ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಮೂವರ ಸಾವು

0
17

ವಾಡಿ: ನಿಂತಿದ್ದ ಟ್ರ್ಯಾಕ್ಟರ್ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳವಾರ ಸಂಜೆ ವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಪಟ್ಟಣದ ಸಮೀಪದ ಹಳಕರಟಿ ಗ್ರಾಪಂ ವ್ಯಾಪ್ತಿಯ ಗುರೂಜಿ ನಗರ ತಾಂಡಾ ನಿವಾಸಿ ಅರ್ಜುನ್ ಪಾಂಡು ರಾಠೋಡ (22) ಮೃತ ದುರ್ದೈವಿ. ಲಾಡ್ಲಾಪುರ ದಿಂದ ಗುರೂಜಿ ನಗರ ತಾಂಡಾಕ್ಕೆ ಹೊರಟಿದ್ದ ಅರ್ಜುನ್, ಕತ್ತಲಲ್ಲಿ ಹಲಕರಟಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150 ರ ಮೇಲೆ ನಿಂತಿದ್ದ ಟ್ರ್ಯಾಕ್ಟರ್ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.

Contact Your\'s Advertisement; 9902492681

ಘಟನೆಯಿಂದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಹಿಂಬದಿ ಸವಾರರಾದ ಹಾಗೂ ಗುರೂಜಿ ತಾಂಡಾದ ರೋಹಿತ್ ಮೋಹನ ಚವ್ಹಾಣ (18) ಮತ್ತು ಕೃಷ್ಣ ಯಂಕಪ್ಪ (21) ಗಂಭೀರ ಗಾಯಗೊಂಡಿದ್ದಾರೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ವಾಡಿ ಠಾಣೆಯ ಪಿಎಸ್ಐ ಕೆ.ತಿರುಮಲೇಶ ಹಾಗೂ ಸಿಬ್ಬಂದಿಗಳು ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಶವವನ್ನು ವಾಡಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಿ ಮರಣೋತ್ತರ ಪರೀಕ್ಷೆ ಕೈಗೊಂಡಿದ್ದಾರೆ. ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here