ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್ ಮಾಡುವ ಮೂಲಕ ಒತ್ತಾಯಿಸುವುದಾಗಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣದ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ,ಬಪ್ಪರಗಿ ಗ್ರಾಮದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಹಾಗೂ ಗ್ರಾಮದಲ್ಲಿ ದಲಿತರಿಗೆ ಬಹಿಷ್ಕಾರ ಹಾಕಿರುವವರಲ್ಲಿ ಕೆಲವರನ್ನು ಬಂಧಿಸಿದ್ದಾರೆ.

ಪೊಲೀಸರ ಈ ಕ್ರಮಕ್ಕೆ ಸ್ವಾಗತಿಸುತ್ತೇವೆ,ಆದರೆ ಕೊಡೇಕಲ್ ಗ್ರಾಮದಲ್ಲಿ ನಡೆದ ಅತ್ಯಾಚಾರ ಯತ್ನ ಘಟನೆಯ ಆರೋಪಿಗಳನ್ನು ಇದುವರೆಗೆ ಬಂಧಿಸಿಲ್ಲ,ಸಂತ್ರಸ್ತೆಯ ಕುಟುಂಬಸ್ಥರ ಮೇಲೆಯೇ ಹಲ್ಲೆ ನಡೆಸಲಾಗಿದೆ.ಆದರೂ ಪೊಲೀಸರು ಇದುವರೆಗೆ ಆರೋಪಿಗಳನ್ನು ಬಂಧಿಸಿಲ್ಲ,ಇದಕ್ಕಾಗಿ ಈಗಾಗಲೇ ಹುಣಸಗಿಯಲ್ಲಿ ರಸ್ತೆ ತಡೆ ನಡೆಸಿ ಬಂಧನಕ್ಕೆ ಒತ್ತಾಯಿಸಿದಾಗ ಡಿವೈಎಸ್ಪಿ ಲಿಖಿತ ಪತ್ರ ನೀಡಿ ಬಂಧಿಸುವುದಾಗಿ ತಿಳಿಸಿದ್ದರು.

ಇದುವರೆಗೂ ಬಂಧಿಸಿಲ್ಲ,ಆದ್ದರಿಂದ ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಒದಗಿಸಲು ಆಗ್ರಹಿಸುತ್ತೇವೆ.ಮತ್ತು ಚೆನ್ನೂರ ಗ್ರಾಮದಲ್ಲಿ ದಲಿತ ಮೇಲೆ ದೌರ್ಜನ್ಯ ಮಾಡಿದವರ ಬಂಧಿಸಬೇಕು,ಕೋನಾಳ ಗ್ರಾಮದಲ್ಲಿ ಹೋರಾಟಗಾರ ಶೇಖಪ್ಪ ಭಂಡಾರಿ ಮೇಲೆ ಹಲ್ಲೆ ಮಾಡಿದವರನ್ನು ಬಂಧಿಸುವಂತೆ,ಬಪ್ಪರಗಿ ಗ್ರಾಮದ 10 ದಲಿತ ಕುಟುಂಬಗಳಿಗೆ,ಕೊಡೇಕಲ್ ಗ್ರಾಮದ ಸಂತ್ರಸ್ತ ಕುಟುಂಬಕ್ಕೆ ತಲಾ 4 ಎಕರೆ ನೀಡುವಂತೆ ಆಗ್ರಹಿಸಿ ಅಕ್ಟೋಬರ್ 8 ರಂದು ಸುರಪುರ ಬಂದ್ ಮಾಡಿ ಒತ್ತಾಯಿಸಲಾಗುವುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಬಿ.ಕೃಷ್ಣಪ್ಪ ಸ್ಥಾಪಿತ ಬಣದ ಜಿಲ್ಲಾ ಸಂಚಾಲಕ ನಿಂಗಣ್ಣ ಗೋನಾಲ ಮಾತನಾಡಿ,ಜಿಲ್ಲೆಯ ಅನೇಕ ಕಡೆಗಳಲ್ಲಿ ದಲಿತರ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಹಲ್ಲೆಗಳು ನಡೆಯುತ್ತಿವೆ.ಆದರೆ ಪೊಲೀಸರು ಆರೋಪಿಗಳನ್ನು ಬಂಧಿಸದೆ ವಿಳಂಬ ಮಾಡುವುದು ಬೇಸರದ ಸಂಗತಿಯಾಗಿದೆ. ಕೂಡಲೇ ಕೊಡೇಕಲ್ ಗ್ರಾಮದ ಘಟನೆಯ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸುತ್ತೇವೆ.ಇಲ್ಲವಾದಲ್ಲಿ 8 ರಂದು ಸುರಪುರ ಬಂದ್ ಮಾಡಲಾಗುವುದು,ಇದಕ್ಕೂ ಸ್ಪಂಧಿಸದಿದ್ದಲ್ಲಿ ಮುಂದೆ ಮತ್ತಷ್ಟು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಇದೇ ಸಂದರ್ಭದಲ್ಲಿ ಮೂರ್ತೆಪ್ಪ ಬೊಮ್ಮನಹಳ್ಳಿ ನಿರೂಪಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಮುಖಂಡರಾದ ದೇವಿಂದ್ರಪ್ಪ ಬಾದ್ಯಾಪುರ,ರಾಮಣ್ಣ ಶೆಳ್ಳಗಿ,ಬಸವರಾಜ ಶೆಳ್ಳಗಿ,ನಾಗರಾಜ ಓಕಳಿ,ಹುಲಗಪ್ಪ ಬೈಲಕುಂಟಿ,ದೇವು ಹೊರಟ್ಟಿ,ರಮೇಶ ಪೂಜಾರಿ,ಮಾನಯ್ಯ ಶೆಳ್ಳಿಗಿ,ರಾಯಪ್ಪ ಕೊರೆ,ಖಾಜಾಹುಸೇನ್ ಗುಡಗುಂಟಿ,ವೀರಭದ್ರ ತಳವಾರಗೇರ,ಮಲ್ಲಿಕಾರ್ಜುನ ವಾಗಣಗೇರಾ ಸೇರಿದಂತೆ ಅನೇಕರು ಭಾಗವಹಿಸಿದ್ದರು.

emedialine

Recent Posts

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

13 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

13 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

13 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

13 hours ago

ಜುಡೋಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…

13 hours ago

ನವರಾತ್ರಿ: ನವರಾಣಿ ಚಿನ್ನಾಭರಣ ಉತ್ಪನ್ನ ಬಿಡುಗಡೆ

ಕಲಬುರಗಿ: ಇಲ್ಲಿನ ಸಾರ್ವಜನಿಕ ಉದ್ಯಾನವನದ ಎದುರು ಇರುವ ಟಾಟಾ ತನಿಷ್ಕ್ ಫ್ರಾಂಚೈಸಿ ಮಾಲೀಕರಾದ ಸಚಿನ್ ಮೆಹತಾ, ಆನಂದ ಶಹಾ ಒಡೆತನದ…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420