ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನ ಬರ್ಬರ ಕೊಲೆ

0
597

ಕಲಬುರಗಿ: ಮರಳು ಸಾಗಾಣಿಕೆ ಗುತಿಗೆದಾರನ ಕಾರಿಗೆ ಕಾರು ಹೊಡೆದು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾದ ರೀತಿಯಲ್ಲಿ  ಕೊಲೆ ಮಾಡಿರುವ ಘಟನೆ ಇಲ್ಲಿನ ಶರಣಸಿರಸಗಿ ಗ್ರಾಮದ ಸಿನಿಮೀಯ ಬಳಿ ನಡೆದಿದೆ.

ಜೇವರ್ಗಿ ತಾಲ್ಲೂಕಿನ ಮಯೂರ ಗ್ರಾಮದ ನಿವಾಸಿಯಾದ ಶಿವಲಿಂಗ ಮಾಳಪ್ಪ ಭಾವಿಕಟ್ಟಿ (46) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.

Contact Your\'s Advertisement; 9902492681

ಹಳೆ ವೈಷಮ್ಯದ ಹಿನ್ನೆಲೆ ಕಾರ್ ಗೆ ಕಾರು ಡಿಕ್ಕಿ ಹೊಡೆದು, ನಂತರ ಮಾರಕಾಸ್ತ್ರಗಳಿಂದ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಯೂರ ಗ್ರಾಮದ ಗಣಮಂತ ಎಂಬಾತನನ್ನು ಬಂಧಿಸಿದ್ದು, ಇನ್ನೂ ಎಳು ಜನ ಆರೋಪಿಗಳು ಪರಾರಿಯಾಗಿದ್ದಾರೆ.

ಕೊಲೆಯಾದ ಶವವನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಉಳಿದ ಆರೋಪಿಗಳ ಬಂಧನಕ್ಕೆ ಪೊಲೀಸ್ ರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಕುರಿತು ಫರತಾಹಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here