ಬಿಸಿ ಬಿಸಿ ಸುದ್ದಿ

ಮಹಾಲಕ್ಷ್ಮೀ ಬಿರಾದಾರ ವಿದ್ಯಾರ್ಥಿನಿಯ ಆತ್ಮಹತ್ಯೆ ಖಂಡಿಸಿ ಜ.16ರಂದು ಜೇವರ್ಗಿ ಬಂದ್

ಇ-ಮೀಡಿಯಾ ಲೈನ್ ನ್ಯೂಸ್

ಕಲಬುರಗಿ: ಜೇವರಗಿಯ ವೀರಶೈವ ಲಿಂಗಾಯತ ಸಮಾಜ ಬಾಂಧವರು ತಾಲ್ಲೂಕಿನ ಮಹಾಲಕ್ಷ್ಮೀ ಬಿರಾದಾರ ವಿದ್ಯಾರ್ಥಿನಿಯ ಆತ್ಮಹತ್ಯೆ ಕುರಿತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾ ಹಾಗೂ ಸಮಾಜದ ಮುಖಂಡರಿಂದ ಸೋಮವಾರ ಪತ್ರಿಕಾ ಭವನದಲ್ಲಿ ಸುದ್ಧಿಗೋಷ್ಠಿ ನಡೆಯಿತು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು ನಮ್ಮ ಸಮುದಾಯದ ವಿದ್ಯಾರ್ಥಿನಿಯ ಮೇಲೆ ಅನ್ಯ ಕೋಮಿನ ಯುವಕನ ಮಾನಸಿಕ ಕಿರುಕುಳದಿಂದ ಬೇಸತ್ತು ಕುಟುಂಬದ ಮಾನ ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇಡೀ ನಾಗರಿಕ ಸಮುದಾಯ ತಲೆ ತಗ್ಗಿಸುವ ವಿಷಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೃತ ವಿದ್ಯಾರ್ಥಿನಿಯ ಸಹೋದರನಿಗೆ ಸರ್ಕಾರಿ ಉದ್ಯೋಗ ಕಲ್ಪಿಸಬೇಕು ಹಾಗೂ 50 ಲಕ್ಷ ಪರಿಹಾರ ಘೋಷಣೆ ಮಾಡಬೇಕು, ಕುಟುಂಬದವರಿಗೆ ಸೂಕ್ತ ಭದ್ರತೆ ಕೊಡಲು ಕ್ರಮ ಕೈಗೊಳ್ಳಬೇಕು ಇದೇ ತಿಂಗಳು 16 ತಾರೀಖು ಗುರುವಾರದಂದು ಜೇವರ್ಗಿ ಪಟ್ಟಣ ಸಂಪೂರ್ಣ ಬಂದ್ ಮಾಡಲಾಗುತ್ತದೆ ಎಂದು ಹೇಳಿದರು.

ಮಾಜಿ ಶಾಸಕ ದೊಡ್ಡಪ್ಪ ಗೌಡ ಪಾಟೀಲ್ ನರಿಬೋಳ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಕಾರ್ಯದರ್ಶಿಗಳಾದ ರಾಜಶೇಖರ ಸಾಹು ಸೀರಿ ಮಾತನಾಡಿ, ಈ ಘಟನೆ ಖಂಡಿಸಿ ಜ.16ರಂದು ಜೇವರ್ಗಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಮುಖಂಡರಾದ ಶಿವರಾಜ್ ಪಾಟೀಲ್ ರದ್ದೇವಾಡಗಿ, ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸೋಮಶೇಖರ ಹಿರೇಮಠ, ಮಹಾಸಭಾದ ಜಿಲ್ಲಾ ಉಪಾಧ್ಯಕ್ಷರಾದ ಮಲ್ಲನಗೌಡ ನೇದಲಗಿ, ಮಹಾಸಭಾದ ಜೇವರಗಿ/ಯಡ್ರಾಮಿ ತಾಲೂಕು ಅಧ್ಯಕ್ಷರಾದ ಸಿದ್ದು ಅಂಗಡಿ, ಗುರುಲಿಂಗಪ್ಪಗೌಡ ಅಂದೋಲ, ವಿಜಯಕುಮಾರ ಕಲ್ಲಹಂಗರಗಾ, ಷಣ್ಮುಖಪ್ಪ ಸಾಹು ಗೋಗಿ, ಶಿವಾನಂದ ಮುಧೋಳ. ಮಲ್ಲಿಕಾರ್ಜುನ ಬಿರಾದಾರ, ಡಾ ಸುಧಾ ಹಾಲಕಾಯಿ,ಸಂತೋಷ ಅವಟಿ, ಶರಣು ಅವರಾದ, ರವಿ ಪಡಶೆಟ್ಟಿ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು

