ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಖಾಡಾ ಅಧ್ಯಕ್ಷ ಡಾ.ರಶೀದ್ ಮರ್ಚಂಟ್ ಅವರಿಗೆ ಜಿಲ್ಲಾಧಿಕಾರಿ ಫೌಜಿಯಾ ತರುನ್ನುಮ್ ಅವರಿಗೆ ಮನವಿ ಸಲ್ಲಿಸಿದರು.

ನಗರವು ಆರ್ಥಿಕವಾಗಿ ಹಿಂದುಳಿದ ಪ್ರದೇಶವಾಗಿದ್ದು, ಇಲ್ಲಿ ಉದ್ಯೋಗದ ಮೂಲಗಳಲ್ಲಿ ಎರಡು ಕಂಪನಿಗಳಿದ್ದವು. ಈ ಎರಡು ಕಂಪನಿಗಳು ಮುಚ್ಚಿಹೋಗಿವೆ. ಅಲ್ಲದೇ ಕಲ್ಲು ಗಣಿಗಳು ವ್ಯವಹಾರವೂ ಸ್ಥಗಿತಗೊಂಡಿವೆ. ಇಲ್ಲಿನ ಜನರು ಉದ್ಯೋಗಕ್ಕಾಗಿ ಗುಲ್ಬರ್ಗ ಮತ್ತು ಇತರ ನಗರಗಳಿಗೆ ವಲಸೆ ಹೋಗಿದ್ದಾರೆ.ಉದ್ಯೋಗವಿಲ್ಲದೇ ಸಂಕಷ್ಟದಲ್ಲಿರುವ ಜನರಿಗೆ ನೀರಿನ ಬಾಕಿ ಬಡ್ಡಿ ಹಾಗೂ ಅಸಲು ಕಟ್ಟಲು ಸಾಧ್ಯವಾಗದು.

ಇಲ್ಲಿನ ಜನರಿಗೆ ರಸ್ತೆ, ಕುಡಿಯುವ ನೀರು, ಬೀದಿ ದೀಪ ಹಾಗೂ ಸ್ವಚ್ಛತೆ ನೀಡುವುದು ನಗರಸಭೆಯ ಜವಾಬ್ದಾರಿಯಾಗಿದೆ.ಅಲ್ಲದೇ ಈ ಹಿಂದೆ ನಗರಸಭೆ ವ್ಯವಸ್ಥೆಯಲ್ಲಿ ಸಾರ್ವಜನಿಕ ನಲ್ಲಿಗಳ ಮೂಲಕ ಬಡವರಿಗೆ ಉಚಿತವಾಗಿ ನೀರು ಪೂರೈಕೆ ಮಾಡುತ್ತಿತ್ತು.ನಗರಸಭೆ ಎಡಿಬಿ ಯೋಜನೆಯ ಮೂಲಕ ನೀರು ಒದಗಿಸುತ್ತಿದೆ.ಆದರೆ ಅದರ ಅಧಿಕ ಬಳಕೆ ಮಾಡುವುದರಿಂದ ಅಧಿಕ ಬಿಲ್ ಪಾವತಿಸಬೇಕಾಗುತ್ತದೆ ಎಂಬ ಅರಿವು ಕೂಡ ಅವರಿಗಿಲ್ಲ. ಹೀಗಾಗಿ ಪ್ರತಿ ತಿಂಗಳು ಬಡ್ಡಿ ಸಮೇತ ಬಿಲ್ ಬರುತ್ತಿದೆ.

ಇದರಿಂದ ಸಾರ್ವಜನಿಕರು ಸಂಕಷ್ಟ ತಲೆದೋರಿದೆ.ಈಗಾಗಲೇ ಕುಡಿಯುವ ನೀರಿನ ಬಡ್ಡಿ ಸಮೇತ ಸುಮಾರು 6 ಕೋಟಿ ಬಿಲ್ ಇದೆ.ಅದರಲ್ಲಿ ಸುಮಾರು 2 ಕೋಟಿ ಬಡ್ಡಿವಿರುವುದು ತಿಳಿದು ಬಂದಿದೆ.ಕೂಡಲೇ ನೀರಿನ ಕರ ವಸೂಲಾತಿಗೆ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಕಟ್ಟಿಕೊಳ್ಳುವ ಹಾಗೇ ಕ್ರಮಕೈಗೊಳ್ಳಬೇಕು.ಅಲ್ಲದೇ ಆಸ್ತಿ ತೆರಿಗೆಯ ಮೇಲಿನ ಬಡ್ಡಿ ಮನ್ನಾ ಮಾಡಿ ಒಂದೇ ಬಾರಿ ಸೆಟಲ್ಮೆಂಟ್ ಮೂಲಕ ತೆರಿಗೆ ಪವಾತಿಸಲು ಅವಕಾಶ ಕೊಟ್ಟರೇ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ತೆರಿಗೆ ಕಟ್ಟುತ್ತಾರೆ.ಅಲ್ಲದೇ ನಗರಸಭೆಯ ಆದಾಯಕ್ಕೂ ಅನುಕೂಲವಾಗುತ್ತದೆ.ಆ ನಿಟ್ಟಿನಲ್ಲಿ ಪುರಸಭೆ ಕಾಯ್ದೆ ಅಡಿಯಲ್ಲಿ ಅವಕಾಶವಿದೆ.

ನಿಯಮಾನುಸಾರವಾಗಿ ನಗರಸಭೆಯ ಸಾಮನ್ಯ ಸಭೆಯಲ್ಲಿ ಮಂಡಿಸಿ ಸಾರ್ವಜನಿಕರ ಹಾಗೂ ಆಡಳಿತ ಹಿತದೃಷ್ಟಿಯಿಂದ ಠರಾವು ಪಾಸು ಮಾಡುವುದರ ಮೂಲಕ ಸೂಕ್ತ ಕ್ರಮಕೈಗೊಂಡು ಅನುಕೂಲ ಮಾಡಿಕೊಡಬೇಕೆಂದು ಡಾ.ರಶೀದ ಮನವಿ ಮಾಡಿದ್ದಾರೆ.

emedialine

Recent Posts

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

33 mins ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

2 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

2 hours ago

ಕಲಬುರಗಿ ಹಾಲಿಗೆ ಮಹಾರಾಷ್ಟ್ರ ದಲ್ಲಿ ಬೇಡಿಕೆ: ಸಚಿವ ಪ್ರಿಯಾಂಕ್ ಖರ್ಗೆ ಪ್ರಶಂಸೆ

ಕಲಬುರಗಿ: ಕಲಬುರಗಿ-ಯಾದಗಿರಿ-ಬೀದರ್‌ ಸಹಕಾರಿ ಹಾಲು ಒಕ್ಕೂಟದಲ್ಲಿ ಗುಣಮಟ್ಟದ ಹಾಲು ಉತ್ಪಾದನೆಯಾಗುತ್ತಿದ್ದು, ಇದಕ್ಕೆ ಭಾರಿ ಜನಮನ್ನಣೆ ದೊರೆತಿದ್ದು ಜಿಲ್ಲಾ ಉಸ್ತುವಾರಿ ಹಾಗೂ…

3 hours ago

ಆರೋಗ್ಯ ಮೇಳ: ಉಚಿತ ಆರೋಗ್ಯ ತಪಾಸಣೆ ಮಾಡಿಕೊಂಡ 1,227 ಜನ

ಕಲಬುರಗಿ: ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ…

3 hours ago

ಕಾಯಕದಲ್ಲಿನ ಮೇಲು ಕೀಳುಲುಗಳನ್ನು ಅಲ್ಲಗಳೆದವರು ಬಸವಾದಿ ಶರಣರು: ಪ್ರೊ. ಆರತಿ ಕಡಗoಚಿ

ಚಿಂಚೋಳಿ: 12 ನೆಯ ಶತಮಾನದ ಬಸವಾದಿ ಶರಣರು ಕಾಯಕದಲ್ಲಿನ ಅಸಮಾನತೆಯನ್ನು ತೊಡೆದು ಹಾಕಿ, ಸರ್ವ ಕಾಯಕ ವರ್ಗದವರಿಗೂ ಸಮಾನವಾದ ಗೌರವವನ್ನು…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420