ರಾಷ್ಟ್ರದ ಅಭಿವೃದ್ಧಿಗೆ ಅಂಚೆ ಇಲಾಖೆಯ ಕೊಡುಗೆ ಅನನ್ಯ

ಕಲಬುರಗಿ: ಅನೇಕ ವರ್ಷಗಳಿಂದ ಅಂಚೆ ಇಲಾಖೆಯು ಜನತೆಗೆ ಉತ್ತಮವಾದ ಸೇವೆಯನ್ನು ನೀಡುತ್ತಾ ಮೆಚ್ಚುಗೆಗೆ ಪಾತ್ರವಾಗಿದೆ. ಪ್ರಸ್ತುತವಾಗಿ ಅದು ಕೇವಲ ಪತ್ರ ವಿಲೆವಾರಿಗೆ ಮಾತ್ರ ಸೀಮಿತವಾಗದೆ, ಬ್ಯಾಂಕಿಂಗ್ ಸೇವೆ, ಶುಲ್ಕ, ಚಾಲನ್ ಸ್ವೀಕಾರ, ನಿವೃತ್ತಿ ವೇತನ, ಪೋಸ್ಟಲ್ ಸೇವೆಗಳು, ಪಿಂಚಣಿ ಯೋಜನೆ, ಸರ್ಕಾರದ ವಿವಿಧ ಯೋಜನೆಗಳನ್ನು ಜನರಿಗೆ ಮುಟ್ಟಿಸುವ ಸೇವೆ ಮಾಡುತ್ತಿದ್ದು, ತನ್ಮೂಲಕ ರಾಷ್ಟ್ರದ ಅಭಿವೃದ್ಧಿಗೆ ಅಂಚೆ ಇಲಾಖೆಯು ಅನನ್ಯವಾದ ಕೊಡುಗೆಯನ್ನು ನೀಡುತ್ತಿದೆ ಎಂದು ನಿವೃತ್ತ ಪೋಸ್ಟ್ ಮಾಸ್ಟರ್ ರೇವಣಸಿದ್ದಪ್ಪ ಪವಾಡಶೆಟ್ಟಿ ಹೇಳಿದರು.

ನಗರದ ಆಳಂದ ರಸ್ತೆಯ ಖಾದ್ರಿ ಚೌಕನಲ್ಲಿರುವ ‘ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರ’ದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಬುಧವಾರ ಏರ್ಪಡಿಸಲಾಗಿದ್ದ ‘ವಿಶ್ವ ಅಂಚೆ ದಿನಾಚರಣೆ’ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಅಂಚೆ ಇಲಾಖೆಯ ಪ್ರಧಾನ ಕಚೇರಿಯ ಪೋಸ್ಟಮಾನ್ ಮಹಾದೇವ ಎಸ್.ಚಿಪ್ಪರಕಟ್ಟಿ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಹಿಂದಿನ ಕಾಲದಲ್ಲಿ ರಸ್ತೆಗಳಿಲ್ಲದ ಸಂದರ್ಭದಲ್ಲಿ ಸಾಕಷ್ಟು ತೊಂದರೆ ಅನುಭವಿಸಿ ಮನೆಗೆ ಪತ್ರಗಳು, ಟೆಲಿಗ್ರಾಮ್, ಮನಿಆರ್ಡರ್ ಮುಟ್ಟಿಸುವ ಕಾರ್ಯಮಾಡಲಾಗಿದೆ. ಪ್ರಸ್ತುತವಾಗಿ ಸೌಲಭ್ಯಗಳು ದೊರೆಯುತ್ತಿವೆ. ಹಿಂದಿನಿಗಿಂತಲೂ ಈಗ ಸರ್ಕಾರದ ವಿವಿಧ ಯೋಜನೆಗಳ ಪ್ರಮಾಣ ಹೆಚ್ಚಾಗಿದ್ದು, ಅವುಗಳನ್ನು ಪಲಾನುಭವಿಗಳಿಗೆ ನೀಡಬೇಕಾಗಿರುವುದರಿಂದ ಕಾರ್ಯ ಹೆಚ್ಚಾಗಿದೆ. ಸರ್ಕಾರದ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಉಪನ್ಯಾಸಕ ಎಚ್.ಬಿ.ಪಾಟೀಲ ಮಾತನಾಡುತ್ತಾ, ಇಲಾಖೆಯ ಯೋಜನೆಗಳು, ಕಾರ್ಯನಿರ್ವಹಣೆ ಬಗ್ಗೆ ಜನಜಾಗೃತಿ ಮೂಡಿಸುವುದು ದಿನಾಚರಣೆಯ ಉದ್ದೇಶವಾಗಿದೆ. ಪವಾಡಶೆಟ್ಟಿ ಅವರು ಒಂದೇ ಸ್ಥಳದಲ್ಲಿ ಯಾವುದೇ ಕಪ್ಪು ಚುಕ್ಕೆಯಿಲ್ಲದೆ ಸುದೀರ್ಘವಾಗಿ ನಾಲ್ಕು ದಶಕಗಳ ಕಾಲ ಸೇವೆ ಮಾಡುವುದು ಗಮನಿಸಿದರೆ, ಅವರಲ್ಲಿರುವ ಸೇವಾ ಮನೋಭಾವನೆ, ಕಾಯಕ ಪ್ರಜ್ಞೆ, ಸಮಾಜಕ್ಕೆ ಹಾಗೂ ನೌಕರ ವರ್ಗಕ್ಕೆ ಮಾದರಿಯಾಗಿದೆ. ಇಂದಿಗೂ ಕೂಡಾ ಆ ಭಾಗದಲ್ಲಿ ಎಲ್ಲಾ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ. ಇಂತಹ ವ್ಯಕ್ತಿಯನ್ನು ಗುರುತಿಸಿ, ಪ್ರೋತ್ಸಾಹಿಸುವ ಕಾರ್ಯ ಮಾಡುವುದು ಅಗತ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಅಸ್ಲಾಂ ಶೇಖ್, ಶಿಕ್ಷಕಿಯರಾದ ಪ್ರಿಯಾಂಕ ಉಜಳಂಬಿ, ನಿಲೊಫರ್ ಶೇಖ್, ಪೂಜಾ ಜಮಾದಾರ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

