ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ ನವರಾತ್ರಿ ಹಬ್ಬದ ಅಂಗವಾಗಿ ದಾಂಡಿಯಾ/ಗರ್ಬಾ ನೃತ್ಯ ಕಾರ್ಯಕ್ರಮ ಅತ್ಯಂತ ಸಂಭ್ರಮ ಸಡಗರದಿಂದ ಮಹಾವಿದ್ಯಾಲಯದ ಮಹಿಳಾ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರಿಂದ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಕಲಬುರಗಿ ನಗರದ ಖ್ಯಾತ ವೈದ್ಯರಾದ ಡಾ. ರೂಪಾ ಪಸ್ತಾಪುರ ಅವರು ದೀಪ ಬೆಳಗಿಸುವುದರ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಂಗಳೂರಿನ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯ ಯಲಹಂಕಾದ ಪ್ರಾಚಾರ್ಯರಾದ ಸಾವಿತ್ರಿ ಅವರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಾ ದಸರಾ ಹಬ್ಬ ಒಂಬತ್ತು ದಿನಗಳ ಕಾಲ ಆಚರಿಸುವ ಹಬ್ಬ. ನವರಾತ್ರಿಯಲ್ಲಿ ಒಂದು ದಿನ ವಿದ್ಯಾ ದೇವಿ ಸರಸ್ವತಿಯನ್ನು ಆರಾಧಿಸಲು ಮೀಸಲಿಡಲಾಗುತ್ತದೆ. ಸಮಸ್ತ ಬ್ರಹ್ಮಾಂಡದ ಜ್ಞಾನಸಂಪನ್ನೆಯಾದ ಸರಸ್ವತಿಯನ್ನು ಜ್ಞಾನವನ್ನು, ವಿದ್ಯೆಯನ್ನು ಅನುಗ್ರಹಿಸೆಂದು ಪ್ರಾರ್ಥಿಸುವುದು. ವಿದ್ಯೆಯಿಲ್ಲದೇ, ಜ್ಞಾನವಿಲ್ಲದೇ ಯಾವುದೇ ಕಾರ್ಯವೂ ಅಪೂರ್ಣ. ವಿದ್ಯಾ ವಿಹೀನಂ ಪಶುಸಮಾನಂ ಎಂಬAತೆ ವಿದ್ಯೆಗಾಗಿ ಅನವರತ ತುಡಿಯಬೇಕು, ಶ್ರಮಿಸಬೇಕು. ಮಹಾವಿದ್ಯಾಲಯವು ವಿದ್ಯಾರ್ಥಿನಿಯರಿಗೆ ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರೀಯವಾಗಿ ಭಾಗವಹಿಸಿ ಅವರ ಸುಂದರ ವ್ಯಕ್ತಿತ್ವವನ್ನು ಉತ್ತಮ ಸಂಸ್ಕಾರದೊAದಿಗೆ ರೂಪಿಸಿಕೊಳ್ಳುಲು ಸೂಕ್ತವಾದ ವೇದಿಕೆಯನ್ನು ಒದಗಿಸಿ ಮಹಿಳಾ ಸಬಲೀಕರಣದಲ್ಲಿ ತನ್ನದೆ ಆದ ರೀತಿಯಲ್ಲಿ ಕೊಡುಗೆಯನ್ನು ನೀಡುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಮಹಾವಿದ್ಯಾಲಯದ ಉಪ-ಪ್ರಾಚಾರ್ಯರಾದ ಪ್ರೊ. ವೀಣಾ ಹೊನುಗಂಟಿಕರ್ ಅವರು ವಹಿಸಿಕೊಂಡು ಜ್ಞಾನಮಾತೆ, ವೀಣಾಪಾಣಿ ಮಹಾಸರಸ್ವತಿಯ ರೂಪ ಅದರಲ್ಲಿ ಪ್ರಮುಖವಾದುದು. ನವರಾತ್ರಿಯ ಸಂದರ್ಭದಲ್ಲಿ ಶಾರದಾ ಪೂಜೆಗೆ ವಿಶೇಷ ಮಹತ್ವ ಹೀಗಾಗಿ ಮಹಾವಿದ್ಯಾಲಯದಲ್ಲಿ ನವರಾತ್ರಿಯ ಅಂಗವಾಗಿ ಪ್ರತಿವರ್ಷದಂತೆ ಗರ್ಬಾ, ದಾಂಡಿಯಾ ನೃತ್ಯ ವಿದ್ಯಾರ್ಥಿನಿಯರು ಮತ್ತು ಮಹಿಳಾ ಸಿಬ್ಬಂದಿಗಳಿಗಾಗಿ ಆಯೋಜಿಸುವ ಮೂಲಕ ನಾಡಹಬ್ಬದ ವಿಶೇಷತೆಯನ್ನು ಉತ್ಸಾಹಪೂರ್ವಕವಾಗಿ ಮಹಾವಿದ್ಯಾಲಯದಲ್ಲಿ ಆಚರಿಸಲಾಗುತ್ತಿದೆ ಎಂದು ಮಾತನಾಡಿದರು. ನಂತರ ದಾಂಡಿಯಾ ನೃತ್ಯಕ್ಕೆ ಸಖತ್ ಸ್ಟೆಪ್ ಹಾಕುವ ಮೂಲಕ ವಿದ್ಯಾರ್ಥಿನಿಯರು ಮತ್ತು ಮಹಾವಿದ್ಯಾಲಯದ ಮಹಿಳಾ ಸಿಬ್ಬಂದಿ ವರ್ಗದವರು ನವರಾತ್ರಿಯನ್ನು ಸಂಭ್ರಮಿಸಿದರು

