ಬಿಸಿ ಬಿಸಿ ಸುದ್ದಿ

ವಚನ ಸಾಹಿತ್ಯ ಶ್ರೇಷ್ಠ ಸಾಹಿತ್ಯ: ಬಸವರಾಜ ಬೆಂಡೆಬೆಂಬಳಿ

ಸಿದ್ಧರಾಮ ಜಯಂತಿ ನಿಮಿತ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

ಇ-ಮೀಡಿಯಾ ಲೈನ್ ನ್ಯೂಸ್

ಕಲಬುರಗಿ: ವಚನ ಸಾಹಿತ್ಯ ಶ್ರೇಷ್ಠ ಸಾಹಿತ್ಯವಾಗಿದ್ದು, ವಚನಗಳು ಬದುಕಿಗೆ ಮಾರ್ಗದರ್ಶನ ನೀಡುತ್ತವೆ ಎಂದು ಹಿರಿಯ ಕವಿ, ನಿವೃತ್ತ ಶಿಕ್ಷಕ ಬಸವರಾಜ ಬೆಂಡೆಬೆಂಬಳಿ ತಿಳಿಸಿದರು.

ಇಲ್ಲಿನ ಮಹಾತ್ಮ ಬಸವೇಶ್ವರ ನಗರದಲ್ಲಿ ವಚನೋತ್ಸವ ಸಮಿತಿ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ನಿಮಿತ್ತ ಚಿತ್ರಶೇಖರ ಶೀಲವಂತ ಅವರ ಮನೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಚನೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸದ್ಯ ಸಮಾಜದಲ್ಲಿ ಧನ ಮದ, ವಿದ್ಯೆಯ ಮದ, ಅಧಿಕಾರ ಮದ, ಯೌವನದ ಮದ ತುಂಬಿಕೊಂಡಿದ್ದು, ಇದಕ್ಕೆ ವಚನಗಳೇ ದಿವ್ಯ ಔಷಧಿಗಳಾಗಿವೆ. ವಚನಗಳನ್ನು ಪಠಿಸದೆ ವಚನಗಳನ್ನು ಪಚನ ಮಾಡಿಕೊಂಡು ಬದುಕನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಪತ್ರಕರ್ತ- ಸಾಹಿತಿ ಡಾ.‌ ಶಿವರಂಜನ ಸತ್ಯಂಪೇಟೆ ಸಿದ್ಧರಾಮೇಶ್ವರರ ಕುರಿತು ವಿಶೇಷ ಉಪನ್ಯಾಸ ನೀಡಿ, ಅರಿವು, ಆಚಾರ, ಅನುಭಾವ ಮುಂತಾದ ನೈತಿಕ ಮೌಲ್ಯಗಳನ್ನು ಒಳಗೊಂಡ ಸಿದ್ಧರಾಮರ ವಚನಗಳು ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಸಹಕಾರಿಯಾಗಿವೆ ಎಂದು ತಿಳಿಸಿದರು.

ಜನಹಿತಕ್ಕಾಗಿ ಲಕ್ಷದ ಮೇಲೆ 96 ಸಾವಿರ ಗುಡಿ, ಕೆರೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಸಿದ್ಧರಾಮರು, ಅಲ್ಲಮಪ್ರಭುಗಳ ಸಂಪರ್ಕದಿಂದ ಶರಣ ಮಾರ್ಗಕ್ಕೆ ಬಂದು ಶಿವಯೋಗಿ ಎನಿಸಿಕೊಂಡರು ಎಂದು ಅಭಿಪ್ರಾಯಪಟ್ಟರು.

ಸೋಮಶೇಖರ ಕುಂಬಾರ ನಿರೂಪಿಸಿದರು. ಚಿತ್ರಶೇಖರ ಶೀಲವಂತ ಸ್ವಾಗತಿಸಿದರು. ಕಲ್ಯಾಣಪ್ಪ ಬಿರಾದಾರ ಪ್ರಾರ್ಥನೆಗೀತೆ ಹಾಡಿದರು. ವೀರಣ್ಣ ತೊರವಿ ವಂದಿಸಿದರು. ಮಾನಸಾ ಹಿರೇಮಠ, ವಿಜಯಲಕ್ಷ್ಮೀ ವಚನಗಳನ್ನು ಹಾಡಿದರು.

