ಕಲಬುರಗಿ: ಕೃಷಿ ವಿಜ್ಞಾನ ಕೇಂದ್ರ, ರದ್ದೇವಾಡ್ಗಿಯಲ್ಲಿ ಪಿಎಮ್ ಕಿಸಾನ್ ಸಮ್ಮಾನ್ ನಿಧಿ 18ನೇ ಕಂತು ಬಿಡುಗಡೆ ಕಾರ್ಯಕ್ರಮದ ನೇರ ಪ್ರಸಾರದ ವಿಕ್ಷಣೆ ಹಾಗೂ ಮಾದರಿ ದ್ವೀದಳ ಧಾನ್ಯಗಳ ಗ್ರಾಮ ಯೋಜನೆ ಅಡಿಯಲ್ಲಿ ಫಲಾನುಭವಿ ರೈತರಿಗೆ ಪಲ್ಸ್ ಮ್ಯಾಜಿಕ್ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರಾರಂಭದಲ್ಲಿ ಸಂಜೀವ್‌ಕುಮಾರ್ ಪಾಟೀಲ್ ತಾಂತ್ರಿಕ ಅಧಿಕಾರಿರವರು ಅತಿಥಿ ಗಣ್ಯರನ್ನು ವೇದಿಕೆಗೆ ಸ್ವಾಗತಿಸಿದರು ಹಾಗೂ ಕಾರ್ಯಕ್ರಮದ ನಿರೂಪಣೆ ಮಾಡಿದರು.

ಕೇಂದ್ರದ ಮುಖ್ಯಸ್ಥರಾದ ಡಾ.ಪಿ.ವಾಸುದೇವ ನಾಯ್ಕ, ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಕಾರ್ಯಕ್ರಮದ ಉದ್ದೇಶದ ಬಗ್ಗೆ ತಿಳಿಸಿ, ದೇಶದ ಅಭಿವೃದ್ಧಿಯಲ್ಲಿ ರೈತರ ಪಾತ್ರ ಬಹುಮುಖ್ಯವಾದದ್ದು ಆದ್ದರಿಂದ ದೇಶದ ಪ್ರಧಾನಿಯವರು ರೈತರ ಏಳಿಗೆಗಾಗಿ 18ನೇ ಕಂತಿನ ಹಣ ಬಿಡುಗಡೆ ಮಾಡುತ್ತಿರುವುದು ಒಂದು ಸಂತಸದ ವಿಚಾರವೆಂದು ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಡಾ. ಚೇತನ್, ಟಿ. ತೋಟಗಾರಿಕೆ ವಿಜ್ಞಾನಿ, ಮಾದರಿ ದ್ವಿದಳ ಧಾನ್ಯಗಳ ಗ್ರಾಮ ಯೋಜನೆಯ ಉದ್ದೇಶಗಳನ್ನು ತಿಳಿಸುತ್ತಾ ಮತ್ತು ಅದರ ಸದುಪಯೋಗಗಳನ್ನು ಗ್ರಾಮದ ರೈತರು ಪಡೆಯಬೇಕೆಂದು ತಿಳಿಸಿದರು. ತದನಂತರ ಡಾ.ಮಲ್ಲಪ್ಪ ವಿಜ್ಞಾನಿ (ಬೇಸಾಯಶಾಸ್ತ್ರ) ದ್ವಿದಳ ಮತ್ತು ಎಣ್ಣೆಕಾಳು ಬೆಳೆಗಳ ಸಮಗ್ರ ನಿರ್ವಹಣೆ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀಮತಿ ಅನೂಸೂಯ ಹೂಗಾರ ಉಪ ಕೃಷಿ ನಿರ್ದೆಶಕರು ಜಿಲ್ಲೆ ಇವರು ಕೃಷಿ ಇಲಾಖೆಯ ಯೋಜನೆಗಳನ್ನು ಸಂಕ್ಷಿಪ್ತವಾಗಿ ವಿವರಿಸಿ ಎಲ್ಲ ರೈತರು ಅದರ ಸದುಪಯೋಗ ಪಡೆಯಬೇಕೆಂದು ಮನವರಿಕೆ ಮಾಡಿಕೊಟ್ಟರು. ಇನ್ನೋರ್ವ ಅಥಿತಿಗಳಾದ ಸಿದ್ದಲಿಂಗಯ್ಯಾ ಹೀರೆಮಠ ಅಧ್ಯಕ್ಷರು ಗ್ರಾಮ ಪಂಚಾಯತ್ ದೇಸಣಗಿ ಇವರು ರೈತರ ಏಳಿಗೆಯಲ್ಲಿ ಕೃಷಿ ವಿಜ್ಞಾನ ಕೇಂದ್ರದ ಕಾರ್ಯವೈಖರಿ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.

