ಪರಿಷತ್ತಿನ ಸಲಕರಣೆಗಳ ಖರೀದಿಗಾಗಿ 5 ಲಕ್ಷ ರೂ. ಅನುದಾನದ: ಎಂಎಲ್ಸಿ ಕಮಕನೂರ ಭರವಸೆ

ಕಲಬುರಗಿ: ಸದಾ ಕನ್ನಡಪರ ಚಟುವಟಿಕೆಗಳನ್ನು ಕೈಗೊಳ್ಳುತ್ತಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ಮಾಣಗೊಂಡಿರುವ ಸಾಹಿತ್ಯ ಮಂಟಪಕ್ಕೆ ಅಗತ್ಯವಿರುವ ಸಲಕರಣೆಗಳ ಖರೀದಿಗೆ ತಮ್ಮ ವ್ಯಾಪ್ತಿಯ ಅನುದಾನದಲ್ಲಿ 5 ಲಕ್ಷ ರೂ. ಗಳ ಅನುದಾನದ ನೆರವು ನೀಡುವುದಾಗಿ ವಿಧಾನ ಪರಿಷತ್ತಿನ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಭರವಸೆ ನೀಡಿದರು.

ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ರವಿವಾರ ಏರ್ಪಡಿಸಿದ ಸತ್ಕಾರ ಸಂಭ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕನ್ನಡ ನಾಡು-ನುಡಿ ಹಾಗೂ ಸಾಂಸ್ಕøತಿಕ ಪರಂಪರೆ ಇನ್ನಷ್ಟು ಹೆಚ್ಚಿಸಿಕೊಂಡು ಬರಲು ಈ ಅನುದಾನ ಶೀಘ್ರವೇ ಮಂಜುರು ಮಾಡಿಸಿಕೊಡಲಾಗುವುದು. ಸಾಹಿತ್ಯ ಮತ್ತು ಸಮಾಜ ಸೇವೆಯಲ್ಲಿ ಸಕ್ರೀಯವಾಗಿ ಸೇವೆ ಸಲ್ಲಿಸುತ್ತಿರುವ ಗಣ್ಯರನ್ನು ಗುರುತಿಸಿ ಗೌರವ ಸತ್ಕಾರ ಮಾಡುತ್ತಿರುವುದು ಹೆಮ್ಮೆಯ ಸಂಗತಿ. ಇಂಥ ಮಹನೀಯರ ಸೇವೆ ನಾಡಿನ ಜನರಿಗಾಗಿ ಮುಂದುವರಿಯಲಿ ಎಂದು ಆಶಿಸಿದರು.

ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡವರ ಬದುಕು ಹಾಗೂ ಹೋರಾಟಗಳು ಎಲ್ಲರಿಗೂ ಮಾದರಿ. ಪ್ರತಿಯೊಬ್ಬರೂ ಜನ ಸೇವೆ ಮಾಡಬೇಕೆಂಬ ಹಂಬಲ ಬೆಳೆಸಿಕೊಳ್ಳಬೇಕಾಗಿದೆ. ಪರಿಷತ್ತು ಸಾಧನೆ ಮಾಡುವವರಿಗೆ ಸತ್ಕಾರಿಸುವುದರ ಜತೆಗೆ ಸಾಧನೆ ಮಾಡಲು ಪ್ರೇರಣೆ ಕೊಡುವ ಕಾರ್ಯವೂ ಸಹ ಮಾಡುತ್ತಲಿದೆ. ಸಾರ್ವಜನಿಕರ ಸಹಕಾರದೊಂದಿಗೆ ಪರಿಷತ್ತಿನ ಕಾರ್ಯಕ್ರಮಗಳು ಮುನ್ನಡೆಸಿಕೊಂಡು ಬರಲಾಗುತ್ತಿದೆ. ಅದರ ಜತೆಗೆ ಪರಿಷತ್ತಿನ ಇನ್ನುಳಿದ ಭೌತಿಕ ಕಾರ್ಯಗಳಿಗೂ ಸಹ ಆದ್ಯತೆ ನೀಡಲಾಗುವುದು ಎಂದರು.

