ಮಾನವೀಯ ಮತಿಯಿಂದ ಬೆಳಗಿದ ಜ್ಯೋತಿ ಇಂದಿಗೂ ಬಸವ ಬೆಳಕಾಗಿದೆ.: ಪೂಜ್ಯ ಶ್ರೀ ಬಸವೇಶ್ವರಿ ಮಾತಾಜಿ

ಕಲಬುರಗಿ: ಹನ್ನೇರಡನೇ ಶತಮಾನದಲ್ಲಿ ಸಮಾನತೆಗಾಗಿ ಆ ಮೂಲಕ ಸಮಾಜದ ಸುಧಾರಣೆಗಾಗಿ ಹೋರಾಡಿದ ಬಸವಣ್ಣ ನವರು ಅಂಧಕಾರ, ಕಂದಾಚಾರ, ಜಾತಿ ಬೇಧ, ರಾಜಪ್ರಭುತ್ವಗಳ ಕತ್ತಲೆಯನ್ನು ಕಳೆಯಲು ವಚನಜ್ಯೋತಿಯನ್ನು ಬೆಳಗಿದ್ದಾರೆ.  ಮಾನವೀಯ ಮತಿಯಿಂದ ಬೆಳಗಿದ ಜ್ಯೋತಿ ಇಂದಿಗೂ ಬಸವ ಬೆಳಕಾಗಿ ಹೊಸ ದಿಕ್ಕಿಗೆ ದೀವಿಗೆ ಹಚ್ಚಿದಂತಿದೆ ಎಂದು ಕಾರವಾರ ಜಿಲ್ಲೆಯ ಅತ್ತಿವೇರಿಯ ಪೂಜ್ಯ ಶ್ರೀ ಬಸವೇಶ್ವರಿ ಮಾತಾಜಿ ನುಡಿದರು.

ಇಲ್ಲಿನ ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ವತಿಯಿಂದ ಅತ್ತಿವೇರಿಯ ಬಸವ ದಿವ್ಯ ಜ್ಞಾನ ಮಂದಿರದಲ್ಲಿ ಶನಿವಾರ ಆಯೋಜಿಸಲಾಗಿದ್ದ ‘ಚಿಂತನ ಚೇತನ’ ವಿಶೇಷ ಶಿಬಿರಕ್ಕೆ ಚಾಲನೆ ನೀಡಿದ ಅವರು, ಶರಣರು ಬರೆದಿರುವ ವಚನಗಳು ಸಕಲ ಜೀವಾತ್ಮರ ಲೇಸನ್ನೇ ಬಯಸುವಂಥವುಗಳಾಗಿವೆ ಎಂದು ಮಾರ್ಮಿಕವಾಗಿ ನುಡಿದರು.

ಅಧ್ಯಕ್ಷತೆ ವಹಿಸಿದ್ದ ಅಕಾಡೆಮಿ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಪ್ರಸ್ತುತ ಸಮಾಜದಲ್ಲಿ ತಾಂಡವವಾಡುತ್ತಿದ್ದ ಹೀನ ಆಚರಣೆಗಳನ್ನು ಮುಕ್ತ ಮಾಡಲು ಜಗದ ಬೆಳಕಿನಂತಿರುವ ಬುದ್ದ, ಬಸವ, ಡಾ.ಅಂಬೇಡ್ಕರ್ ಸೇರಿ ಅನೇಕ ಮಹಾತ್ಮರು-ಸಂತರು, ಶರಣರ ದಿಟ್ಟ ವಿಚಾರಗಳಿಂದ ಸಮಾಜದಲ್ಲಿನ ಕೆಲವು ಕೆಟ್ಟ ಸಂಪ್ರದಾಯಗಳು ಸುಟ್ಟು ಹೋಗಿವೆ ಎಂದ ಅವರು, ಕಾಯಕ-ಪ್ರಸಾದ ಮತ್ತು ದಾಸೋಹ ತತ್ವದ ಮೂಲಕ ವಿಶ್ವಗುರು ಬಸವಣ್ಣನವರು ಈ ಲೋಕ ಸುಸ್ಥಿರವಾಗಿ ಬದುಕುವಂತೆ ಮಾಡಿದ್ದಾರೆ ಎಂದರು.

ಪ್ರಮುಖರಾದ ಜಗದೀಶ ಮರಪಳ್ಳಿ ಚಿಮ್ಮನಚೋಡ, ರವೀಂದ್ರಕುಮಾರ ಭಂಟನಳ್ಳಿ, ಬಿ.ಎಂ.ಪಾಟೀಲ ಕಲ್ಲೂರ, ಪ್ರಭುಲಿಂಗ ಮೂಲಗೆ, ನಾಗೇಂದ್ರಪ್ಪ ಮಾಡ್ಯಾಳೆ ಸರಸಂಬಿ, ಪ್ರಭುದೇವ ಯಳವಂತಗಿ, ಪರಮೇಶ್ವರ ಶಟಕಾರ, ವಿದ್ಯಾಸಾಗರ ದೇಶಮುಖ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಗುರುಬಸಪ್ಪ ಸಜ್ಜನಶೆಟ್ಟಿ ಹೊನ್ನಕಿರಣಗಿ, ಸವಿತಾ ಪಾಟೀಲ ಸೊಂತ, ಮೀನಾಕ್ಷಿ, ಲಕ್ಷ್ಮೀ, ಸವಿತಾ ಜಾಧವ ಸೇರಿ ಅನೇಕ ಶಿಬಿರಾರ್ಥಿಗಳು ಭಾಗವಹಿಸಿದ್ದರು.

emedialine

Recent Posts

ನೂತನ ಪದಾಧಿಕಾರಿಗಳ ಪದಗೃಹಣ, ಅಭಿನಂದನಾ ಸಮಾರಂಭ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಪಟ್ಟಣದ ಅಕ್ಕಮಹಾದೇವಿ ಮಂದಿರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಚಿತ್ತಾಪುರ ತಾಲೂಕಿನ…

54 mins ago

ಕೆಬಿಎನ ಆಸ್ಪತ್ರೆಯಲ್ಲಿ ಉಚಿತ ಇಸಿಜಿ ತಪಾಸಣೆ

ಕಲಬುರಗಿ: ವಿಶ್ವ ಹೃದಯದ ದಿನದ ಅಂಗವಾಗಿ ಸ್ಥಳೀಯ ಖಾಜಾ ಬಂದಾನವಾಜ ವಿವಿಯ ಖಾಜಾ ಬಂದಾನವಾಜ ಆಸ್ಪತ್ರೆಯ ಜನರಲ ಮೆಡಿಸಿನ್ ವಿಭಾಗದಲ್ಲಿ…

2 hours ago

ವಿದ್ಯಾರ್ಥಿಗಳ ಕೌಶಲ್ಯ ಉತ್ತೇಜನ ಕಾರ್ಯಕ್ರಮ (Technical event)

ಕಲಬುರಗಿ: ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಅನಿಲ್ ಕಲಾಸ್ಕರ್ ಅವರು "ಸಾಫ್ಟ್‌ವೇರ್ ಇಂಜಿನಿಯರಿಂಗ್ ಮತ್ತು AI" ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.…

3 hours ago

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

16 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

16 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

16 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420