ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ ದಾಸ್ತಾನು ಕುರಿತು ಮಾಹಿತಿ ಬಂದ ತಕ್ಷಣವೆ ಇಲಾಖೆಯ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶಿಲಿಸಿದಾಗ ಅದು ಅಕ್ರಮ ಅಕ್ಕಿ ಅಲ್ಲ, ಬದಲಾಗಿ ಕಾನೂನು ಬದ್ಧವಾಗಿಯೇ ಅಕ್ಕಿ ಖರೀದಿಸಿದ ದಾಖಲೆಗಳು ಹಾಜರುಪಡಿಸಿದ ಕಾರಣ ಪ್ರಕರಣ ದಾಖಲಿಸಿಲ್ಲ. ಮಣಿಕಂಠ ರಾಠೋಡ ಅವರ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಆಹಾರ ಇಲಾಖೆ ಉಪನಿರ್ದೇಶಕ ಭೀಮರಾಯ ಸ್ಪಷ್ಟನೆ ನೀಡಿದ್ದಾರೆ.
ಅ.2 ರಂದು ರಾತ್ರಿ 9 ಗಂಟೆ ಸುಮಾರಿಗೆ ಮಹೇಶ ಎಂಬ ವ್ಯಕ್ತಿ ದೂರವಾಣಿ ಕರೆ ಮಾಡಿ ಕಲಬುರಗಿ ಹೊರವಲಯದ ನಂದೂರು ಕೈಗಾರಿಕಾ ವಸಾಹತು ಪ್ರದೇಶದ ದಾಲ್ಮಿಲ್ ಒಂದರಲ್ಲಿ ಸರ್ಕಾರದ ವಿವಿಧ ಯೋಜನೆಯಡಿ ಹಾಗೂ ಸಾರ್ವಜನಿಕ ವಿತರಣಾ ವ್ಯವಸ್ಥೆಗೆ ಸೇರಿದ ಅಕ್ಕಿ ಅಕ್ರಮ ದಾಸ್ತಾನು ಮಾಡಿರುವುದಾಗಿ ಮಾಹಿತಿ ನೀಡಿದ ತಕ್ಷಣವೇ ಇಲಾಖೆಯ ಆಹಾರ ನಿರೀಕ್ಷಕರಿಗೆ ಈ ಕುರಿತು ಸ್ಥಳಕ್ಕೆ ಭೇಟಿ ನೀಡುವಂತೆ ಸೂಚನೆ ನೀಡಲಾಗಿತ್ತು.
ಅದರಂತೆ ಆಹಾರ ನಿರೀಕ್ಷಕರು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯ ಪಿ.ಎಸ್.ಐ ಹಾಗೂ ಇತರೆ ಪೊಲೀಸ್ ಸಿಬ್ಬಂದಿಯವರೊಂದಿಗೆ ನಂದೂರು ಕೈಗಾರಿಕಾ ವಸಾಹತು ಪ್ರದೇಶದಲ್ಲಿನ ಬಸವರಾಜ ವಿ.ಪಾಟೀಲ ಅವರಿಗೆ ಸೇರಿದ ನ್ಯಾಷನಲ್ ಪಲ್ಸಸ್ ಇಂಡಸ್ಟ್ರೀಸ್ ದಾಲ್ ಮಿಲ್ ಗೆ ಭೇಟಿ ನೀಡಿ ಪರಿಶೀಲಿಸಿದಾಗ ಅಂದಾಜು 280 ಕ್ವಿಂ. ತೊಗರಿ ಬೇಳೆ, ಅಂದಾಜು 50 ಕೆ.ಜಿ. ತೂಕವುಳ್ಳ 15 ಪ್ಲಾಸ್ಟಿಕ್ ಚೀಲಗಳು (7.50 ಕ್ವಿಂಟಾಲ್) ಅಕ್ಕಿ ಮಾತ್ರ ದಾಸ್ತಾನಿರುವುದು ಕಂಡುಬಂದಿದೆ.