emedialine

Recent Posts

ಮಹಿಳೆಯರು ಸ್ವಾವಲಂಬಿಗಳಾಗಬೇಕು: ರೇಣುಕಾ

ಶಹಾಪುರ : ಧರ್ಮಸ್ಥಳ ಮಂಜುನಾಥ ಸಂಘದ ವತಿಯಿಂದ ಮಹಿಳೆಯರು ಸಾಲ ಪಡೆದು ಸದುಪಯೋಗಪಡಿಸಿಕೊಂಡು ಸ್ವಾವಲಂಬಿಗಳಾಗಿ ಸಮಾಜದಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಬೇಕು…

11 hours ago

ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಮೂವರ ಸಾವು

ವಾಡಿ: ನಿಂತಿದ್ದ ಟ್ರ್ಯಾಕ್ಟರ್ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳವಾರ ಸಂಜೆ ವಾಡಿ ಪೊಲೀಸ್ ಠಾಣೆ…

11 hours ago

ಮೊಹಮ್ಮದ್ ಪೈಗಂಬರ್ ಅವಹೇಳನ: ಯತಿ ನರಸಿಂಹಾನಂದ ಸ್ವಾಮಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಸೇಡಂ; ಪ್ರವಾದಿ ಮುಹಮ್ಮದ್ ಅವರನ್ನು ಅವಮಾನಿಸಿದ ಯತಿ ನರಸಿಂಹಾನಂದ ಸರಸ್ವತಿ ಸ್ವಾಮೀಜಿಗಳ ವಿರುದ್ಧ ಹಾಗೂ ಪ್ರಚೋದನ ಕಾರಿ ಹೇಳಿಕೆ ನೀಡಿರುವ…

11 hours ago

ದಕ್ಷ ಅಧಿಕಾರಿಗಳಿಗೆ ಮಣಿಕಂಠ ರಾಠೋಡ ಕಿರುಕುಳ

ಚಿತ್ತಾಪುರ; ಪ್ರಾಮಾಣಿಕ ಹಾಗೂ ದಕ್ಷತೆಯಿಂದ ಕೆಲಸ ಮಾಡುತ್ತಿರುವ ಅಧಿಕಾರಿಗಳಿಗೆ ವಿಧಾನಸಭೆ ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ ಕಿರುಕುಳ, ಬ್ಲ್ಯಾಕ್…

12 hours ago

ದಸರಾ ಹಬ್ಬದ ನಿಮಿತ್ತ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಚಾಲನೆ

ಕಲಬುರಗಿ: ಸೇಡಂ ರಸ್ತೆಯಲ್ಲಿರುವ ಶ್ರೀ ಇಂಗುಲಾಂಬಿಕ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ದಸರಾ ಹಬ್ಬದ ನಿಮಿತ್ತ…

12 hours ago

ಈಜು ಸ್ಪರ್ಧೆಯಲ್ಲಿ ಡಾ.ಮಲ್ಲಿಕಾರ್ಜುನ ಚಿಕ್ಕಪಾಟೀಲ ದ್ವಿತೀಯ ಸ್ಥಾನ

ಕಲಬುರಗಿ: ಕರ್ನಾಟಕ ರಾಜ್ಯ ಈಜು ಸಂಸ್ಥೆ ಆಯೋಜಿಸಿದ್ದ ಈಜು ಸ್ಪರ್ಧೆಯಲ್ಲಿ ಹೆಚ್- ಗುಂಪಿನಲ್ಲಿ ಕಲಬುರಗಿಯ ಅಕ್ವಾ ಅಸೋಸಿಯೇಷನ್ ನ ಸದಸ್ಯರು…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420