ್ಯಕ್ಷತೆ ವಹಿಸಿ ಮಾತನಾಡಿ,ನಮ್ಮ ಸಂಘಟನೆ ಇದುವರೆಗೆ ಅನೇಕ ಜನಪರ ಹೋರಾಟಗಳನ್ನು ಮಾಡಿಕೊಂಡು ಬರುತ್ತಿದ್ದು,ತಾವೆಲ್ಲರು ಇಂದು ನೂತನ ಪದಾಧಿಕಾರಿಗಳು ಒಗ್ಗಟ್ಟಿನಿಂದ ಪ್ರತಿ ಹೋಬಳಿ,ಹಳ್ಳಿ ಗಳಲ್ಲಿಯೂ ಸಂಘಟನೆಯನ್ನು ಕಟ್ಟುವ ಮೂಲಕ ದೀನ,ದಲಿತ,ಶೋಷಿತರ ಧ್ವನಿಯಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಸಂಚಾಲಕ ಮರುಳಸಿದ್ಧಪ್ಪ ನಾಯ್ಕಲ್,ಜಿಲ್ಲಾ ಸಂಘಟನಾ ಸಂಚಾಲಕರಾದ ಮಾಳಪ್ಪ ಕಿರದಳ್ಳಿ,ಪರಶುರಾಮ ಮಹಲರೋಜಾ,ಭೀಮರಾಯ ಬಳಿಚಕ್ರ,ಅಶೋಕ ನಾಯ್ಕಲ್,ಬಸವರಾಜ ಅಣಬಿ,ಭೀಮರಾಯ ಅಗ್ನಿ,ಶಹಾಪುರ ತಾ.ಪ್ರ.ಸಂಚಾಲಕ ಚಂದ್ರಕಾಂತ ಬಜೇರಿ,ಹಿರಿಯ ಮುಖಂಡರಾದ ಬಸವರಾಜ ಗೋನಾಳ,ಸಾಹೇಬಗೌಡ ವಾಗಣಗೇರಾ,ಚಂದ್ರು ಕಿರದಳ್ಳಿ ತಾಂಡಾ,ಸದಾಶಿವ ಕರಡಕಲ್,ಪ್ರಶಾಂತ (ಉಗ್ರಂ),ರಮೇಶ ಅರಕೇರಿ,ಸಾಯಬಣ್ಣ ಕಿರದಳ್ಳಿ,ಹಣಮಂತ ವಾಗಣಗೇರಾ,ಹೊನ್ನಪ್ಪ ಗೌಂಡಿ,ಮಲ್ಲಿಕಾರ್ಜುನ ಪರಸನಹಳ್ಳಿ,ಪರಶುರಾಮ ನಾಟೇಕಾರ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.ಇದೇ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.

ಸಂಘಟನೆಯ ಜಿಲ್ಲಾ ಉಪ ಪ್ರಧಾನ ಸಂಚಾಲಕ ಮಾಳಪ್ಪ ಕಿರದಳ್ಳಿ ಎಲ್ಲಾ ನಾಯಕರ ಮಾರ್ಗದರ್ಶನದಲ್ಲಿ ಹಾಗೂ ಕಾರ್ಯಕರ್ತರ ಅಭಿಪ್ರಾಯದಂತೆ ನೂತನ ಪದಾಧಿಕಾರಿಗಳನ್ನು ಘೋಷಿಸಿದರು.ಪದಾಧಿಕಾರಿಗಳು: ಶರಣಪ್ಪ ತಳವಾರಗೇರಾ (ತಾ.ಪ್ರಧಾನ ಸಂಚಾಲಕ), ಗೊಲ್ಲಾಳಪ್ಪ ಕಟ್ಟಿಮನಿ ಕಿರದಳ್ಳಿ,ಮಲ್ಲಿಕಾರ್ಜುನ ತಳವಾರಗೇರಾ,ಪರಶುರಾಮ ಸಾಸನೂರ,ಪ್ರಕಾಶ ಕಟ್ಟಿಮನಿ,ಕೆಂಚಪ್ಪ ಕಟ್ಟಿಮನಿ,ಶರಣು ಅಂಬರಕೇಡ ಬೋನ್ಹಾಳ,ಲಾಲು ಚವ್ಹಾಣ,ಮೌನೇಶ ತೆಗ್ಗಿಹಳ್ಳಿ (ಸಂಘಟನಾ ಸಂಚಾಲಕರು), ಬಲಭೀಮ ಹಾದಿಮನಿ (ಖಜಾಂಚಿ)

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

2 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

2 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

2 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

2 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

2 hours ago

ಸಂಧ್ಯಾ ಹೊನಗುಂಟಿಕರ್ ಅವರ ಹೆಸರು ಕಳೆದುಕೊಂಡ‌ ಊರು ಕಥಾ ಸಂಕಲನ ಬಿಡುಗಡೆ

ಕಲಬುರಗಿ: ಈ ಕಥಾ ಸಂಕಲವನ್ನು ಓದಿದರೆ ಮಾತು ಬಾರದ ಮೌನ ಆವರಿಸುತ್ತದೆ. ಉತ್ತರ ಕರ್ನಾಟಕದ ಜನ ಮತ್ತೆ ಮತ್ತೆ ಬರೆದು…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420