ಬಿಸಿ ಬಿಸಿ ಸುದ್ದಿ

ಖಾಸಗಿ ಶಾಲೆಗಳ ರಜೆ ರದ್ದುಗೊಳಿಸಿ: ವಿದ್ಯಾರ್ಥಿಗಳೊಂದಿಗೆ ರಾಜ್ಯೋತ್ಸವ ಆಚರಣೆಗೆ ಒತ್ತಾಯ

ಆಳಂದ: ಕನ್ನಡ ರಾಜ್ಯೋತ್ಸವ ವಿದ್ಯಾರ್ಥಿಗಳೊಂದಿಗೆ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಆಚರಿಸಲು ಕ್ರಮಕೈಗೊಳ್ಳಬೇಕು ಎಂದು ಜಯ ಕರ್ನಾಟಕ ಸಂಘಟನೆಯ ತಾಲೂಕು ಅಧ್ಯಕ್ಷ ಬಸವರಾಜ ಎಸ್. ಕೋರಳ್ಳಿ ಅವರು ಇಂದಿಲ್ಲಿ ಒತ್ತಾಯಿಸಿದರು.

ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಗುರುವಾರ ಪತ್ರ ಬರೆದಿರುವ ಅವರು, ಸರ್ಕಾರವು ಶಾಲೆಗಳಿಗೆ ಅ. ೬ರಿಂದ ೨೦ರವರೆಗೆ ರಜೆ ನೀಡಲಾಗಿತು. ನಂರತ ಅ.೨೧ರಿಂದ ಶಾಲೆ ಆರಂಭಕ್ಕೆ ಶಿಕ್ಷಣ ಇಲಾಖೆಯ ಆದೇಶವಿದೆ. ಆದರೆ, ಆಳಂದ ತಾಲೂಕಿನ ಅನೇಕ ಖಾಸಗಿ ಶಾಲೆಗಳೂ ಸರ್ಕಾರದ ಆದೇಶ ಗಾಳಿಗೆ ತೂರಿ ತಮ್ಮ ಶಾಲೆಗಳಿಗೆ ರಜೆ ಮುಂದುವರೆಸಿ ನ.೪ರಂದು ಶಾಲೆ ಪ್ರಾರಂಭ ಕೈಗೊಂಡು ಆದೇಶ ಉಲ್ಲಂಘಿಸಿವೆ ಎಂದು ಆಕ್ಷೇಪಿಸಿದರು.

ಖಾಸಗಿ ಶಾಲೆಗಳಲ್ಲಿ ಹೆಚ್ಚಿನ ರಜೆ ಮುಂದುವರೆಸಿದ್ದರಿಂದಾಗಿ ನ.೧ರಂದು ಆಚರಿಸುವ ರಾಜ್ಯೋತ್ಸವ ಆಚರಣೆಯಿಂದ ಮಕ್ಕಳಿಗೆ ದೂರವಿಟ್ಟಂತಾಗಿದೆ. ಕೇವಲ ಶಾಲೆ, ಕಾಲೇಜು ಮುಖ್ಯಸ್ಥರು ಸೇರಿ ಮಕ್ಕಳಿಲ್ಲದೆ ಕಾಟಾಚಾರದ ಕಾರ್ಯಕ್ರಮ ಧ್ವಜಾರೋಹಣ ಮಾಡಿ ಕೈತೊಳೆದುಕೊಂಡರೆ ಸಾಲದು, ಇಲ್ಲಿ ಕೇವಲ ಧ್ವಜಾರೋಹಣ ಮಾಡಿಮುಗಿಸಿದರೆ ಸಾಕು ಎಂಬ ಇವರ ಉದ್ದೇಶವಾಗಿದೆ ಎಂದರು. ಆದರೆ ವಾಸ್ತವ್ಯವಾಗಿ ಮಕ್ಕಳಿಗೆ ಕನ್ನಡ ನಾಡು ನುಡಿಯ ಬಗ್ಗೆ ಅರಿವು ಮೂಡಿಸಬೇಕಾದ ಸಮಯದಲ್ಲಿ ಶಾಲೆಗಳಿಗೆ ರಜೆ ನೀಡಿ ಅವರನ್ನು ನಾಡು, ನುಡಿಯ ಬಗ್ಗೆ ತಿಳಿವಳಿಕೆಯ ಅರಿವಿನಿಂದ ವಂಚಿತರನ್ನಾಗಿ ಮಾಡಿದಂತಾಗುತ್ತದೆ. ವಾಸ್ತವಿಕವಾಗಿ ಕೆಲವು ಖಾಸಗಿ ಕನ್ನಡ ಉತ್ಸವದ ಕುರಿತು ಮಕ್ಕಳಿಗೆ ಅರಿವು ಮೂಡಿಸುವುದು ಖಾಸಗಿ ಶಾಲೆಗಳ ಕರ್ತವ್ಯವಾಗಿದೆ. ಆದರೆ ಇವರು ಶಾಲೆಗೆ ರಜೆ ಘೋಷಿಸಿದ್ದರಿಂದ ಮಕ್ಕಳು ಶಾಲೆಗೆ ಬಾರದೆ ದೂರ ಉಳಿದಂತಾಗುತ್ತದೆ.

