ಗುಡ್ಡಾಪುರ ದಾನಮ್ಮ ದೇವಿಯ ತೊಟ್ಟಿಲ

ಕಲಬುರಗಿ: ಶಿವಯೋಗ ಸಾಧನೆ, ದಾಸೋಹ, ಕಾಯಕ ನಿಷ್ಠೆ, ಸತ್ಯ- ಧರ್ಮ-ನ್ಯಾಯ ಮೊದಲಾದ ಅಷ್ಟಗುಣಗಳನ್ನು ಅಳವಡಿಸಿಕೊಂಡು ಬದುಕಿದ ಶರಣೆ ಗುಡ್ಡಾಪೂರ ದಾನಮ್ಮ. 12 ನೇ ಶತಮಾನದಲ್ಲಿ ಧರ್ಮಜಾಗೃತಿಗಾಗಿ ದೇಶಸಂಚಾರ ಮಾಡುತ್ತ ಲೋಕಕಲ್ಯಾಣಕ್ಕಾಗಿ ಪಾರಮಾರ್ಥದ ಹಾದಿ ನಡೆದವಳು ಗುಡ್ಡಾಪುರ ದಾನಮ್ಮ ಎಂದು ಪುರಾಣ ಕೀರ್ತನ ಕಾರ್ಯರಾದ ಸುಂಟನೂರ ಸಂಸ್ಥಾನ ಹಿರೇಮಠದ ಪೂಜ್ಯ ಶ್ರೀ ಬಂಡಯ್ಯ ಸ್ವಾಮೀಜಿ ಅವರು ನುಡಿದರು.

ಕಮಲಾಪುರ ತಾಲೂಕಿನ ಓಕುಳಿ ಗ್ರಾಮದಲ್ಲಿ ನವರಾತ್ರಿ ಅಂಗವಾಗಿ ಜರುಗುತ್ತಿರುವ ಗುಡ್ಡಾಪುರ ದಾನಮ್ಮ ತಾಯಿಯ ಪುರಾಣ ಪ್ರವಚನದಲ್ಲಿ ಕಾರ್ಯಕ್ರಮದಲ್ಲಿ ತೊಟ್ಟಿಲು ಕಾರ್ಯಕ್ರಮದ ಕುರಿತು ದಾನಮ್ಮದೇವಿ ಹುಟ್ಟಿದ್ದು ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಉಮರಾಣಿ ಎಂಬ ಗ್ರಾಮದಲ್ಲಿ. ಉಮರಾಣಿಯ ಅಕ್ಕಸಾಲಿಗ ಮನೆತನದ ಅನಂತರಾಯ ಮತ್ತು ಶಿರಸಮ್ಮ ದಂಪತಿಗಳಿಗೆ ಬಹಳ ಕಾಲ ಮಕ್ಕಳಾಗಿರಲಿಲ್ಲ.

