ನಾಳೆ ಜೆಡಿಎಸ್ ಪಕ್ಷದ  ಸದಸ್ಯತ್ವ ಅಭಿಯಾನ ಕಾರ್ಯಗಾರ

0
13

ಕಲಬುರಗಿ : ಕಲಬುರಗಿ ಜಿಲ್ಲಾ ಜೆಡಿಎಸ್ ಪಕ್ಷದ ವತಿಯಿಂದ ಸೆ.30 ರಂದು ಬೆಳ್ಳಿಗ್ಗೆ 11-30 ಕ್ಕೆ ಕಲಬುರಗಿ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಪಕ್ಷದ  ಸದಸ್ಯತ್ವ ಅಭಿಯಾನ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಜೆಡಿಎಸ್ ಪಕ್ಷದ ಜಿಲ್ಲಾದ್ಯಕ್ಷದ ಬಾಲರಾಜ್ ಗುತ್ತೇದಾರ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಸದಸ್ಯತ್ವ ಅಭಿಯಾನದ ಜಿಲ್ಲಾ ಉಸ್ತುವಾರಿಗಳಾದ  ಗುರುಮಿಠಕಲ್ ಶಾಸಕರಾದ  ಶರಣಗೌಡ ಕಂದಕೂರ್, ಮಾನ್ವಿ ಮತಕ್ಷೇತ್ರದ ಮಾಜಿ ಶಾಸಕರಾದ  ರಾಜಾ ವೆಂಕಟಪ್ಪ ನಾಯಕ್ ದೊರೆ, ಸೂರ್ಯಕಾಂತ್ ನಾಗಮಾರಪಳ್ಳಿ, ಮಾಜಿ ಸಚಿವರಾದ ಬಂಡೆಪ್ಪ ಖಾಶೇಂಪೂರ, ಹಾಗೂ ಜೆಡಿಎಸ್ ಪಕ್ಷದ ರಾಜ್ಯ ಕಾರ್ಯದಕ್ಷರಾದ ದೊಡಪ್ಪಗೌಡ ನರಿಬೋಳ, ರಾಜ್ಯ ಪ್ರದಾನ ಕಾರ್ಯದರ್ಶಿಗಳಾದ ಶಿವಕುಮಾರ ನಾಟಿಕಾರ  ಸೇರಿದಂತೆ  ರಾಜ್ಯ ಮುಖಂಡರುಗಳ ಸಮ್ಮುಖದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವದ ನೋಂದಣಿ ಅಭಿಯಾನ ಕಾರ್ಯಾಗಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

Contact Your\'s Advertisement; 9902492681

ಈ ಕಾರ್ಯಕ್ರಮಕ್ಕೆ ಜೆಡಿಎಸ್ ಪಕ್ಷದ ರಾಜ್ಯ /ಜಿಲ್ಲಾ /ತಾಲೂಕ /ಪದಾಧಿಕಾರಿಗಳು, ತಾಲೂಕ ಅಧ್ಯಕ್ಷರುಗಳು, ವಿವಿಧ ಘಟಕದ ಅಧ್ಯಕ್ಷರುಗಳು, ಪಕ್ಷದ ಮುಖಂಡರುಗಳು, ಕಳೆದ ವಿಧಾನ ಸಭೆ ಚುನಾವಣೆಗೆ ಸ್ಪರ್ಧೆ ಮಾಡಿದ ಅಭ್ಯರ್ಥಿಗಳು,ಹಾಗೂ ಕಾರ್ಯಕರ್ತರು,ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ  ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು  ಬಾಲರಾಜ್ ಗುತ್ತೇದಾರ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here