ಸುರಪುರ: ನಗರದಲ್ಲಿ ವಿವಿಧ ಅಭಿವೃಧ್ಧಿ ಕಾಮಗಾರಿಗಳಿಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು,ಉತ್ತಮ ಗುಣಮಟ್ಟದ ಕಾಮಗಾರಿಯನ್ನು ನಿರ್ಮಿಸ ಬೇಕು,ಯಾವುದೇ ಕಾರಣಕ್ಕೂ ಕಾಮಗಾರಿ ಕಳಪೆಯಾಗದಂತೆ ನಿಗಾವಹಿಸಿ,ಒಂದು ವೇಳೆ ಕಾಮಗಾರಿ ಕಳಪೆ ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
2023-24ನೇ ಸಾಲಿನ ಕೆಕೆಆರ್ಡಿಬಿ ಅನುದಾನದಲ್ಲಿ ಸುರಪುರ ನಗರದ ಕೆಂಭಾವಿ ರಸ್ತೆಯಲ್ಲಿನ ಸಿದ್ದಾಪುರ ಹನುಮಾನ ದೇವಸ್ಥಾನದ ಬಳಿಯ ಸಿಸಿ ರಸ್ತೆ ತಡೆಗೋಡೆ ಮತ್ತು ಬಾಕ್ಸ್ ಕನ್ವರ್ಟ್ ನಿರ್ಮಾಣ 2 ಕೋಟಿ ರೂಪಾಯಿ ಅನುದಾನದ ಕಾಮಗಾರಿ. ಕೆಕೆಆರ್ಡಿಬಿ ಯೋಜನೆಯ 1 ಕೋಟಿ ಅನುದಾನದಲ್ಲಿ ಸುರಪುರ ನಗರಸಭೆಯಿಂದ ರಂಗಂಪೇಟೆಯಾಟೋ ನಿಲ್ದಾಣದ ವರೆಗೆ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿ.2ಕೋಟಿ ಅನುದಾನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಟೈಲರ್ ಮಂಜಿಲ್ ವರೆಗಿನ ಸಿಸಿ ರಸ್ತೆ ನಿರ್ಮಾಣ,ಪಾಳದಕೇರಿಯಿಂದ ವೆಂಕಟಾಪುರ ವರೆಗೆ ಸಿಸಿ ರಸ್ತೆ ನಿರ್ಮಾಣ. 80 ಲಕ್ಷ ರೂಪಾಯಿ ಅನುದಾನದಲ್ಲಿ ವಾಗಣಗೇರಾ ಗ್ರಾಮದ ಬಳಿಯ ಅರಸಿಕೆರೆಯ ಸಮಗ್ರ ಅಭಿವೃಧ್ಧಿ ಕಾಮಗಾರಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯ ಪ್ರ.ಕಾರ್ಯದರ್ಶಿ ವಿಠ್ಠಲ್ ಯಾದವ್,ನಯೋಪ್ರಾ ಅಧ್ಯಕ್ಷ ಪ್ರಕಾಶ ಗುತ್ತೇದಾರ,ಯೂಥ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜಾ ಕುಮಾರ ನಾಯಕ,ಶಕೀಲ್ ಅಹ್ಮದ್,ಮಲ್ಲಣ್ಣ ಸಾಹುಕಾರ ನರಸಿಂಗಪೇಟ,ನಿಂಗರಾಜ ಬಾಚಿಮಟ್ಟಿ,ನಾಸೀರ ಕುಂಡಾಲೆ,ಶಿವಕುಮಾರ ಕಟ್ಟಿಮನಿ,ಮಹ್ಮದ್ ಗೌಸ್ ಕಿಣ್ಣಿ ಸೇರಿದಂತೆ ನಗರಸಭೆ ಅನೇಕ ಸದಸ್ಯರು ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಇತರರು ಭಾಗವಹಿಸಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಮಂಡಳಿ ಪಣ ತೊಟ್ಟಿದ್ದು, ಬರುವಂತಹ…
ಸುರಪುರ:ದೇಶದಲ್ಲಿ ಹಲವು ಸಂಸ್ಕøತಿಗಳು ಇರುತ್ತವೆ,ಅಂತಹ ಸಂಸ್ಕøತಿಗಳಲ್ಲಿ ಕನ್ನಡ ಮತ್ತು ಕರ್ನಾಟಕ ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಕಳೆದ 82 ವರ್ಷಗಳಿಂದ…
ಸುರಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸುರಪುರ ತಾಲೂಕ ನೂತನ ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದೆ ಎಂದು ಮಹಾಸಭಾ ತಾಲೂಕ…
ಕಲಬುರಗಿ: ಮಹಾನಗರ ಪಾಲಿಕೆಯ ಅಧೀಕ್ಷಕ, ಅಭಿಯಂತರ ಹಾಗೂ ಉಪ ಆಯುಕ್ತ ಆರ್.ಪಿ. ಜಾಧವ ಅವರನ್ನು ಅಮಾತುಗೊಳಿಸಿ ಮನೆಗೆ ಕಳಿಸಬೇಕು ಎಂದು…
ಕಲಬುರಗಿ: 371ನೇ ಜೇ ಕಲಂ ಸೌಲತ್ತುಗಳ ಬಗ್ಗೆ ಡಾ. ಲಕ್ಷ್ಮಣ ದಸ್ತಿಯವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಅಂಜುಮನ್ ಸಂಸ್ಥೆಯಿಂದ ಅ.6.…
ಕಲಬುರಗಿ: ಎಷ್ಟೋ ಜನರ ಜೀವನ ಭಜನೆಯಿಂದ ಬದಲಾಗಿಗೆ ಕಾಯಿಲೆ ಬಿದ್ದು ಹಾಸಿಗೆ ಹಿಡಿದ ವ್ಯಕ್ತಿ ಭಜನೆ ಮಾಡುವುದರಿಂದ ಎದ್ದು ಗುಣಮುಖರಾದ…