ಪಾಲಿಕೆಯ ವಲಯ ಆಯುಕ್ತರಾದ ರಮೇಶ ಪಟ್ಟೇದಾರ, ಚರ್ಮರೋಗ ತಜ್ಞೆ ಡಾ. ರಾಜೇಶ್ವರಿ ಎಂ.ಎನ್., ಜಿಲ್ಲಾ ಕಸಾಪ ದ ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್ ಧನ್ನಿ, ಪ್ರಮುಖರಾದ ರವೀಂದ್ರಕುಮಾರ ಭಂಟನಳ್ಳಿ, ಕಲ್ಯಾಣಕುಮಾರ ಶೀಲವಂತ, ಜ್ಯೋತಿ ಕೋಟನೂರ, ರಾಜೇಂದ್ರ ಮಾಡಬೂಳ, ಧರ್ಮರಾಜ ಜವಳಿ, ರಮೇಶ ಡಿ ಬಡಿಗೇರ, ದಿನೇಶ ಮದಕರಿ, ಡಾ. ಬಾಬುರಾವ ಶೇರಿಕಾರ, ಶಿವಶರಣ ಬಡದಾಳ, ಎಂ ಎನ್ ಸುಗಂಧಿ, ಗುರುಬಸಪ್ಪ ಸಜ್ಜನಶೆಟ್ಟಿ, ನಾಗಪ್ಪ ಎಂ ಸಜ್ಜನ್, ಎಸ್ ಕೆ ಬಿರಾದಾರ, ಸುರೇಶ ದೇಶಪಾಂಡೆ, ಸುರೇಶ ಲೇಂಗಟಿ, ಪ್ರಭು ಫುಲಾರಿ, ಚಂದ್ರಕಾಂತ ಸೂರನ್, ಮಲ್ಲಿನಾಥ ಸಂಗಶೆಟ್ಟಿ, ಡಾ. ಶೀಲಾದೇವಿ ಬಿರಾದಾರ, ಮಧೂಸೂಧನ್ ಚಿಂತನಪಳ್ಳಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಟಿಎಸಾರ್ ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರಾದ ಹಿರಿಯ ಪತ್ರಕರ್ತ ಶ್ರೀಕಾಂತಾಚಾರ್ಯ ಮಣೂರ, ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರಾದ ಹಿರಿಯ ಪತ್ರಕರ್ತ ಡಿ ಶಿವಲಿಂಗಪ್ಪ, ಗುಲಬರ್ಗ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಎಸ್ ಪಿ ಸುಳ್ಳದ್, ಮಲ್ಲಣ್ಣ ಮಡಿವಾಳ, ರಾಜೀವಗಾಂಧಿ ವಿ.ವಿ. ಯ ಸೆನೆಟ್ ಸದಸ್ಯಾದ ಡಾ. ಅರವಿಂದ ಎಸ್.ಎಚ್. ಕಟ್ಟಿ, ಮಹಿಳಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಡಾ. ಅತೀಕ್ ಉರ್ ರೆಹಮಾನ್, ಗೌರವ ಡಾಕ್ಟರೇಟ್ ಪದವಿ ಪಡೆದ ಡಾ. ಲಕ್ಷ್ಮಣ ದಸ್ತಿ, ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕøತರಾದ ಸಿದ್ಧಲಿಂಗಯ್ಯಸ್ವಾಮಿ ಮಲಕೂಡ, ಶಂಕರಜೀ ಹಿಪ್ಪರಗಿ ಅವರನ್ನು ವಿಶೇಷವಾಗಿ ಸತ್ಕರಿಸಲಾಯಿತು.

