ಅ.8 ರಂದು ದಸರಾ ಕಾವ್ಯ ಸಂಭ್ರಮ

0
14

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಅ.8 ರಂದು ಇಳಿಹೊತ್ತು 4.15 ಕ್ಕೆ ನಗರದ ಕನ್ನಡ ಭವನದ ಸಾಹಿತ್ಯ ಮಂಟಪದಲ್ಲಿ ದಸರಾ ಕಾವ್ಯ ಸಂಭ್ರಮ-2024 ನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.

ಕವಿಗಳಾದವರು ಸಮಕಾಲೀನ ವಿಷಯಗಳ ಮೇಲೆ ಕಾವ್ಯ ರಚನೆ ಮಾಡುವ ಮೂಲಕ ಸಾಮಾಜಿಕ ಹೊಣೆಗಾರಿಕೆಯನ್ನು ಹೊಂದಬೇಕಾಗಿದೆ. ಜಿಲ್ಲೆಯಲ್ಲಿ ಸಾಂಸ್ಕøತಿಕ ಪರಿಸರದ ನಿರ್ಮಾಣದತ್ತ ಪರಿಷತ್ತು ಹೊಸ ಹೊಸ ಹೆಜ್ಜೆ ಇಡುತ್ತಲಿದೆ ಎಂದು ಅವರು ವಿವರಿಸಿದರು.

Contact Your\'s Advertisement; 9902492681

ಹಿರಿಯ ಸಾಹಿತಿ ಸಿದ್ಧರಾಮ ಪೊಲೀಸ್ ಪಾಟೀಲ ಅವರು ಸಂಭ್ರಮಕ್ಕೆ ಚಾಲನೆ ನೀಡಲಿದ್ದು, ಹಿರಿಯ ಸಾಹಿತಿ ಡಾ. ಸುರೇಶ ಜಾಧವ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಮಾಜಿಕ ಚಿಂತಕಿ ಉಮಾ ಗಚ್ಚಿನಮನಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಸುಮಾರು ಇಪ್ಪತ್ತೈದಕ್ಕೂ ಹೆಚ್ಚು ಕವಿಗಳು ತಮ್ಮ ಸ್ವ ರಚಿತ ಕವನ ವಾಚಿಸಲಿದ್ದಾರೆ ಎಂದು ಜಿಲ್ಲಾ ಕಸಾಪ ದ ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್ ಧನ್ನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here