ನೇಣು ಹಾಕಿಕೊಂಡು ಓರ್ವನ ಆತ್ಮಹತ್ಯೆ

0
98

ಕಲಬುರಗಿ: ನೇಣು ಹಾಕಿಕೊಂಡು ಓರ್ವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಸೇಡಂ ತಾಲ್ಲೂಕಿನ ಕುರಕುಂಟಾ ಗ್ರಾಮದಲ್ಲಿ ವರದಿಯಾಗಿದೆ. ಮೃತನಿಗೆ ಹಣಮಂತಪ್ಪ ಕಾಶೀನಾಥ್ ಗುತ್ತೇದಾರ್ (55) ಎಂದು ಗುರುತಿಸಲಾಗಿದೆ.

ಗ್ರಾಮದ ಮನೆಯಲ್ಲಿ ಗುತ್ತೇದಾರ್ ಆತ್ಮಹತ್ಯೆಗೆ ಒಳಗಾಗಿದ್ದು, ಸಾಲ ಬಾಧೆಯೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ನಿಖರ ಕಾರಣವು ತಕ್ಷಣಕ್ಕೆ ತಿಳಿದುಬಂದಿಲ್ಲ. ವಿಷಯ ತಿಳಿದು ಪಿಎಸ್‌ಐ ವಿದ್ಯಾಶ್ರೀ ಹಾಗೂ ಸಿಬ್ಬಂದಿಯವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಕುರಿತು ಕುರಕುಂಟಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here