ಕಲಬುರಗಿ: ಬ್ರಹ್ಮಪುರ ಬಡಾವಣೆಯ ಚೌಡೇಶ್ವರ ಕಾಲೋನಿಯಲ್ಲಿ ಚೌಡೇಶ್ವರ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ಜರುಗಿತು. ಶಾಲೆಯ ಸಂಸ್ಥಾಪಕ ಮಲ್ಲೇಶಪ್ಪ ಶಕ್ತಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಸಿ ನೆಟ್ಟು ದೀಪ ಬೆಳಗಿಸುವ ಮೂಲಕ ಶಿಕ್ಷಕರಿಗೆ ಗುರುವಂದನಾ ಸಲ್ಲಿಸಲಾಯಿತು.
ಗುರುಪಾದಲಿಂಗೇಶ್ವರ ವಿಜ್ಞಾನ ಪಿಯು ಕಾಲೇಜಿನ ಅಧ್ಯಕ್ಷ ವಾದಿರಾಜ ವ್ಯಾಸಮುದ್ರ ಮಾತನಾಡಿ, ಗುರುವಿಗೆ ಗುಲಾಮನಾಗುವ ತನಕ ದೊರೆಯದಣ್ಣ ಮುಕ್ತಿ ಎಂಬಂತೆ ಗುರು-ಶಿಷ್ಯರ ಬಾಂಧವ್ಯ ವೃದ್ಧಿಯಾಗಬೇಕು ಎಂದರು.
ಶಿಕ್ಷಕ ವೃಂದಕ್ಕೆ ಸನ್ಮಾನಿಸಲಾಯಿತು ಹಳೆಯ ವಿದ್ಯಾರ್ಥಿಗಳು ಹಿಂದಿನ ಘಟನೆಗಳ ಬಗ್ಗೆ ಸ್ಮರಿಸಿಕೊಂಡರು. ಹಳೆ ವಿದ್ಯಾರ್ಥಿ ಉಮಾಕಾಂತ ಮಧುರ ಸಂಗೀತ ರಸದೌತಣ ಬಡಿಸಿದರು.
ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷರು ಹಾಗೂ ಸ್ತ್ರೀರೋಗ ಮತ್ತು ಪ್ರಸ್ತುತಿ ವೈದ್ಯೆ ಡಾ. ಇಂದಿರಾ ಶಕ್ತಿ, ಇಂದಿನ ಶಿಕ್ಷಕರಾದವರು ಸಮಯಪ್ರಜ್ಞೆ, ಶಿಸ್ತು ಮತ್ತು ಸಮರ್ಪಣಾ ಭಾವದಿಂದ ಬೋಧಿಸಿದರೆ ಭವ್ಯ ಭಾರತ ಕಟ್ಟಬಹುದು. ಗುಣಾತ್ಮಕ ಶಿಕ್ಷಣದಿಂದ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿ ದೇಶದ ಆಸ್ತಿಯಾಗುತ್ತಾರೆ. ಈ ನಿಟ್ಟಿನಲ್ಲಿ ಶಿಕ್ಷಕರು ಶೈಕ್ಷಣಿಕ ವಲಯದಲ್ಲಿ ಅಪ್ಡೇಟ್, ಉತ್ತಮ ಜ್ಞಾನ ಸಂಪಾದಿಸಿ ವಿದ್ಯಾರ್ಥಿಗಳಿಗೆ ಧಾರೆ ಎರೆಯಬೇಕು ಎಂದು ಸಲಹೆ ನೀಡಿದರು.
ಹಳೆ ವಿದ್ಯಾರ್ಥಿಗಳಾದ ಶಕುಂತಲಾ ರ್ಯಾಕಾ, ಗುರುದೇವ ದೊಡ್ಡೆನ್ ನಿರೂಪಿಸಿದರು. ಅರವಿಂದ ಪಾಟೀಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜಶೇಖರ ಮಹಾಗಾಂವ್ ಸ್ವಾಗತಿಸಿದರು. ಶರಣಗೌಡ ಬಿರಾದಾರ್ ವಂದಿಸಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಭಾಗದಲ್ಲಿ ಸತತವಾಗಿ ಎಸ್ಎಸ್ಎಲ್ಸಿ ಫಲಿತಾಂಶ ಹಿಂದುಳಿಯುತ್ತಿದ್ದು, ಈ ಭಾಗದಲ್ಲಿ ಶೈಕ್ಷಣಿಕ ಸುಧಾರಣೆಗಾಗಿ ಸಮಿತಿ ರಚನೆ ಮಾಡಿ…
ಶಹಾಬಾದ: ತಾಲೂಕಿನ ಮರತೂರ ಗ್ರಾಮದಲ್ಲಿನ ಅಬ್ದುಲ್ ರಜಾಕ್ ಬಾಗೋಡಿ ಅವರ ಮನೆಕಳ್ಳತನವಾಗಿರುವ ಬಗ್ಗೆ ದೂರಿನ್ವಯ ಜಾಡು ಹಿಡಿದ ಪೊಲೀಸರು ಇಬ್ಬರು…
ಶಹಾಬಾದ: ಬಾಲಕಿ ಮೇಲಿನ ಅತ್ಯಾಚಾರ ಆರೋಪ ಸಾಬೀತಾಗಿದ್ದರಿಂದ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ವಿಶೇಷ ಪೆÇೀಕ್ರೂ) ನ್ಯಾಯಾಲಯವು ಅಪರಾಧಿಗೆ…
ಶಹಾಬಾದ:sನಗರಸಭೆಯ ನೂತನ ಅಧ್ಯಕ್ಷೆ ಚಂಪಾಬಾಯಿ ರಾಜು ಮೇಸ್ತ್ರಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಗರಸಭೆಯ ಸಭಾಂಗಣದಲ್ಲಿ ಸಾಮನ್ಯ ಸಭೆ ನಡೆಯಿತು. ಸಭೆ…
ಕಲಬುರಗಿ: ಆಹಾರ ಪದ್ಧತಿ, ಒತ್ತಡದ ಜೀವನ ಮತ್ತು ಬೊಜ್ಜು, ಕಲುಷಿತ ಪರಿಸರ, ದೇಹ ದಂಡಿಸದೇ ಇರುವ ಕಾರಣದಿಂದ ಕ್ಯಾನ್ಸರ್ ರೋಗ…
ಕಲಬುರಗಿ: ಬಿಜೆಪಿ ಮಹಾನಗರ ಜಿಲ್ಲೆಯ ಯುವ ಮೋರ್ಚಾ ಉಪಾಧ್ಯಕ್ಷರಾಗಿ ಶಿವಲಿಂಗ ಪಾಟೀಲ್ ಸಾವಳಗಿ ಅವರನ್ನು ನೇಮಕ ಮಾಡಿದ ಕಾರಣೀಭೂತರಾದ ದಕ್ಷಿಣ…