ತದನಂತರ ಫಲಾನಭವಿ ರೈತರಿಗೆ ಪಲ್ಸ್ ಮ್ಯಾಜಿಕ್ ವಿತರಿಸಿದರು. ಕಾರ್ಯಕ್ರಮದಲ್ಲಿ ಭಾಗಣ್ಣ ದೇಸಾಯಿ ಎಸ್ ಡಿ ಎಮ್ ಸಿ ಅಧ್ಯಕ್ಷರು ದೇಸಣಗಿ ಗ್ರಾಮ, ಎನ್ ಆರ್ ಎಲ್ ಎಮ್ ಸಂಯೋಜಕರಾದ ಅಶ್ವಿನಿ, ಜೇರಟಗಿ ರೈತ ಉತ್ದಾದಕ ಸಂಸ್ತೆಯ ಸಿಇಒ ಶರಣಬಸಪ್ಪ ನಾಗಾವಿ, ತಾಲ್ಲೂಕಿನ ಕೃಷಿ ಸಖಿಯರು, ವಿವಿಧÀ ಗ್ರಾಮಗಳ ರೈತರು ಮತ್ತು ಯುವಕರು, ಮತ್ತು ತಾಂತ್ರಿಕೇತರ ಸಿಬ್ಬಂದಿಗಳು ಇದಕ್ಕೆ ಸಾಕ್ಷಿಯಾಗಿದ್ದರು ಕೊನೆಯಲ್ಲಿ ಡಾ. ಚಂದ್ರಕಾಂತ ವಿಜ್ಞಾನಿ (ಮಣ್ಣು ವಿಜ್ಞಾನ) ವಂದನಾರ್ಪಣೆ ಸಲ್ಲಿಸಿದರು.

emedialine

Recent Posts

ಗುಡ್ಡಾಪುರ ದಾನಮ್ಮ ದೇವಿಯ ತೊಟ್ಟಿಲ

ಕಲಬುರಗಿ: ಶಿವಯೋಗ ಸಾಧನೆ, ದಾಸೋಹ, ಕಾಯಕ ನಿಷ್ಠೆ, ಸತ್ಯ- ಧರ್ಮ-ನ್ಯಾಯ ಮೊದಲಾದ ಅಷ್ಟಗುಣಗಳನ್ನು ಅಳವಡಿಸಿಕೊಂಡು ಬದುಕಿದ ಶರಣೆ ಗುಡ್ಡಾಪೂರ ದಾನಮ್ಮ. 12…

3 hours ago

ಅ.8 ರಂದು ದಸರಾ ಕಾವ್ಯ ಸಂಭ್ರಮ

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಅ.8 ರಂದು ಇಳಿಹೊತ್ತು 4.15 ಕ್ಕೆ ನಗರದ ಕನ್ನಡ ಭವನದ ಸಾಹಿತ್ಯ…

3 hours ago

ಕೃಷಿ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಲಬುರಗಿ: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರಿನ 16ನೇ ಸಂಸ್ಥಾಪನಾ ದಿನಾಚರಣೆಯನ್ನು 22ನೇ ನವೆಂಬರ್ 2024 ರಂದು ರಾಯಚೂರು ಮುಖ್ಯ ಆವರಣದಲ್ಲಿ…

3 hours ago

ಇಂದಿನಿಂದ ಸೂಗೂರ (ಕೆ ) ನವರಾತ್ರಿ ಬ್ರಹ್ಮೋತ್ಸವ

ಕಾಳಗಿ : ಕಲ್ಯಾಣ ಕರ್ನಾಟಕದ ತಿರುಪತಿ ಎಂದೇ ಪ್ರಸಿದ್ಧಿ ಪಡೆದಿರುವ ಸುವರ್ಣ ಗಿರಿ ಕಾಳಗಿ ತಾಲೂಕಿನ ಸೂಗೂರ (ಕೆ )…

8 hours ago

ಕಾಳಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ಕಲಬುರಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ಕಾಳಗಿ ತಾಲೂಕು ಪ್ರವಾಸಿ ಮಂದಿರದಲ್ಲಿ ಹವ್ಯಾಸೀಕಲಾ ಬಳಗದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದಿವ್ಯ…

9 hours ago

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420