ಪ್ರತಿಯೊಬ್ಬ ಮನುಷ್ಯನಿಗೆ ಹಿರಿಯ ಮಾರ್ಗದರ್ಶನ ಮುಖ್ಯ

ಸುರಪುರ: ಪ್ರತಿಯೊಬ್ಬ ಮನುಷ್ಯನಿಗೆ ಹಿರಿಯರ ಮಾರ್ಗದರ್ಶನ ಮುಖ್ಯವಾದುದು,ಅಲ್ಲದೆ ಹಿರಿಯರನ್ನು ಗೌರವಿಸುವುದು ಕಿರಿಯರ ಕರ್ತವ್ಯವೆಂದು ಭಾವಿಸಬೇಕು,ಹಿರಿಯರಿಗೆ ಗೌರವ ನೀಡುವುದು ನಮ್ಮ ಸಂಸ್ಕøತಿಯಾಗಿದೆ ಎಂದು ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾದ ಫಕೀರವ್ವ ಕೆಳಗೇರಿ ಮಾತನಾಡಿದರು.

ನಗರದ ತಹಸಿಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ,ತಾಲ್ಲೂಕ ನ್ಯಾಯವಾದಿಗಳ ಸಂಘ,ತಾಲ್ಲೂಕ ಆಡಳಿತ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ನಡೆದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ಸರ್ಕಾರ ಹಿರಿಯ ನಾಗರಿಕರಿಗಾಗಿ ಅನೇಕ ಸೌಲಭ್ಯಗಳನ್ನು ನೀಡದ್ದು,ಹಿರಿಯರು ಅವುಗಳ ಸದುಪಯೋಗ ಮಾಡಿಕೊಳ್ಳ ಬೇಕು.ಇಂದು ಹೆಚ್ಚಿನ ಮಕ್ಕಳು ಹಿರಿಯರನ್ನು ವೃದ್ಧಾಶ್ರಮಕ್ಕೆ ಸೇರಿಸುವ ಭಾವನೆ ಹೊಂದಿದ್ದಾರೆ,ಆದರೆ ಅದೇ ಹಿರಿಯರು ನಮ್ಮನ್ನೆ ಹೆತ್ತು ಹೊತ್ತು ಬೆಳೆಸಿದ್ದಾರೆ ಎನ್ನುವುದನ್ನು ಮರೆಯಬಾರದು ಎಂದರು.

ಹಿರಿಯ ವಕೀಲ ಅರವಿಂದ ಕುಮಾರ ಮಾತನಾಡಿ,ಅನೇಕ ಜನ ಹಿರಿಯರು ಮಕ್ಕಳಿಗೆ ಸಂಸ್ಕಾರಕ್ಕಿಂತಲೂ ಹಣವೇ ಮುಖ್ಯ ಎನ್ನುವಂತೆ ಬೆಳೆಸುತ್ತಾರೆ.ಮುಂದೆ ಅದೇ ಮಕ್ಕಳು ಹಿರಿಯರನ್ನು ಬಿಟ್ಟು ವಿದೇಶದಲ್ಲಿದ್ದು ಹಿರಿಯರು ಕಡೆಗಣಿಸುತ್ತಾರೆ.ಇಂತಹ ಅನೇಕ ಘಟನೆಗಳು ನೋಡಿದ್ದೇವೆ,ಹಿರಿಯರು ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ ಬೆಳೆಸಬೇಕು ಎಂದರು.ಇದೇ ಸಂದರ್ಭದಲ್ಲಿ ವಕೀಲ ವಿ.ಸಿ ಪಾಟೀಲ್ ಮಾತನಾಡಿದರು ಹಾಗೂ ಹಿರಿಯ ವಕೀಲ ನಿಂಗಣ್ಣ ಚಿಂಚೋಡಿ 2007ರ ಹಿರಯ ನಾಗರಿಕ ಮತ್ತು ಪೋಷಕರ ಸಂರಕ್ಷಣಾ ಅಧಿನಿಯಮದ ಕುರಿತು ಉಪನ್ಯಾಸ ನೀಡಿದರು.

