ವಾಡಿ: ನಿಂತಿದ್ದ ಟ್ರ್ಯಾಕ್ಟರ್ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳವಾರ ಸಂಜೆ ವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪಟ್ಟಣದ ಸಮೀಪದ ಹಳಕರಟಿ ಗ್ರಾಪಂ ವ್ಯಾಪ್ತಿಯ ಗುರೂಜಿ ನಗರ ತಾಂಡಾ ನಿವಾಸಿ ಅರ್ಜುನ್ ಪಾಂಡು ರಾಠೋಡ (22) ಮೃತ ದುರ್ದೈವಿ. ಲಾಡ್ಲಾಪುರ ದಿಂದ ಗುರೂಜಿ ನಗರ ತಾಂಡಾಕ್ಕೆ ಹೊರಟಿದ್ದ ಅರ್ಜುನ್, ಕತ್ತಲಲ್ಲಿ ಹಲಕರಟಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150 ರ ಮೇಲೆ ನಿಂತಿದ್ದ ಟ್ರ್ಯಾಕ್ಟರ್ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.
ಘಟನೆಯಿಂದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಹಿಂಬದಿ ಸವಾರರಾದ ಹಾಗೂ ಗುರೂಜಿ ತಾಂಡಾದ ರೋಹಿತ್ ಮೋಹನ ಚವ್ಹಾಣ (18) ಮತ್ತು ಕೃಷ್ಣ ಯಂಕಪ್ಪ (21) ಗಂಭೀರ ಗಾಯಗೊಂಡಿದ್ದಾರೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ವಾಡಿ ಠಾಣೆಯ ಪಿಎಸ್ಐ ಕೆ.ತಿರುಮಲೇಶ ಹಾಗೂ ಸಿಬ್ಬಂದಿಗಳು ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಶವವನ್ನು ವಾಡಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಿ ಮರಣೋತ್ತರ ಪರೀಕ್ಷೆ ಕೈಗೊಂಡಿದ್ದಾರೆ. ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಹಾಪುರ : ಧರ್ಮಸ್ಥಳ ಮಂಜುನಾಥ ಸಂಘದ ವತಿಯಿಂದ ಮಹಿಳೆಯರು ಸಾಲ ಪಡೆದು ಸದುಪಯೋಗಪಡಿಸಿಕೊಂಡು ಸ್ವಾವಲಂಬಿಗಳಾಗಿ ಸಮಾಜದಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಬೇಕು…
ಸೇಡಂ; ಪ್ರವಾದಿ ಮುಹಮ್ಮದ್ ಅವರನ್ನು ಅವಮಾನಿಸಿದ ಯತಿ ನರಸಿಂಹಾನಂದ ಸರಸ್ವತಿ ಸ್ವಾಮೀಜಿಗಳ ವಿರುದ್ಧ ಹಾಗೂ ಪ್ರಚೋದನ ಕಾರಿ ಹೇಳಿಕೆ ನೀಡಿರುವ…
ಚಿತ್ತಾಪುರ; ಪ್ರಾಮಾಣಿಕ ಹಾಗೂ ದಕ್ಷತೆಯಿಂದ ಕೆಲಸ ಮಾಡುತ್ತಿರುವ ಅಧಿಕಾರಿಗಳಿಗೆ ವಿಧಾನಸಭೆ ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ ಕಿರುಕುಳ, ಬ್ಲ್ಯಾಕ್…
ಕಲಬುರಗಿ: ಸೇಡಂ ರಸ್ತೆಯಲ್ಲಿರುವ ಶ್ರೀ ಇಂಗುಲಾಂಬಿಕ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ದಸರಾ ಹಬ್ಬದ ನಿಮಿತ್ತ…
ಕಲಬುರಗಿ: ಕರ್ನಾಟಕ ರಾಜ್ಯ ಈಜು ಸಂಸ್ಥೆ ಆಯೋಜಿಸಿದ್ದ ಈಜು ಸ್ಪರ್ಧೆಯಲ್ಲಿ ಹೆಚ್- ಗುಂಪಿನಲ್ಲಿ ಕಲಬುರಗಿಯ ಅಕ್ವಾ ಅಸೋಸಿಯೇಷನ್ ನ ಸದಸ್ಯರು…
ಕಲಬುರಗಿ: ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…