ಬಿಸಿ ಬಿಸಿ ಸುದ್ದಿ

ರಾಯಚೂರು ವಿದ್ಯಾರ್ಥಿನಿ ಮಧು ಸಾವಿಗೆ ನ್ಯಾಯಕ್ಕಾಗಿ ಕಿಡಗೇಡಿಗಳಿಂದ ಕಲ್ಲು ತೂರಾಟ

ರಾಯಚೂರು: ರಾಯಚೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ ಅನುಮಾನಸ್ಪದ ಸಾವಿನ  ಪ್ರಕರಣದ ಕುರಿತು ನ್ಯಾಯಕ್ಕೆ ಆಗ್ರಹಸಿ, ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕೆಂದು ರಾಜ್ಯದ್ಯಾಂತ ಹೋರಾಟಗಳು ಚುರುಕುಗೊಂಡಿದೆ.

ವಿದ್ಯಾರ್ಥಿನಿ ಮಧು ಪತ್ತಾರ ಸಾವಿಗೆ ರಾಜ್ಯವನ್ನೆ ಬೆಚ್ಚಿ ಬಿಳಿಸಿದ್ದು, ಕೃತ್ಯದಲ್ಲಿ ಭಾಗಿಯಾದ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು, ಎಸ್.ಎಫ್.ಐ, ವಿಶ್ವಕರ್ಮ ಸಮಾಜ, ಪ್ರಗತಿಪರ ಸಂಘಟನೆಗಳು ಹಾಗೂ ವಿವಿಧ ವಿದ್ಯಾರ್ಥಿಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದಾರೆ. ವಿವಿಧ ಸಂಘಟನೆಗಳು ಸೇರಿ ಸಾವಿರಾರು  ಸಂಖ್ಯೆಯಲ್ಲಿ ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಧು ಸಾವಿಗೆ ನ್ಯಾಯಕ್ಕಾಗಿ ಹೋರಟ ನಡೆಸಿದ್ದರು.

ಈ ಸಂದರ್ಭದಲ್ಲಿ ಕೆಲ ಕಿಡಗೇಡಿಗಳ ಕಾರಣದಿಂದ ಹೋರಾಟದಲ್ಲಿ ತಾಳ್ಮೆ ಕಳೆದುಕೊಂಡು ಹಿಂಸಾಚಾರದ ರೂಪ ಪಡೆದುಕೊಂಡಿತ್ತು. ಒಂದೆಡೆ ಮಧು ಸಾವಿಗೆ ನ್ಯಾಯಕ್ಕಾಗಿ ಪ್ರತಿಭಟನೆ ನಡೆದರೆ, ಇನ್ನೊಂದೆಡೆ ಜಿಲ್ಲಾಧಿಕಾರಿ ಕಚೇರಿ ಒಳಗಡೆ ಹೋರಾಟಗಾರರ ನುಗ್ಗಲು ಯತ್ನಿಸಿದ್ದರು.  ಹೋರಾಟಗಾರರನ್ನು ತಡೆಯಲು ಯತ್ನಿಸಿದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.  ಇದರಿಂದ ಕೆರಳಿದ ಕೆಲ ಯುವಕರು ಏಕಾಏಕಿ ಕಲ್ಲು , ಚಪ್ಪಲಿ, ವಾಟರ್ ಬಾಟಲ್ ಏಸೆಗಿದ್ದರಿಂದ ಹೋರಟ ವಿಕೋಪಕ್ಕೆ ತಿರುಗಿತ್ತು. ಪ್ರಘಟನೆಯಲ್ಲಿ ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷ ಗುರು ತಲೆಗೆ ಕಲ್ಲು ಬಡಿದು ಗಾಯಗೊಂಡಿರುವ ಘಟನೆಯು ಸಂಭವಿಸಿತ್ತು. ಮತ್ತೊಂದೆಡೆ ವಿಶ್ವಕರ್ಮ ಸಮಸಜದ ಮುಖಂಡ ಮಾರುತಿ ಬಡಿಗೇರ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆಯೂ ನಡೆಯಿತು.

ಪ್ರತಿಭಟನಾ ಮೇರವಣಿಗೆಯಲ್ಲಿ ವಿಶ್ವಕರ್ಮ ಸಮಾಜದ ಸ್ವಾಮೀಜಿ, ಚಿತ್ರ ನಟ ಭುವನ್, ನಟಿ ಹರ್ಷಿಕಾ ಪೋಣಚ್ಚಾ ಭಾಗಿಯಾಗಿ ಹೋರಾಟಕ್ಕೆ ಬೆಂಬಲ ನೀಡಿ ಮಧು ಸಾವಿಗೆ ನ್ಯಾಯಕ್ಕಾಗಿ ಒತ್ತಾಯಿಸಿದ್ದರು.  ರ್ಯಾಲಿಯಲ್ಲಿ ವಿದ್ಯಾರ್ಥಿನಿ ಮಧು ಪತ್ತಾರ ಪೋಷಕರು ಪಾಲ್ಗೊಂಡಿದ್ದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

1 hour ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

1 hour ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

1 hour ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

1 hour ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

1 hour ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

1 hour ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420