ಈ ನಿಟ್ಟಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕೂಡಲೇ ಆದೇಶ ಹೊರಡಿಸಿ ನ.೧ರಂದು ಮಕ್ಕಳು ಒಳಗೊಂಡು ಕನ್ನಡ ರಾಜ್ಯೋತ್ಸವ ಆಚರಣೆ ಕೈಗೊಳ್ಳಲು ಆದೇಶಿಸಬೇಕು. ಒಂದೊಮ್ಮೆ ಈ ಆದೇಶ ಮಿರುವ ಶಾಲೆಗಳ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು. ಈ ಕ್ರಮಕ್ಕೆ ಮುಂದಾಗದೆ ಹೋದಲ್ಲಿ ಸಂಘಟನೆಯಿಂದ ಉಗ್ರ ಸ್ವರೂಪದ ಹೋರಾಟ ಕೈಗೊಳ್ಳಲಾಗುವುದು ಎಂದು ಬರೆದ ಪತ್ರದಲ್ಲಿ ಕೋರಳ್ಳಿ ಅವರು ಎಚ್ಚರಿಸಿದ್ದಾರೆ.

ಆಚರಣೆ: ಪಟ್ಟಣದಲ್ಲಿ ತಾಲೂಕು ಆಡಳಿತ ಆಶ್ರಯದಲ್ಲಿ ನ.೧ರಂದು ಕನ್ನಡ ರಾಜ್ಯೋತ್ಸವ ಅಂಗವಾಗಿ ವಿವಿಧ ಕಾರ್ಯಕ್ರಮಳು ಆಯೋಜಿಸಲಾಗಿದೆ. ಅಂದು ಬೆಳಗಿನ ೮:೩೦ಕ್ಕೆ ತಹಸೀಲ್ದಾರ ಕಚೇರಿಯಲ್ಲಿ ಧ್ವಜಾರೋಹಣ, ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪನಮನ, ನಂತರ ಗುರುಭವನದಲ್ಲಿ ವೇದಿಕೆಯ ಸಮಾರಂಭ ಜರುಗಲಿದೆ ಎಂದು ಉತ್ಸವ ಸಮಿತಿಯ ಅಧ್ಯಕ್ಷ, ತಹಸೀಲ್ದಾರ ದಯಾನಂದ ಪಾಟೀಲ ಅವರು ತಿಳಿಸಿದ್ದಾರೆ.

ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಮಾದನಹಿಪ್ಪರಗಾ ಮಠದ ಶ್ರೀ ಅಭಿನವ ಶಿವಲಿಂಗ ಮಹಾಸ್ವಾಮಿಗಳ ವಹಿಸುವರು. ಶಾಸಕ ಸುಭಾಷ ಗುತ್ತೇದಾರ ಅವರು ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ತಾಪಂ ಅಧ್ಯಕ್ಷೆ ನಾಗಮ್ಮ ಅಶೋಕ ಗುತ್ತೇದಾರ, ಗುರುನಾಥ ಡಿ. ಪಾಟೀಲ, ಕಸಾಪ ಅಧ್ಯಕ್ಷ ವಿಶ್ವನಾಥ ಭಕರೆ ಆಗಮಿಸಲಿದ್ದಾರೆ. ಉಪನ್ಯಾಸಕ ಸಂಜಯ ಪಾಟೀಲ ಉಪನ್ಯಾಸ ನೀಡುವರು. ಹೆಚ್ಚಿನ ಸಂಖ್ಯೆಯಲ್ಲಿ ಅಧಿಕಾರಿಗಳು, ನಾಗರಿಕರು, ಕನ್ನಡಪರ ಸಂಘಟನೆಗಳ ಮುಖಂಡರು ಪಾಲ್ಗೊಳ್ಳಬೇಕು ಎಂದು ಅವರು ಕೋರಿದ್ದಾರೆ.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

1 hour ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

1 hour ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

1 hour ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago