ಸುರಪುರ: ಬಾಪೂಜಿ ರಾಷ್ಟ್ರೀಯ ಸ್ವಯಂ ಸೇವಾ ಸಂಸ್ಥೆಯಿಂದ ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ವಿಶೇಷವಾಗಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಆಚರಿಸಲಾಗಿದೆ.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅನೇಕ ಮುಖಂಡರು ಮಾತನಾಡಿ,ಇಂದಿನ ಮಕ್ಕಳಿಗೆ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರ ಹೋರಾಟ,ತ್ಯಾಗ,ಬಲಿದಾನದ ಕುರಿತು ತಿಳಿಸಿಕೊಡಬೇಕು.ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ಸಾಧಕರಿಗೆ ಸನ್ಮಾನಿಸುವ ಮೂಲಕ ವಿಶೇಷವಾಗಿ ಆಚರಿಸುತ್ತಿರುವ ಸಂಸ್ಥೆಯ ಕಾರ್ಯ ಶ್ಲಾಘನೀಯವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಸಂಗಯ್ಯಸ್ವಾಮಿಯವರು ಸಾನಿಧ್ಯ ವಹಿಸಿದ್ದರು ಹಾಗೂ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪ್ರಭಯ್ಯಸ್ವಾಮಿ, ಕಾಂತಪ್ಪ ಮ್ಯಾಕಲ್,ಮಲ್ಲಿಕಾರ್ಜುನ,ಗೃಹರಕ್ಷಕ ದಳದ ಸಿನಿಯರ್ ಫ್ಲಾಟೂನ್ ಕಮಾಂಡರ್ ಅವರು ಮಲ್ಲು ವಿಷ್ಣುಸೇನಾ ಸೇರಿದಂತೆ ಅನೇಕ ಸಾಧಕರಿಗೆ ಸನ್ಮಾನಿಸಿ ಗೌರವಿಸಿದರು.
ಅಲ್ಲದೆ ಇದೇ ಸಂದರ್ಭದಲ್ಲಿ ವಿವಿಧ ಕಲಾ ತಂಡಗಳಿಂದ ಸಂಗೀತ ಕಾರ್ಯಕ್ರಮ ಜರುಗಿತು.ಸಂಸ್ಥೆಯ ಅಧ್ಯಕ್ಷ ಶರಣ ಅನಸೂರ ಅಧ್ಯಕ್ಷತೆ ವಹಿಸಿದ್ದರು,ಚಂದ್ರಶೇಖರ ದೊಡ್ಮನಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಕಲಬುರಗಿ: ಆಹಾರ ಪದ್ಧತಿ, ಒತ್ತಡದ ಜೀವನ ಮತ್ತು ಬೊಜ್ಜು, ಕಲುಷಿತ ಪರಿಸರ, ದೇಹ ದಂಡಿಸದೇ ಇರುವ ಕಾರಣದಿಂದ ಕ್ಯಾನ್ಸರ್ ರೋಗ…
ಕಲಬುರಗಿ: ಬಿಜೆಪಿ ಮಹಾನಗರ ಜಿಲ್ಲೆಯ ಯುವ ಮೋರ್ಚಾ ಉಪಾಧ್ಯಕ್ಷರಾಗಿ ಶಿವಲಿಂಗ ಪಾಟೀಲ್ ಸಾವಳಗಿ ಅವರನ್ನು ನೇಮಕ ಮಾಡಿದ ಕಾರಣೀಭೂತರಾದ ದಕ್ಷಿಣ…
ಕಲಬುರಗಿ: ವಿಶ್ವ ಕರ್ಮಾ ಸಮಾಜ ವತಿಯಿಂದ ಬಿಜೆಪಿ ಮಹಾ ನಗರ ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷರಾದ ದೇವೇಂದ್ರ ದೇಸಾಯಿ ಕಲ್ಲೂರ್…
ಕಲಬುರಗಿ: ಸಾಯಿ ರಾಮ್ ನಗರದಲ್ಲಿರುವ ವಿ ಎಲ್ ಪಾಟೀಲ್ ಕಲ್ಯಾಣ ಮಂಟಪದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಮಾಜಿ ಉಪಮೇಯರ್ ಮಹೇಶ್…
ಕಲಬುರಗಿ: ಇತ್ತೀಚೆಗೆ ಜರುಗಿದ ರಿಪಬ್ಲಿಕನ ಪಾರ್ಟಿ ಆಫ್ ಇಂಡಿಯಾ (ಆಕದಲೆ) ಕಲಬುರಗಿ ಜಿಲ್ಲಾ ಘಟಕದ ಸಭೆಯಲ್ಲಿ ರಾಜಕುಮಾರ ಪಿ.ನಡಗೇರಿ ಇವರನ್ನು…
ಕಲಬುರಗಿ: ಪ್ರಶಾಂತ ನಗರದ ಶ್ರೀ ಹನುಮಾನ ಮಂದಿರದಲ್ಲಿ ನವರಾತ್ರಿ ಉತ್ಸವ ಪ್ರಯುಕ್ತ ಶ್ರೀ ವೆಂಕಟೇಶ ಪುರಾಣವನ್ನು ಅರ್ಚಕರಾದ ಗುಂಡಾಚಾರ್ಯ ನರಿಬೊಳ…