ಗ್ರೇಡ-2 ತಹಸಿಲ್ದಾರ್ ಮಲ್ಲಯ್ಯ ದಂಡು ಅಧ್ಯಕ್ಷತೆ ವಹಿಸಿದ್ದರು.ವೇದಿಕೆಯಲ್ಲಿ ವಕೀಲರ ಸಂಘದ ಅಧ್ಯಕ್ಷ ರಮಾನಂದ ಕವಲಿ,ಸಹಾಯಕ ಸರ್ಕಾರಿ ಅಭಿಯೋಜಕ ಮರೆಪ್ಪ ಹೊಸಮನಿ,ಗುರುಬಸಪ್ಪ,ಹಿರಿಯ ನಾಗರಿಕರು, ಸೇರಿದಂತೆ ಅನೇಕ ಜನ ವಕೀಲರು ಉಪಸ್ಥಿತರಿದ್ದರು.ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನಂದಕುಮಾರ ಕನ್ನೆಳ್ಳಿ ನಿರೂಪಿಸಿದರು,ಚನ್ನಬಸವ ಸ್ವಾಗತಿಸಿದರು,ಮಂಜುನಾಥ ಹುದ್ದಾರ ವಂದಿಸಿದರು.ಇದೇ ಸಂದರ್ಭದಲ್ಲಿ ಹಿರಿಯ ನಾಗರಿಕರಿಗೆ ಹಿರಿಯ ನಾಗರಿಕರ ಸಾಮಾನ್ಯ ಕಾನೂನುಗಳು ಪುಸ್ತಕ ನೀಡಿ ಗೌರವಿಸಲಾಯಿತು.

emedialine

Recent Posts

ನೆಲೋಗಿ ಬಿ.ಆರ್.ಅಂಬೇಡ್ಕರ ಭವನದಲ್ಲಿ ಛತ್ರಪತಿ ಶಿವಾಜಿಯ ಮಹಾರಾಜರ ಜನ್ಮ ದಿನಾಚರಣೆ

ಜೇವರ್ಗಿ: ಇಂದು ನೆಲೋಗಿ ಗ್ರಾಮದಲ್ಲಿ ಡಾ. ಅಂಬೇಡ್ಕರ್ ಸೇವಾ ಚಾರಿಟೇಬಲ್ ಟ್ರಸ್ಟ್ ನೆಲೋಗಿವತಿಯಿಂದ ಡಾ. ಬಿ.ಆರ್.ಅಂಬೇಡ್ಕರ ಸಮುದಾಯ ಭವನದಲ್ಲಿ ಛತ್ರಪತಿ…

5 days ago

ಸಮಾಜದಲ್ಲಿನ ಅನಿಷ್ಟ ಪದ್ಧತಿ ಹೋರಾಟ ಅಗತ್ಯ: ಮೇಯರ್

ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಮೂಢನಂಬಿಕೆ, ಅನಿಷ್ಟ ಪದ್ಧತಿ, ಸಂವಿಧಾನದ ಆಶಯ ಈಡೇಸುವ ನಿಟ್ಟಿನಲ್ಲಿ ಜನ್ಮ ತಾಳಿದ ಮಾನವ ಬಂಧುತ್ವ…

1 week ago

ಕಲಬುರಗಿ; 200 ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ ಆಯೋಜನೆ

ಕಲಬುರಗಿ: ನಗರದ ಸೆಂಟ್ ಮೇರಿ ಶಾಲೆಯಲ್ಲಿ 5 ರಿಂದ 9 ನೇ ತರಗತಿಯ 200 ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ…

2 weeks ago

ಉಚಿತ ಆರೋಗ್ಯ ತಪಾಸಣೆ ಶಿಬಿರ

ಜೇವರ್ಗಿ: ತಾಲೂಕಿನ ಜನರ ಸೇವೆಗಾಗಿ ಕಲಬುರಗಿಯ ಇಸ್ಲಾಮಾಬಾದ ಕಾಲೋನಿಯ ಅಲ್ ಶಿಫಾ ಆಸ್ಪತ್ರೆಯ ಮುಖ್ಯಸ್ಥರು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು…

2 weeks ago

ಅಯಾಜೊದ್ದೀನ್ ಪಟೇಲ್ ಗೆ ಮುಮ್ತಾಜ್ ಶಿರೀನ್ ಪ್ರಶಸ್ತಿ ಪ್ರದಾನ

ಕಲಬುರಗಿ: ನಗರದ ಕೋರಮಂಗಲದಲ್ಲಿರುವ ಒಳಾಂಗಣ ಕ್ರೀಡಾಂಣದಲ್ಲಿ ಯುನೈಟೆಡ್ ಕೌನ್ಸಿಲ್ ಫಾರ್ ಎಜುಕೇಷನ್ ಆ್ಯಂಡ್ ಕಲ್ಟರ್ ಹಾಗೂ ಮೆಹೆಫಿಲ್-ಎ- ನಿಸಾ ಸಂಘಟನೆ…

2 weeks ago

ರಮಾಬಾಯಿ ಅಂಬೇಡ್ಕರ್ ರವರ 127 ನೇ ಜಯಂತೋತ್ಸವ

ಕಲಬುರಗಿ: ನಗರದ ಹೊರವಲಯದಲ್ಲಿ ಇರುವ ಶರಣ ಸಿರಸಗಿ ಅಂಬೇಡ್ಕರ್ ನಗರದಲ್ಲಿ ಧಮ್ಮ ಮೈತ್ರಿ ಫೌಂಡೆಶನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾತೆ…

2 weeks ago