ಈ ಕಾರ್ಯಕ್ರಮದಲ್ಲಿ ಎಚ್ ಕೆ ಇ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಉಷಾ ಪಾಟೀಲ, ಉಪನ್ಯಾಸಕರಾದ ಸವಿತಾ ಪಾಟೀಲ, ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಸಲಹೆಗಾರರಾದ ಶೈಲಜಾ ನಾಕೇದಾರ, ಸಿಬ್ಬಂದಿ ಕಾರ್ಯದರ್ಶಿಗಳಾದ ರಷ್ಮೀ ಸ್ವಾಮಿ ಉಪನ್ಯಾಸಕರಾದ ಡಾ. ನಯನತಾರ ಆಸ್ಪಲ್ಲಿ,  ಡಾ. ಕಾಶೀಬಾಯಿ ಬೋಗಶೆಟ್ಟಿ, ಜ್ಯೋತಿ ಪಾಟೀಲ, ಕನ್ಯಾಕುಮಾರಿ, ಅನಿತಾ ಪಾಟೀಲ, ಮತಿ. ಮಾನಸಾ, ಸಂತೋಷಿ ಕೆ, ಪ್ರೀಯಾ ನಿಗ್ಗುಡಗಿ, . ಬಸವರಾಜ ಗೋಣಿ,  ಗುಲಿಂಗಯ್ಯಾ ಸ್ವಾಮಿ,  ಬೋಧಕೇತರ ಸಿಬ್ಬಂದಿಗಳಾದ  ಸಿದ್ದಲಿಂಗಯ್ಯಾ ಹೊಸಮನಿ, ಬಸ್ಸಮ್ಮ, ಲಕ್ಷಿö್ಮ ಚಂದ್ರಕಾAತ,  ರಾಣೇಶ  ಮತ್ತಿತರು ಹಾಗೂ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

ಉಪನ್ಯಾಸಕರಾದ ರಷ್ಮೀ ಸ್ವಾಮಿ ಅವರು ಅತಿಥಿಗಳನ್ನು ಪರಿಚಯಿಸಿ ಎಲ್ಲರನ್ನು ಸ್ವಾಗತಿಸಿದರು ಮತ್ತು ಮಹಾನಂದಾ ಗೊಬ್ಬುರ ಅವರು ವಂದಿಸಿದರು. ಉಪನ್ಯಾಸಕರಾದ ಶೈಲಜಾ ನಾಕೇದಾರ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ನಿರುಪಿಸಿದರು ಎಂದು ಪ್ರಾಚಾರ್ಯರಾದÀ ಡಾ. ಮೋಹನರಾಜ ಪತ್ತಾರ ಅವರು ಪತ್ರಿಕಾ ಪ್ರಕಟಣೆಗಾಗಿ ತಿಳಿಸಿದ್ದಾರೆ.

emedialine

Recent Posts

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

8 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

20 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

20 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

20 hours ago

ಕಲಬುರಗಿ ಹಾಲಿಗೆ ಮಹಾರಾಷ್ಟ್ರ ದಲ್ಲಿ ಬೇಡಿಕೆ: ಸಚಿವ ಪ್ರಿಯಾಂಕ್ ಖರ್ಗೆ ಪ್ರಶಂಸೆ

ಕಲಬುರಗಿ: ಕಲಬುರಗಿ-ಯಾದಗಿರಿ-ಬೀದರ್‌ ಸಹಕಾರಿ ಹಾಲು ಒಕ್ಕೂಟದಲ್ಲಿ ಗುಣಮಟ್ಟದ ಹಾಲು ಉತ್ಪಾದನೆಯಾಗುತ್ತಿದ್ದು, ಇದಕ್ಕೆ ಭಾರಿ ಜನಮನ್ನಣೆ ದೊರೆತಿದ್ದು ಜಿಲ್ಲಾ ಉಸ್ತುವಾರಿ ಹಾಗೂ…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420