ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

0
42

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ ದೇವಸ್ಥಾನದ ಯತಿ ನರಸಿಂಹಾನಂದ್ ಸ್ವಾಮಿಯನ್ನು ತಕ್ಷಣ ಬಂಧಿಸಬೇಕೆಂದು ಪೊಲೀಸ್ ಠಾಣೆ ಎದುರು ದಿಢೀರ್ ಪ್ರತಿಭಟನೆ ನಡೆಸಿದರು.

ಶುಕ್ರವಾರ ರಾತ್ರಿ ನಗರದ ವಿವಿಧ ಮುಸ್ಲಿಂ ಮುಖಂಡರ ನೇತೃತ್ವದಲ್ಲಿ ಇಲ್ಲಿನ ರೋಜಾ ಪೊಲೀಸ್ ಠಾಣೆಯ ಎದುರು ಪ್ರತಿಭಟನಾ ಧರಣಿ ನಡೆಸಿ ಪ್ರವಾದಿ ಮುಹಮ್ಮದ್ ಅವರ ಬಗ್ಗೆ ತೀಕ್ಷವಾಗಿ ಟೀಕೆ ಮಾಡಿ ಪ್ರಚೋದನೆ ನೀಡಿರುವ ಸ್ವಾಮಿಯನ್ನು ತಕ್ಷಣ ಬಂಧಿಸಬೇಕೆಂದು ಆಗ್ರಹಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಕಲಬುರಗಿ ಮಹಾನಗರ ಪಾಲಿಕೆಯ ಸದಸ್ಯರು ಸೇರಿದಂತೆ ಹಲವು ಸಂಘಟನೆಯ ಮುಖಂಡರು ಮತ್ತು ಕಾರ್ಯಕರ್ತರು ಇದ್ದರು.

ಸೆಪ್ಟೆಂಬರ್ 29 ಗಾಜಿಯಾಬಾದ್‌ನ ಹಿಂದಿ ಭವನದಲ್ಲಿ ಅಮರ ಬಲಿದಾನಿ ಮೇಜರ್ ಆಸಾರಾಮ ವ್ಯಾಗ್ ಸೇವಾ ಸಂಸ್ಥಾನದಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಗಾಜಿಯಾಬಾದ್‌ನ ದಾಸ್ನಾ ದೇವಸ್ಥಾನದ ಯತಿ ನರಸಿಂಹಾನಂದ್ ದಸರಾ ಉತ್ಸವದಲ್ಲಿ ರಾವಣ ಸುಡುವ ಬದಲು ಪ್ರವಾದಿ ಮುಹಮ್ಮದ್ ಪ್ರತಿಕೃತಿ ದಹಿಸಿ ಎಂದು ಪ್ರಚೋದನಕಾರಿ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಭಾಷಣದ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here