ಹಿಂಗಾರು ಬೆಳೆಗಳಿಗೆ ನೀರು ಬಿಡಲು ಸಲಹಾ ಸಮಿತಿ ಸಭೆ ಕರೆಯಲು ಮನವಿ

0
98

ಸುರಪುರ: ಕೃಷ್ಣಾ ಮೇಲ್ದಂಡೆ ಕಾಲುವೆ ಭಾಗದ ರೈತರು ಬೆಳೆದ ಮುಂಗಾರು ಬೆಳೆಗಳು ಈಗಾಗಲೆ ಕಟಾವಿಗೆ ಬಂದಿದ್ದು ಎರಡನೇ ಅವಧಿಯ ಹಿಂಗಾರು ಬೆಲೆಗಳಿಗೆ ನೀರು ಹರಿಸುವಂತೆ ಶಾಸಕ ನರಸಿಂಹ ನಾಯಕ(ರಾಜುಗೌಡ) ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದು.ರೈತರು ಸತತ ಬರಗಾಲದಿಂದ ಸಂಕಷ್ಟದಲ್ಲಿದ್ದು ಈಬಾರಿ ಆಲಮಟ್ಟಿ ಹಾಗು ನಾರಾಯಣಪುರ ಜಲಾಶಯಗಳಲ್ಲಿ ನೀರು ಭರ್ತಿಯಾಗಿದೆ.ಆದ್ದರಿಂದ ಕೂಡಲೆ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ ಹಿಂಗಾರು ಬೆಳೆಗಳಿಗೆ ನೀರು ಬಿಡುವ ಕುರಿತು ಘೋಷಣೆ ಮಾಡಿದರೆ ರೈತರಿಗೆ ಅನುಕೂಲವಾಗಲಿದೆ.ಆದ್ದರಿಂದ ಶೀಘ್ರವೆ ಸಭೆಯನ್ನು ಕರೆಯಲು ಸೂಚಿಸುವಂತೆ ಮನವಿ ಸಲ್ಲಿಸಿದರು.

Contact Your\'s Advertisement; 9902492681

ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಶೀಘ್ರದಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ ಎಂದು ಶಾಸಕರು ಪತ್ರಿಕೆಗೆ ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here