ವಿವಾದಾತ್ಮಕ ಕೃತಿ ಹಿಂಪಡೆಯಲು ಮನವಿ

0
186

ಕಲಬುರಗಿ: ಇತ್ತೀಚೆಗೆ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಿವಾದಿತ ಕೃತಿ ” ವಾಲ್ಮೀಕಿ ಯಾರು? ನೀಡಿರುವುದನ್ನು ಹಿಂಪಡೆಯಬೇಕು ಎಂದು ಕಲ್ಯಾಣ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕರ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಸುಬೇದಾರ ಮನವಿ ಮಾಡಿದರು.

Contact Your\'s Advertisement; 9902492681

ಇಂದು ನಗರಕ್ಕೆ ಆಗಮಿಸಿದ್ದ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ  ಸಚಿವ ಗೋವಿಂದ ಕಾರಜೋಳ ಅವರಿಗೆ ಮನವಿ ಸಲ್ಲಿಸಿ, ಕಾರ್ಯಕ್ರಮದಲ್ಲಿ ಈ ಕೃತಿ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದರು. ಪ್ರತಿ ವರ್ಷ ನಡೆಯುವ ಕಾರ್ಯಕ್ರಮ ಒಂದೇ ರೀತಿಯಾಗಿ ಆಯೋಜಿಸಬೇಕು, ಕಾಣಿಕೆ ಹಾಗೂ ಗೌರವಧನ ಕೂಡ ಒಂದೇ ರೀತಿಯಾಗಿರಬೇಕು ಎಂದು ಅವರು ವಿನಂತಿಸಿಕೊಂಡರು.

ಈ ವೇಳೆಯಲ್ಲಿ ಸಂಘದ ಪದಾಧಿಕಾರಿಗಳು ಮುಖಂಡರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here