ಈ ಕುರಿತಾಗಿ ದಂಪತಿಗಳು ವೀರಮಲ್ಲಯ್ಯನ ದೇವಸ್ಥಾನಕ್ಕೆ ಹೋಗಿ ಶೃದ್ಧಾಭಕ್ತಿಗಳಿಂದ ಬೇಡಿಕೊಳ್ಳುವರು. ಅವರ ಕನಸಿನಲ್ಲಿ ಬಂದ ಮಲ್ಲಯ್ಯ “ನಿಮಗೆ ಸಾಕ್ಷಾತ್ ಪಾರ್ವತಿಯಂಥ ಮಗು ಜನಿಸುವುದು. ಅವಳು ಸಾಮಾನ್ಯ ಮಕ್ಕಳಂತೆ ಅಳುವುದಿಲ್ಲ ಹಾಗೂ ಲಿಂಗಧಾರಣೆಯಾಗುವವರೆಗೂ ಹಾಲನ್ನಾಗಲಿ ನೀರನ್ನಾಗಲಿ ಸೇವಿಸುವುದಿಲ್ಲ” ಎಂದು ಹೇಳಿದಂತೆ ಕನಸು ಕಾಣಲು ಮುಂದೆ ಕ್ರಿ.ಶ.1146 ರಲ್ಲಿ ತಮಗೆ ಜನಿಸಿದ ಹೆಣ್ಣುಮಗು ವೀರಮಲ್ಲಯ್ಯನ ಮಾತಿನಂತೆ ನಡೆಯತೊಡಗಿತು. ಆಗ ಆ ಮಗುವಿಗೆ ಲಿಂಗಧಾರಣೆ ಮಾಡಿಸುವರು. ಸಂಗಮೇಶ ಗುರುಗಳಿಂದ “ಲಿಂಗಮ್ಮ”ಎಂದು ಹೆಸರನ್ನು ಇಟ್ಟರು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಖ್ಯಾತ ಸಂಗೀತ ಕಲಾವಿದರಾದ ಮಲ್ಲಿಕಾರ್ಜುನ ಸ್ವಾಮಿ ಬೀದರ್ ತಬಲ ವಾದಕರಾದ ಮಲ್ಲಿಕಾರ್ಜುನ್ ವರನಾಳ ಸಂಗೀತ ಸೇವೆ ಸಲ್ಲಿಸಿದರು, ಓಕುಳಿ ಗ್ರಾಮದ ತಾಯಿ ಬಳಗ ಜೋಗುಳ ಗೀತೆಗಳನ್ನು ಹಾಡಿದರು, ಗ್ರಾಮದ ಅನೇಕ ಸದ್ಭಕ್ತ ಪುರಾಣದೊಳಗ ಭಾಗವಹಿಸಿದ್ದರು ಎಂದು ಸಮಿತಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ರೈತರಿಗೆ ಪಲ್ಸ್ ಮ್ಯಾಜಿಕ್ ವಿತರಣೆ

ಕಲಬುರಗಿ: ಕೃಷಿ ವಿಜ್ಞಾನ ಕೇಂದ್ರ, ರದ್ದೇವಾಡ್ಗಿಯಲ್ಲಿ ಪಿಎಮ್ ಕಿಸಾನ್ ಸಮ್ಮಾನ್ ನಿಧಿ 18ನೇ ಕಂತು ಬಿಡುಗಡೆ ಕಾರ್ಯಕ್ರಮದ ನೇರ ಪ್ರಸಾರದ…

3 hours ago

ಅ.8 ರಂದು ದಸರಾ ಕಾವ್ಯ ಸಂಭ್ರಮ

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಅ.8 ರಂದು ಇಳಿಹೊತ್ತು 4.15 ಕ್ಕೆ ನಗರದ ಕನ್ನಡ ಭವನದ ಸಾಹಿತ್ಯ…

3 hours ago

ಕೃಷಿ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಲಬುರಗಿ: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರಿನ 16ನೇ ಸಂಸ್ಥಾಪನಾ ದಿನಾಚರಣೆಯನ್ನು 22ನೇ ನವೆಂಬರ್ 2024 ರಂದು ರಾಯಚೂರು ಮುಖ್ಯ ಆವರಣದಲ್ಲಿ…

3 hours ago

ಇಂದಿನಿಂದ ಸೂಗೂರ (ಕೆ ) ನವರಾತ್ರಿ ಬ್ರಹ್ಮೋತ್ಸವ

ಕಾಳಗಿ : ಕಲ್ಯಾಣ ಕರ್ನಾಟಕದ ತಿರುಪತಿ ಎಂದೇ ಪ್ರಸಿದ್ಧಿ ಪಡೆದಿರುವ ಸುವರ್ಣ ಗಿರಿ ಕಾಳಗಿ ತಾಲೂಕಿನ ಸೂಗೂರ (ಕೆ )…

8 hours ago

ಕಾಳಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ಕಲಬುರಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ಕಾಳಗಿ ತಾಲೂಕು ಪ್ರವಾಸಿ ಮಂದಿರದಲ್ಲಿ ಹವ್ಯಾಸೀಕಲಾ ಬಳಗದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದಿವ್ಯ…

9 hours ago

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420