ಆರೋಗ್ಯ ಮೇಳ: ಉಚಿತ ಆರೋಗ್ಯ ತಪಾಸಣೆ ಮಾಡಿಕೊಂಡ 1,227 ಜನ

ಕಲಬುರಗಿ: ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿಯಲ್ಲಿ ಜರುಗಿದ ಆರೋಗ್ಯ ಮೇಳದಲ್ಲಿ ಸುಮಾರು 1,227 ಜನ ಉಚಿತ ಆರೋಗ್ಯ ತಪಾಸಣೆಯ ಲಾಭ ಪಡೆದರು.

ವಿಶೇಷವಾಗಿ ಆವರಣದಲ್ಲಿರುವ ವಿವಿಧ ಇಲಾಖೆಯ ಸರ್ಕಾರಿ ನೌಕರರು, ಕಚೇರಿಗೆ ಆಗಮಿಸಿದ ಸಾರ್ವಜನಿಕರು ಆರೋಗ್ಯ ತಪಾಸಣೆ ಮಾಡಿಕೊಂಡರು. ಆರೋಗ್ಯ ಇಲಾಖೆಯ ನಗರ ಆರೋಗ್ಯ ಕೇಂದ್ರ, ನಮ್ಮ ಕ್ಲೀನಿಕ್, ಆಯುಷ್ಮತಿ ವಿಭಾಗ, ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಿಂದ ಮೂಳೆ ತಜ್ಞ, ಚರ್ಮ ತಜ್ಞ, ಗೈನಾಕೋಲಾಜಿಸ್ಟ್, ಜನರಲ್ ಫಿಶಿಷಿಯನ್, ಕ್ಯಾನ್ಸರ್ ತಜ್ಞ, ಮಕ್ಕಳ ತಜ್ಞ, ದಂತ ತಜ್ಞ, ಇ.ಎನ್.ಟಿ., ಕಣ್ಣು ವಿಭಾಗದ ತಜ್ಞ ವೈದ್ಯರು ಬಂದಂತಹ ರೋಗಿಗಳನ್ನು ಉಚಿತ ತಪಾಸಣೆ ಮಾಡಿದರು.

ಇದರಲ್ಲಿ ಸುಮಾರು 102 ಜನ ಲ್ಯಾಬ್ ಟೆಸ್ಟ್ ಸೇವೆ ಪಡೆದುಕೊಂಡರು. 130 ಜನರಿಗೆ ಕನ್ನಡಕ ಸ್ಥಳದಲಿಯೇ ವಿತರಿಸಲಾಯಿತು. ತಂಬಾಕು ಸೇವನೆ ಮಾಡುವ 49 ಜನರಿಗೆ ಸ್ಕೀನಿಂಗ್ ಮಾಡಲಾಯಿತು. ಇಲಾಖೆಯ ಐ.ಇ.ಸಿ. ಮಳಿಗೆಗೆ ಸುಮಾರು 214 ಜನ ಭೇಟಿ ನೀಡಿ ಆರೋಗ್ಯ ಇಲಾಖೆಯ ವಿವಿಧ ಯೋಜನೆಯ ಮಾಹಿತಿ ಪಡೆದುಕೊಂಡರು.

