ಕಲಬುರಗಿ: ವಿದ್ಯಾರ್ಥಿಗಳನ್ನು ತಮ್ಮಲ್ಲಿರುವ ಅದ್ಭುತವಾದ ಜ್ಞಾನದ ಮೂಲಕ ಉತ್ತಮ ಪ್ರಜೇಗಳನ್ನಾಗಿ ನಿರ್ಮಾಣ ಮಾಡುವ ಶಿಕ್ಷಕನೆ ನಿಜವಾದ ಶಿಲ್ಪಿ ಎಂದು ಚಲನಚಿತ್ರರಂಗದ ನಿರ್ದೇಶಕ-ಸಾಹಿತಿ ಮಂಜುನಾಥ ಪಾಂಡವಪುರ ಅಭಿಪ್ರಾಯಪಟ್ಟರು.
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಇಲ್ಲಿನ ವಿಶ್ವಜ್ಯೋತಿ ಪ್ರತಿಷ್ಠಾನದ ವತಿಯಿಂದ ನಗರದ ಆರಾಧನಾ ಪದವಿಪೂರ್ವ ಕಾಲೇಜಿನಲ್ಲಿಂದು ಏರ್ಪಡಿಸಿದ್ದ ಸಿರಿನುಡಿ ಸಂಭ್ರಮ-2019 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕನ್ನಡ ಕಟ್ಟುವ ಕಾರ್ಯದಲ್ಲಿ ಇಂದಿನ ವಿದ್ಯಾರ್ಥಿಗಳು ಮುಂದಾಗಬೇಕೆಂದು ಸಲಹೆ ನೀಡಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುರೇಶ ಬಡಿಗೇರ ಮಾತನಾಡಿ, ಈ ಭಾಗದ ಗಡಿಭಾಗದಲ್ಲಿ ಕನ್ನಡ ಜಾಗೃತಿ ಸಮ್ಮೇಳನಗಳನ್ನು ಹಮ್ಮಿಕೊಂಡು, ಕನ್ನಡ ಭಾಷೆಯ ಏಳಿಗೆಗಾಗಿ ಶ್ರಮಿಸುತ್ತೇನೆ ಎಂದ ಅವರು, ಬೆಂಗಳೂರಿಗೆ ಸೀಮಿತವಾಗಿರುವ ಕಾರ್ಯಕ್ರಮಗಳನ್ನು ಕಲಬುರಗಿ ಗಡಿನೆಲಕ್ಕೆ ತರುತ್ತೇನೆಂದು ಮಾರ್ಮಿಕವಾಗಿ ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರತಿಷ್ಠಾನದ ಸಂಸ್ಥಾಪಕ ವಿಜಯಕುಮಾರ ತೇಗಲತಿಪ್ಪಿ, ಕನ್ನಡವೇ ನಮ್ಮ ಉಸಿರು, ಕನ್ನಡವೇ ನಮ್ಮ ಬದುಕು ಎಂಬ ಅಭಿಮಾನವನ್ನು ಬೆಳೆಸಿಕೊಳ್ಳುವುದರ ಜೊತೆಗೆ, ಅನ್ಯ ಭಾಷಿಕರು ಕನ್ನಡವನ್ನು ಕಲಿತು ಕನ್ನಡದ ವಾತಾವರಣದಲ್ಲಿ ಸುಲಭವಾಗಿ ಸಮ್ಮಿಲನಗೊಳ್ಳುವಂತೆ ಉತ್ತೇಜಿಸುವುದರೊಂದಿಗೆ ಕನ್ನಡದ ವಾತಾವರಣವನ್ನು ಶಾಶ್ವತವಾಗಿ ನೆಲೆಗೊಳ್ಳುವಂತೆ ಮಾಡಬೇಕಾಗಿದೆ ಎಂದು ಹೇಳಿದರು.
ಕಾಲೇಜಿನ ಪ್ರಾಚಾರ್ಯ ಚೇತನಕುಮಾರ ಗಾಂಗಾಜೀ ಅಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿ ಹಣಮಂತರಾಯ ಅಟ್ಟೂರ, ಕಥೆಗಾರತಿ ಜ್ಯೋತಿ ಕುಲಕರ್ಣಿ, ಪ್ರಮುಖರಾದ ಶಿವರಾಜ ಅಂಡಗಿ, ಪರಮೇಶ್ವರ ಶಟಕಾರ, ಸವಿತಾ ಪಾಟೀಲ, ಜಗದೇವಿ ಚೆಟ್ಟಿ, ಅಂಬಿಕಾ ದುರ್ಗಿ, ರವೀಂದ್ರಕುಮಾರ ಭಂಟನಳ್ಳಿ, ಪ್ರಭುದೇವ ಯಳವಂತಗಿ, ಬಸವರಾಜ ಹೀರಾಪುರ, ಶಿವಾನಂದ ಮಠಪತಿ ಇತರರಿದ್ದರು.
ಸಾಮಾಜಿಕ ಸೇವೆಯ ಜೊತೆಗೆ ಕನ್ನಡ ಕಟ್ಟುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ನಾಗರಾಜ ಜಮದರಖಾನಿ, ಮಹ್ಮದ್ ಅಯಾಜುದ್ದೀನ್, ನರಸಿಂಹ ಮೆಂಡನ್, ಆರ್.ಜೆ.ವಾಣಿ, ಶ್ರವಣಕುಮಾರ ಮಠ ಅವರನ್ನು ಇದೇ ಸಂದರ್ಭದಲ್ಲಿ ವಿಶೇಷವಾಗಿ ಸತ್ಕರಿಸಲಾಯಿತು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…