ಈ ಕುರಿತು ಬಸವರಾಜ ವಿ. ಪಾಟೀಲ್ ರವರನ್ನು ವಿಚಾರಿಸಿದಾಗ ತಮ್ಮ ಪತ್ನಿ ನಿರ್ಮಲಾ ಹಾಗೂ ಸೊಸೆ ಸಂಗೀತಾ ಅವರ ಒಡೆತನದ ಶ್ರೀ ಶಿವಪಾರ್ವತಿ ಇಂಡಸ್ಟ್ರೀಸ್ ಸಾರ್ವಜನಿಕ ವಿತರಣಾ ಪದ್ಧತಿಯಡಿ ಕಲಬುರಗಿ ಜಿಲ್ಲೆಗೆ ಅಕ್ಕಿ ಸರಬರಾಜು ಮಾಡಲು ಕೇಂದ್ರೀಯ ಭಂಢಾರ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು, ಅದರಂತೆ ಮುಕ್ತ ಮಾರುಕಟ್ಟೆಯ ಏಜೆನ್ಸಿಗಳಾದ ತೆಲಂಗಾಣಾದ ರಂಗಾರೆಡ್ಡಿ ಜಿಲ್ಲೆಯ ಹರಿಕೇಶ್ ಎಂಟರ್ಪ್ರೈಸಸ್, ಬೀದರಿನ ಎಂ.ಕೆ. ಟ್ರೇಡಿಂಗ್ ಕಂಪನಿ, ಹುಮನಾಬಾದಿನ ಜೈ ಭವಾನಿ ಟ್ರೇಡರ್ಸ್ ಹಾಗೂ ಮಹಾರಾಷ್ಟ್ರದ ಶ್ರೀ ಗಜಾನನ ಆಗ್ರೋ ಏಜೆನ್ಸಿಸ್ ಸೇರಿದಂತೆ ಇನ್ನಿತರೆ ಏಜೆನ್ಸಿಗಳಿಂದ ಸುಮಾರು 22,629 ಕ್ವಿಂಟಾಲ್ ಅಕ್ಕಿ ಖರೀದಿ ಮಾಡಲಾಗಿದೆ ಎಂದು ತಿಳಿಸಿ, ಖರೀದಿಗೆ ಸಂಬಂಧಿಸಿದ ದಾಖಲೆಗಳು ಹಾಗೂ ಕೇಂದ್ರೀಯ ಭಂಡಾರ ಸಂಸ್ಥೆಯೊಂದಿಗೆ ಮಾಡಿಕೊಂಡ ಒಡಂಬಡಿಕೆ ಪ್ರತಿ, ದಾಲ್ ಮಿಲ್ ಮಾಲೀಕತ್ವಕ್ಕೆ ಸಂಬಂಧಿಸಿದ ದಾಖಲೆಗಳು ಹಾಗೂ ಅಕ್ಕಿ ಸರಬರಾಜು ಮಾಡಿರುವುದಕ್ಕೆ ಸಂಬಂಧಿಸಿದ ದಾಖಲೆಗಳನ್ನು ತನಿಖಾ ಸಮಯದಲ್ಲಿ ಹಾಜರು ಪಡಿಸಿರುವ ಕಾರಣ ಇದು ಅಕ್ರಮ ಅಕ್ಕಿ ಅಲ್ಲ ಎಂಬ ನಿರ್ಧಾರಕ್ಕೆ ಬರಲಾಗಿದೆ.
ಆದರೆ ಮಣಿಕಂಠ ರಾಠೋಡ ಎಂಬುವವರು ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿ ಅಕ್ರಮವಾಗಿ ಅಕ್ಕಿ ದಾಸ್ತಾನು ಬಗ್ಗೆ ಮಾಹಿತಿ ನೀಡಿದ್ದಾಗ್ಯೂ ಆಹಾರ ಇಲಾಖೆ ಯಾವುದೇ ಕ್ರಮಕೈಗೊಂಡಿರುವುದಿಲ್ಲ ಹಾಗೂ ಅಕ್ಕಿ ಬಿಡುವಂತೆ ವೈದ್ಯಕೀಯ ಶಿಕ್ಷಣ ಸಚಿವರ ಆಪ್ತ ಸಹಾಯಕರು ಕರೆ ಮಾಡಿದ್ದಾರೆಂಬ ಹೇಳಿಕೆ ಪತ್ರಿಕೆಯಲ್ಲಿ ಸುದ್ದಿ ಪ್ರಕಟವಾಗಿದ್ದು, ಅದು ಸತ್ಯಕ್ಕೆ ದೂರವಾಗಿದೆ. ಸಚಿವರ ಅಪ್ತ ಸಹಾಯಕರಾಗಲಿ ಅಥವಾ ಇತರೆ ಯಾವುದೇ ಅಧಿಕಾರಿಗಳು ಕರೆ ಮಾಡಿಲ್ಲ ಹಾಗೂ ಇಲಾಖೆಯಿಂದ ಯಾವುದೇ ಲೋಪವಾಗಿಲ್ಲ ಎಂದು ಅವರು ಸ್ಪಷ್ಟನೆ ಪಡಿಸಿದ್ದಾರೆ.
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…