ಆರಂಭದಲ್ಲಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಆರೋಗ್ಯ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ವಿಶೇಷವಾಗಿ ಪ್ರತಿ ದಿನ ಒತ್ತಡದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಉಚಿತ ಆರೋಗ್ಯ ತಪಾಸಣೆ ಮಾಡಲು ಆರೋಗ್ಯ ಇಲಾಖೆಯ ಇಡೀ ತಂಡ ಇಂದಿಲ್ಲಿ ಆಗಮಿಸಿದ್ದು ಶ್ಲಾಘನೀಯ ಎಂದ ಅವರು, ನೌಕರರು ಮತ್ತು ಸಾರ್ವಜನಿಕರು ಆರೋಗ್ಯ ಮೇಳದ ಲಾಭ ಪಡೆಯಬೇಕೆಂದು ಕರೆ ನೀಡಿ ಮುಂದಿನ ದಿನದಲ್ಲಿ ಕಂದಾಯ ಇಲಾಖೆಗೆ ಪ್ರತ್ಯೇಕವಾಗಿ ಮತ್ತು ಸಾರ್ವಜನಿಕರಿಗೆ ಬೃಹತ್ ಪ್ರಮಾಣದಲ್ಲಿ ಆರೋಗ್ಯ ಮೇಳ ಹಮ್ಮಿಕೊಳ್ಳುವ ಯೋಚನೆ ಹೊಂದಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಸೆಪ್ಟೆಂಬರ್ 24 ರಿಂದ ನವೆಂಬರ್ 23ರ ವರಿಗೆ ಹಮ್ಮಿಕೊಂಡಿರುವ ತಂಬಾಕು ಮುಕ್ತ ಯುವ ಅಭಿಯಾನ 2.0 ಸಹಿ ಸಂಗ್ರಹ ಅಭಿಯಾನಕ್ಕೆ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ತಮ್ಮ ಹಸ್ತಾಕ್ಷರ ನೀಡುವ ಮೂಲಕ ಚಾಲನೆ ನೀಡಿದರು.

ಆರೋಗ್ಯ ಮೇಳದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಲಬುರಗಿ ವಿಭಾಗೀಯ ಸಹ ನಿರ್ದೇಶಕ ಡಾ. ಅಂಬಾರಾಯ ರುದ್ರವಾಡಿ, ಡಿ.ಎಚ್.ಓ. ಡಾ. ಶರಣಬಸಪ್ಪ ಕ್ಯಾತನಾಳ, ಜಿಮ್ಸ್ ನಿರ್ದೇಶಕ ಡಾ. ಉಮೇಶ್ ಎಸ್.ಆರ್., ಪ್ರಭಾರಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ವಿವೇಕಾನಂದ ರೆಡ್ಡಿ ಸೇರಿದಂತೆ ತಜ್ಞ ವೈದ್ಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

emedialine

Recent Posts

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

30 mins ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

2 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

2 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

2 hours ago

ಕಲಬುರಗಿ ಹಾಲಿಗೆ ಮಹಾರಾಷ್ಟ್ರ ದಲ್ಲಿ ಬೇಡಿಕೆ: ಸಚಿವ ಪ್ರಿಯಾಂಕ್ ಖರ್ಗೆ ಪ್ರಶಂಸೆ

ಕಲಬುರಗಿ: ಕಲಬುರಗಿ-ಯಾದಗಿರಿ-ಬೀದರ್‌ ಸಹಕಾರಿ ಹಾಲು ಒಕ್ಕೂಟದಲ್ಲಿ ಗುಣಮಟ್ಟದ ಹಾಲು ಉತ್ಪಾದನೆಯಾಗುತ್ತಿದ್ದು, ಇದಕ್ಕೆ ಭಾರಿ ಜನಮನ್ನಣೆ ದೊರೆತಿದ್ದು ಜಿಲ್ಲಾ ಉಸ್ತುವಾರಿ ಹಾಗೂ…

2 hours ago

ಕಾಯಕದಲ್ಲಿನ ಮೇಲು ಕೀಳುಲುಗಳನ್ನು ಅಲ್ಲಗಳೆದವರು ಬಸವಾದಿ ಶರಣರು: ಪ್ರೊ. ಆರತಿ ಕಡಗoಚಿ

ಚಿಂಚೋಳಿ: 12 ನೆಯ ಶತಮಾನದ ಬಸವಾದಿ ಶರಣರು ಕಾಯಕದಲ್ಲಿನ ಅಸಮಾನತೆಯನ್ನು ತೊಡೆದು ಹಾಕಿ, ಸರ್ವ ಕಾಯಕ ವರ್ಗದವರಿಗೂ ಸಮಾನವಾದ ಗೌರವವನ್ನು…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420