emedialine

Recent Posts

ರಾಜ್ಯೋತ್ಸವ ಪ್ರಶಸ್ತಿ ಪಡೆದ ಕನ್ನಡ ಸಾಹಿತ್ಯ ಸಂಘ 82ನೇ ನಾಡಹಬ್ಬ

ಸುರಪುರ: ರಾಜ್ಯದಲ್ಲಿಯೇ ಅತ್ಯುತ್ತಮವಾದ ಕನ್ನಡ ಸಾಹಿತ್ಯ ಸಂಘ ಎಂದು ಸರಕಾರ ಗುರುತಿಸಿ ಕಳೆದ ವರ್ಷ ರಾಜ್ಯೋತ್ಸವ ಪ್ರಶಸ್ತಿ ನೀಡಿದೆ,ಇದಕ್ಕೆ ಅನೇಕ…

1 hour ago

ದಸರಾ ಸಿ.ಎಂ ಕಪ್ ಕ್ರೀಡಾಕೂಟಕ್ಕೆ ಶಾಸಕ ಅಲ್ಲಂಪ್ರಭು ಪಾಟೀಲ್ ಚಾಲನೆ

ಕಲಬುರಗಿ: ನಗರದ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ದಸರಾ ಸಿ.ಎಂ ಕಪ್ ಕ್ರೀಡಾಕೂಟಕ್ಕೆ ಶಾಸಕ ಅಲ್ಲಂಪ್ರಭು ಪಾಟೀಲ್ ಅವರು ಚಾಲನೆ…

1 hour ago

ತಳವಾರ ನೌಕರಿಗಾಗಿ ಸಿಂಧುತ್ವ ಪ್ರಮಾಣ ಪತ್ರ ಇತರೆ ಸಮಸ್ಯೆಗಳ ಪರಿಹಾರಕ್ಕೆ ಸಚಿವರಿಗೆ ಮನವಿ

ಬೆಂಗಳೂರು: ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕ ಕಲಬುರಗಿ ವತಿಯಿಂದ ರವಿವಾರ ತಳವಾರ ಸಮುದಾಯದ ಸರಕಾರಿ ನೌಕರರ ಸಿಂಧುತ್ವ…

3 hours ago

ಜೀವನದಲ್ಲಿ ಸವಾರ್ಂಗೀಣ ಸ್ವಾಸ್ಥ್ಯ ಸಾಧಿಸಲು ಭಾರತೀಯ ಜ್ಞಾನ ವ್ಯವಸ್ಥೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರ

ಕಲಬುರಗಿ; ಪ್ರಾಚೀನ ಭಾರತೀಯ ಜ್ಞಾನ ವ್ಯವಸ್ಥೆಯು ಜೀವನದಲ್ಲಿ ಸವಾರ್ಂಗೀಣ ಆರೋಗ್ಯ ಮತ್ತು ಸ್ವಾಸ್ಥ್ಯವನ್ನು ಸಾಧಿಸಲು ಎಲ್ಲಾ ಸಮಸ್ಯೆಗಳಿಗೆ ಉತ್ತರ ಮತ್ತು…

3 hours ago

ಕಾವ್ಯ ದೊಂಬರಾಟವಲ್ಲ: ಕಾವ್ಯ ಸಂಸ್ಕೃತಿ ಯಾನಕ್ಕೆ ಚಾಲನೆ

ಕಲಬುರಗಿ: 'ಕಾವ್ಯ ದೊಂಬರಾಟವಲ್ಲ. ನಿಜವಾದ ಹಸಿವು ಗುರುತಿಸುವುದು ಕಾವ್ಯ' ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.‌ಬಸವರಾಜ ಸಾದರ ಅಭಿಪ್ರಾಯ…

4 hours ago

ಕೋಲಿ ಸಮಾಜದ ತಾಲೂಕು ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ತಾಲೂಕು ಕೋಲಿ ಸಮಾಜದ ಅಧ್ಯಕ್ಷರಾಗಿ ಮೂರು ವರ್ಷಗಳ ಅವಧಿ ಪೂರ್ಣಗೊಂಡಿದ್ದರಿಂದ ನೂತನ ಪದಾಧಿಕಾರಿಗಳ ಆಯ್ಕೆಗೆ…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420