ಸೇವಾ ಬಳಗ ಆಯೋಜನೆ: ದೀಪ ಹೊತ್ತಿಸಿ, ಮದ್ದನ್ನಲ್ಲ

ಕಲಬುರಗಿ: ಪರಿಸರ ಈಗಾಗಲೇ ಅನೇಕ ಮಾಲಿನ್ಯಗಳಿಂದ ತತ್ತರಿಸಿ ಹೋಗಿದೆ. ದೀಪಾವಳಿಯ ಹಬ್ಬದಲ್ಲಿ ವಿಪರಿತ ಪಟಾಕಿ ಸಿಡಿಸಿ ಮತ್ತಷ್ಟು ಮಾಲಿನ್ಯ ಮಾಡುವುದು ಸಮಂಜಸವಲ್ಲ. ಬದಲಿಗೆ ದೀಪಗಳನ್ನು ಹೊತ್ತಿಸುವ ಮೂಲಕ ಪರಿಸರವನ್ನು ಶುದ್ಧವಾಗಿಸಬಹುದಾಗಿದೆ.ಇದರ ಬಗ್ಗೆ ಎಲ್ಲರೂ ಕಾಳಜಿ ವಹಿಸಬೇಕಾಗಿದೆಯೆಂದು ಉಪನ್ಯಾಸಕ, ಚಿಂತಕ ಪ್ರೊ.ಎಚ್.ಬಿ.ಪಾಟೀಲ ಅಭಿಪ್ರಾಯಪಟ್ಟರು.

ಅವರು ನಗರದ ಆಳಂದ ರಸ್ತೆಯ, ಕೆಎಚ್‍ಬಿ ಗ್ರೀನ್ ಪಾರ್ಕ ಬಡಾವಣೆಯಲ್ಲಿ, ಇಲ್ಲಿನ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಭಾನುವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ‘ದೀಪಾವಳಿ ಅರಿವು ಕಾರ್ಯಕ್ರಮ’ದ ನಿಮಿತ್ಯ ಸಾಮೂಹಿಕವಾಗಿ ದೀಪಗಳನ್ನು ಪ್ರಜ್ವಲಿಸುವ ಮೂಲಕ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಲಾಯಿತು.

ಸಮಾಜ ಸೇವಕ, ಚಿಂತಕ ಶಿವಕಾಂತ ಚಿಮ್ಮಾ ಮಾತನಾಡಿ, ಪ್ರತಿವರ್ಷವು ಅನೇಕ ಮಕ್ಕಳು ಕಣ್ಣಿಗೆ ಗಾಯ ಮಾಡಿಕೊಂಡು ದೃಷ್ಟಿ ಹೀನರಾಗುತ್ತಿರುವುದು ಕಂಡು ಬರುತ್ತದೆ.ಈ ರೀತಿಯಾಗಿ ಆಚರಣೆ ಮಾಡದೇ, ದೀಪಗಳನ್ನು ಬೆಳಗಿಸಿ ಮಾಲಿನ್ಯ ರಹಿತವಾಗಿ, ಪರಸ್ಪರ ಶಾಂತಿ, ಪ್ರೀತಿ, ಸೌಹಾರ್ದತವಾಗಿ ಸಿಹಿ-ತಿಂಡಿಗಳನ್ನು ವಿನಿಮಯ ಮಾಡಿಕೊಂಡು ಅಚರಿಸಬೇಕು. ಶ್ರೇಷ್ಠ ಮೌಲ್ಯವನ್ನು ಸಾರುವ ಈ ಹಬ್ಬದ ಪಾವಿತ್ರ್ಯತೆಯನ್ನು ಉಳಿಸಿಕೊಂಡು ಹೋಗುವದು ತುಂಬಾ ಅವಶ್ಯಕವಾಗಿದೆಯೆಂದು ನುಡಿದರು.

ಕಾರ್ಯಕ್ರಮದಲ್ಲಿ ಬಳಗದ ಕಾರ್ಯದರ್ಶಿ ರಾಜಶೇಖರ ಬಿ.ಮರಡಿ, ಖಜಾಂಚಿ ಸೋಮಶೇಖರ ಮೂಲಗೆ, ಸದಸ್ಯ ಸೋಮಶೇಖರ ಮೂಲಗೆ, ಬಡಾವಣೆಯ ಪ್ರಮುಖಾದ ಮಹಾದೇವ ಹಿರೇಮಠ, ವೀರೇಶ ಬೋಳಶೆಟ್ಟಿ, ಸೂರ್ಯಕಾಂತ ಸಾವಳಗಿ, ಡಿ.ವಿ.ಕುಲಕರ್ಣಿ, ಸಂಗಮೇಶ ಸರಡಗಿ, ಚಂದ್ರಕಾಂತ ತಳವಾರ, ರಾಮದಾಸ ಪಾಟೀಲ, ಕೆ.ವಿ.ಕುಲಕರ್ಣಿ, ಅನಿತಾ ಬಕರೆ, ಜ್ಯೋತಿ ಚಿಮ್ಮಾ, ಬಾಲಾಜಿ ರುದ್ರವಾಡಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

9 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

10 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

10 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

10 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420