emedialine desk

Recent Posts

ಮಹಿಳೆಯರನ್ನು ಗೌರವಿಸುವ ಶ್ರೀಮಂತ ಸಂಪ್ರದಾಯ ಹೊಂದಿರುವ ದೇಶ ಭಾರತ

ಮಾರ್ಚ್ 8 ರಂದು ಅಂತರರಾಷ್ಟ್ರೀಯ ಮಹಿಳಾ ದಿನ ಅಶೋಕ ಪಾಟೀಲ ಮಹಿಳೆ ಅಥವಾ ಸ್ತ್ರೀ ಪದವು ಸಂಸ್ಕøತದ್ದು, ಕನ್ನಡದಲ್ಲಿ ಈ…

1 week ago

ನಿಧನ ವಾರ್ತೆ: ಭೀಮರಾವ.ಸಿ.ಸುಗೂರ

ಶಹಾಬಾದ:ನಗರದ ಹಳೆಶಹಾಬಾದನ ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಭೀಮರಾವ.ಸಿ.ಸುಗೂರ (77) ಶನಿವಾರದಂದು ನಿಧನರಾಗಿದ್ದಾರೆ. ಇವರಿಗೆ ಇಬ್ಬರು ಸುಪುತ್ರರು, ಇಬ್ಬರು ಸುಪುತ್ರಿಯರು…

2 weeks ago

ನೆಲೋಗಿ ಬಿ.ಆರ್.ಅಂಬೇಡ್ಕರ ಭವನದಲ್ಲಿ ಛತ್ರಪತಿ ಶಿವಾಜಿಯ ಮಹಾರಾಜರ ಜನ್ಮ ದಿನಾಚರಣೆ

ಜೇವರ್ಗಿ: ಇಂದು ನೆಲೋಗಿ ಗ್ರಾಮದಲ್ಲಿ ಡಾ. ಅಂಬೇಡ್ಕರ್ ಸೇವಾ ಚಾರಿಟೇಬಲ್ ಟ್ರಸ್ಟ್ ನೆಲೋಗಿವತಿಯಿಂದ ಡಾ. ಬಿ.ಆರ್.ಅಂಬೇಡ್ಕರ ಸಮುದಾಯ ಭವನದಲ್ಲಿ ಛತ್ರಪತಿ…

3 weeks ago

ಸಮಾಜದಲ್ಲಿನ ಅನಿಷ್ಟ ಪದ್ಧತಿ ಹೋರಾಟ ಅಗತ್ಯ: ಮೇಯರ್

ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಮೂಢನಂಬಿಕೆ, ಅನಿಷ್ಟ ಪದ್ಧತಿ, ಸಂವಿಧಾನದ ಆಶಯ ಈಡೇಸುವ ನಿಟ್ಟಿನಲ್ಲಿ ಜನ್ಮ ತಾಳಿದ ಮಾನವ ಬಂಧುತ್ವ…

4 weeks ago

ಕಲಬುರಗಿ; 200 ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ ಆಯೋಜನೆ

ಕಲಬುರಗಿ: ನಗರದ ಸೆಂಟ್ ಮೇರಿ ಶಾಲೆಯಲ್ಲಿ 5 ರಿಂದ 9 ನೇ ತರಗತಿಯ 200 ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ…

1 month ago

ಉಚಿತ ಆರೋಗ್ಯ ತಪಾಸಣೆ ಶಿಬಿರ

ಜೇವರ್ಗಿ: ತಾಲೂಕಿನ ಜನರ ಸೇವೆಗಾಗಿ ಕಲಬುರಗಿಯ ಇಸ್ಲಾಮಾಬಾದ ಕಾಲೋನಿಯ ಅಲ್ ಶಿಫಾ ಆಸ್ಪತ್ರೆಯ ಮುಖ್ಯಸ್ಥರು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು…

1 month ago