ಕಲಬುರಗಿ: 371ನೇ ಜೇ ಕಲಂ ಸೌಲತ್ತುಗಳ ಬಗ್ಗೆ ಡಾ. ಲಕ್ಷ್ಮಣ ದಸ್ತಿಯವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಅಂಜುಮನ್ ಸಂಸ್ಥೆಯಿಂದ ಅ.6. ರಂದು ರವಿವಾರ ಬೆಳಗ್ಗೆ 11.30 ಗಂಟೆಗೆ ಸರಿಯಾಗಿ ಕೆ.ಬಿ.ಎನ್.ಆಸ್ಪತ್ರೆ ಮುಂಬಾಗದಲ್ಲಿ ಬರುವ ಅಂಜುಮನ್ ತರಖ್ಖಿ.ಎ.ಉರ್ದು. ಹಿಂದ್ ಸಭಾಂಗಣದಲ್ಲಿ ಅಂಜುಮನ್ ತರಖ್ಖಿ -ಎ-ಉರ್ದು ಹಿಂದ್ ವತಿಯಿಂದ 371ನೇ ಜೇ ಕಲಂ ಸೌಲತ್ತುಗಳ ಕುರಿತು ಹಿರಿಯ ಹೋರಾಟಗಾರರಾದ ಡಾ.ಲಕ್ಷ್ಮಣ ದಸ್ತಿಯವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ಮಹತ್ವದ ಉಪನ್ಯಾಸ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮಾಜಿ ಉರ್ದು ಅಕಾಡೆಮಿ ಅಧ್ಯಕ್ಷರಾದ ಡಾ.ವಹಾಬ್ ಅಂದಲಿಬ್, ನ್ಯಾಷನಲ್ ಕಾಲೇಜಿನ ನಿವೃತ್ತ್ ಪ್ರಾಚಾರ್ಯರಾದ ಶ್ರೀ ಅಮ್ಜದ್ ಜಾವೇದ್ ಭಾಗವಹಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಂಜುಮನ್ ಸಂಸ್ಥೆಯ ಅಧ್ಯಕ್ಷರಾದ ಡಾ.ಅಕ್ರಮ್ ನಕ್ಕಾಶ ವಹಿಸಲಿದ್ದಾರೆ. ಪ್ರಾಸ್ತಾವಿಕ ಭಾಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಡಾ.ಮಾಜಿದ್ ದಾಗಿ ಮಾಡುವರು.
ನಮ್ಮ ಪ್ರದೇಶದ ನೌಕರಿಗಳ, ಶೈಕ್ಷಣಿಕ ಮೀಸಲಾತಿ ಸೌಲಭ್ಯಗಳ ಬಗ್ಗೆ ಮತ್ತು ಅಭಿವೃದ್ಧಿ ವಿಷಯಗಳಿಗೆ ಸಂಬಂಧಿಸಿದ ಈ ಮಹತ್ವದ ಕಾರ್ಯಮಕ್ಕೆ ಬುದ್ಧಿಜೀವಿಗಳು, ಚಿಂತಕರು,ಆಯಾ ಕ್ಷೇತ್ರದ ಗಣ್ಯರು, ಸಾಮಾಜಿಕ ಕಾರ್ಯಕರ್ತರು, ವಿಧ್ಯಾರ್ಥಿಗಳು, ನಿರುದ್ಯೋಗಿಗಳು ಮತ್ತು ಆಯಾ ಕ್ಷೇತ್ರದ ನಾಗರಿಕರು ಭಾಗವಹಿಸಲು ಅಂಜುಮನ್ ತರಖ್ಖಿ -ಎ-ಉರ್ದು ಹಿಂದ್ ಕಲಬುರಗಿಯ ಪ್ರಧಾನ ಕಾರ್ಯದರ್ಶಿಗಳಾದ ಡಾ.ಮಾಜೀದ್ ದಾಗಿ ಅವರು ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಮಂಡಳಿ ಪಣ ತೊಟ್ಟಿದ್ದು, ಬರುವಂತಹ…
ಸುರಪುರ: ನಗರದಲ್ಲಿ ವಿವಿಧ ಅಭಿವೃಧ್ಧಿ ಕಾಮಗಾರಿಗಳಿಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ…
ಸುರಪುರ:ದೇಶದಲ್ಲಿ ಹಲವು ಸಂಸ್ಕøತಿಗಳು ಇರುತ್ತವೆ,ಅಂತಹ ಸಂಸ್ಕøತಿಗಳಲ್ಲಿ ಕನ್ನಡ ಮತ್ತು ಕರ್ನಾಟಕ ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಕಳೆದ 82 ವರ್ಷಗಳಿಂದ…
ಸುರಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸುರಪುರ ತಾಲೂಕ ನೂತನ ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದೆ ಎಂದು ಮಹಾಸಭಾ ತಾಲೂಕ…
ಕಲಬುರಗಿ: ಮಹಾನಗರ ಪಾಲಿಕೆಯ ಅಧೀಕ್ಷಕ, ಅಭಿಯಂತರ ಹಾಗೂ ಉಪ ಆಯುಕ್ತ ಆರ್.ಪಿ. ಜಾಧವ ಅವರನ್ನು ಅಮಾತುಗೊಳಿಸಿ ಮನೆಗೆ ಕಳಿಸಬೇಕು ಎಂದು…
ಕಲಬುರಗಿ: ಎಷ್ಟೋ ಜನರ ಜೀವನ ಭಜನೆಯಿಂದ ಬದಲಾಗಿಗೆ ಕಾಯಿಲೆ ಬಿದ್ದು ಹಾಸಿಗೆ ಹಿಡಿದ ವ್ಯಕ್ತಿ ಭಜನೆ ಮಾಡುವುದರಿಂದ ಎದ್ದು ಗುಣಮುಖರಾದ…