ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಕಲಬುರ್ಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಹೇಳಿದರು.

ಅವರು ನಗರದ ಹಳೇಶಹಾಬಾದನ ವೀರಭದ್ರೇಶ್ವರ ದೇವಸ್ಥಾನದಲ್ಲಿ ಆಯೋಜಿಸಲಾದ ನೂತನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.

ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಗ್ರಾಮೀಣ ಪ್ರದೇಶದ ರೈತರಿಗೆ ಹಾಗೂ ಬಡಜನರಿಗೆ ತುಂಬಾ ಅನುಕೂಲವಾಗಲಿದೆ.ಸಾಲ ಪಡೆದುಕೊಂಡು ಕೃಷಿ ಚಟುವಟಿಕೆಗೆ ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬಹುದು. ಸಹಕಾರ ಸಂಘಗಳ ಮುಖ್ಯಸ್ಥರು ಪಾರದರ್ಶಕವಾಗಿ ಆಡಳಿತ ನಡೆಸಿದಾಗ ಮಾತ್ರ ಸಹಕಾರಿ ಸಂಘಗಳು ಆರ್ಥಿಕವಾಗಿ ಬೆಳವಣಿಗೆ ಹೊಂದುವುದರ ಜತೆಗೆ μÉೀರುದಾರರಿಗೆ ಆದಾಯ ನೀಡಲು ಸಾಧ್ಯ.ಆ ನಿಟ್ಟಿನಲ್ಲಿ ಇಲ್ಲಿನ ಸಂಘದ ಉತ್ತಮವಾಗಿ ಬೆಳವಣಿಗೆ ಹೊಂದಲಿ ಎಂದು ಆಶಿಸುವೆ ಎಂದರು.

ಕಲಬುರ್ಗಿ ಮತ್ತು ಯಾದಗಿರಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಸೋಮಶೇಖರ್ ಗೋನಾಯಕ ಮಾತನಾಡಿ,
ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಬಡ ಹಾಗೂ ಮಧ್ಯಮವರ್ಗದ ಕೃಷಿಕರಿಗೆ ಆರ್ಥಿಕವಾಗಿ ಶಕ್ತಿ ತುಂಬುವ ಕೆಲಸ ಮಾಡುತ್ತಿವೆ. ಜಿಲ್ಲೆಯಲ್ಲಿ ಸಹಕಾರಿ ಸಂಘಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಸಹಕಾರಿ ಕ್ಷೇತ್ರ ವಾಣಿಜ್ಯ ಬ್ಯಾಂಕ್‍ಗಳಿಗಿಂತ ಭಿನ್ನವಾಗಿ ನಡೆಸುತ್ತಿವೆ. ಸಂಘದಿಂದ ಸಾಲ ಪಡೆದುಕೊಂಡು ಟ್ರ್ಯಾಕ್ಟರ್, ಹೈನುಗಾರಿಕೆ ಹಾಗೂ ನೀರಾವರಿ ಸೇರಿದಂತೆ ಇನ್ನೀತರ ಕೃಷಿ ಚಟುವಟಿಕೆಗೆ ಹಣ ಬಳಸಿಕೊಳ್ಳಬಹುದು.ರೈತರಿಗೆ ಸಾಕಷ್ಟು ಸೌಲಭ್ಯ ನೀಡಲಾಗುತ್ತಿದೆ.ಅವುಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡರೆ ಸಬಲರಾಗಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಶಿವೂಗೌಡ.ಎನ್.ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು.ಕಾಡಾ ಅಧ್ಯಕ್ಷ ಡಾ.ರಶೀದ್ ಮರ್ಚಂಟ್,ಬಿಜೆಪಿ ಮಾಜಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಕಲಬುರ್ಗಿ ಸಹಕಾರ ಸಂಘಗಳ ಜಂಟಿ ನಿಭಂದಕ ವಿಶ್ವನಾಥ ಎಮ್ ಮಲಕೂಡ, ನಗರಸಭೆ ಅಧ್ಯಕ್ಷೆ ಚಂಪಾಬಾಯಿ ರಾಜು ಮೇಸ್ತ್ರಿ, ಪ್ರಮುಖರಾದ ಗುರುರಾಜ ಮಾಲಿ ಪಾಟೀಲ್ , ಭೀಮರಾವ ಸೂಗುರ, ಅಬ್ದುಲ್ ರೆಹಮಾನ್ ಜಮಾದಾರ, ಮಹಾಂತಗೌಡ ಪಾಟೀಲ್ , ಮಲ್ಲಿಕಾರ್ಜುನ ವಾಲಿ, ಶಿವಕುಮಾರ ನಾಟೀಕಾರ, ಬಸಣ್ಣ ಹಡಪದ, ಬಸವಣ್ಣಪ್ಪ ಎ ವಾಲಿ, ಶರಣಪ್ಪ ಬಿ ಬುಗಶೆಟ್ಟಿ, ಶರಣಪ್ಪ ಎಸ್ ಕೊಡದೂರ, ಬಿಜೆಪಿ ಅಧ್ಯಕ್ಷ ನಿಂಗಣ್ಣ ಹುಳಗೊಳಕರ್, ಶಹಾಬಾದ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸದಾನಂದ ಕುಂಬಾರ ಸೇರಿದಂತೆ ಸಂಘದ ಸದಸ್ಯರು ಗಣ್ಯರು ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.

emedialine

Recent Posts

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

38 mins ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

2 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

2 hours ago

ಕಲಬುರಗಿ ಹಾಲಿಗೆ ಮಹಾರಾಷ್ಟ್ರ ದಲ್ಲಿ ಬೇಡಿಕೆ: ಸಚಿವ ಪ್ರಿಯಾಂಕ್ ಖರ್ಗೆ ಪ್ರಶಂಸೆ

ಕಲಬುರಗಿ: ಕಲಬುರಗಿ-ಯಾದಗಿರಿ-ಬೀದರ್‌ ಸಹಕಾರಿ ಹಾಲು ಒಕ್ಕೂಟದಲ್ಲಿ ಗುಣಮಟ್ಟದ ಹಾಲು ಉತ್ಪಾದನೆಯಾಗುತ್ತಿದ್ದು, ಇದಕ್ಕೆ ಭಾರಿ ಜನಮನ್ನಣೆ ದೊರೆತಿದ್ದು ಜಿಲ್ಲಾ ಉಸ್ತುವಾರಿ ಹಾಗೂ…

3 hours ago

ಆರೋಗ್ಯ ಮೇಳ: ಉಚಿತ ಆರೋಗ್ಯ ತಪಾಸಣೆ ಮಾಡಿಕೊಂಡ 1,227 ಜನ

ಕಲಬುರಗಿ: ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ…

3 hours ago

ಕಾಯಕದಲ್ಲಿನ ಮೇಲು ಕೀಳುಲುಗಳನ್ನು ಅಲ್ಲಗಳೆದವರು ಬಸವಾದಿ ಶರಣರು: ಪ್ರೊ. ಆರತಿ ಕಡಗoಚಿ

ಚಿಂಚೋಳಿ: 12 ನೆಯ ಶತಮಾನದ ಬಸವಾದಿ ಶರಣರು ಕಾಯಕದಲ್ಲಿನ ಅಸಮಾನತೆಯನ್ನು ತೊಡೆದು ಹಾಕಿ, ಸರ್ವ ಕಾಯಕ ವರ್ಗದವರಿಗೂ ಸಮಾನವಾದ ಗೌರವವನ್ನು…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420