ರುದ್ರಪ್ಪ ಪಾಟೀಲ, ಮಲ್ಲಣ್ಣ ಕೊಟ್ರಶೆಟ್ಟಿ, ನಾಗೇಂದ್ರಪ್ಪ ಬಿರಾದಾರ, ಗಿರಿಜಾ ಶೀಲವಂತ, ಗಿರಿಜಾ ಶೀಲವಂತ, ವಿಜಯಲಕ್ಷ್ಮೀ ಮೂಲಗೆ, ಬಸವರಾಜ ದೂಳಾಗುಂಡಿ, ಡಾ. ಸಂಗಮೇಶ ಹಿರೇಮಠ ಇತರರಿದ್ದರು.

emedialine desk

Recent Posts

ಮಹಿಳೆಯರನ್ನು ಗೌರವಿಸುವ ಶ್ರೀಮಂತ ಸಂಪ್ರದಾಯ ಹೊಂದಿರುವ ದೇಶ ಭಾರತ

ಮಾರ್ಚ್ 8 ರಂದು ಅಂತರರಾಷ್ಟ್ರೀಯ ಮಹಿಳಾ ದಿನ ಅಶೋಕ ಪಾಟೀಲ ಮಹಿಳೆ ಅಥವಾ ಸ್ತ್ರೀ ಪದವು ಸಂಸ್ಕøತದ್ದು, ಕನ್ನಡದಲ್ಲಿ ಈ…

5 days ago

ನಿಧನ ವಾರ್ತೆ: ಭೀಮರಾವ.ಸಿ.ಸುಗೂರ

ಶಹಾಬಾದ:ನಗರದ ಹಳೆಶಹಾಬಾದನ ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಭೀಮರಾವ.ಸಿ.ಸುಗೂರ (77) ಶನಿವಾರದಂದು ನಿಧನರಾಗಿದ್ದಾರೆ. ಇವರಿಗೆ ಇಬ್ಬರು ಸುಪುತ್ರರು, ಇಬ್ಬರು ಸುಪುತ್ರಿಯರು…

1 week ago

ನೆಲೋಗಿ ಬಿ.ಆರ್.ಅಂಬೇಡ್ಕರ ಭವನದಲ್ಲಿ ಛತ್ರಪತಿ ಶಿವಾಜಿಯ ಮಹಾರಾಜರ ಜನ್ಮ ದಿನಾಚರಣೆ

ಜೇವರ್ಗಿ: ಇಂದು ನೆಲೋಗಿ ಗ್ರಾಮದಲ್ಲಿ ಡಾ. ಅಂಬೇಡ್ಕರ್ ಸೇವಾ ಚಾರಿಟೇಬಲ್ ಟ್ರಸ್ಟ್ ನೆಲೋಗಿವತಿಯಿಂದ ಡಾ. ಬಿ.ಆರ್.ಅಂಬೇಡ್ಕರ ಸಮುದಾಯ ಭವನದಲ್ಲಿ ಛತ್ರಪತಿ…

3 weeks ago

ಸಮಾಜದಲ್ಲಿನ ಅನಿಷ್ಟ ಪದ್ಧತಿ ಹೋರಾಟ ಅಗತ್ಯ: ಮೇಯರ್

ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಮೂಢನಂಬಿಕೆ, ಅನಿಷ್ಟ ಪದ್ಧತಿ, ಸಂವಿಧಾನದ ಆಶಯ ಈಡೇಸುವ ನಿಟ್ಟಿನಲ್ಲಿ ಜನ್ಮ ತಾಳಿದ ಮಾನವ ಬಂಧುತ್ವ…

4 weeks ago

ಕಲಬುರಗಿ; 200 ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ ಆಯೋಜನೆ

ಕಲಬುರಗಿ: ನಗರದ ಸೆಂಟ್ ಮೇರಿ ಶಾಲೆಯಲ್ಲಿ 5 ರಿಂದ 9 ನೇ ತರಗತಿಯ 200 ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ…

4 weeks ago

ಉಚಿತ ಆರೋಗ್ಯ ತಪಾಸಣೆ ಶಿಬಿರ

ಜೇವರ್ಗಿ: ತಾಲೂಕಿನ ಜನರ ಸೇವೆಗಾಗಿ ಕಲಬುರಗಿಯ ಇಸ್ಲಾಮಾಬಾದ ಕಾಲೋನಿಯ ಅಲ್ ಶಿಫಾ ಆಸ್ಪತ್ರೆಯ ಮುಖ್ಯಸ್ಥರು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು…

1 month ago