ಜೇವರ್ಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಮುಖಂಡನ ಕೊಲೆ

0
917

ಕಲಬುರಗಿ: ಜೇವರ್ಗಿಯ ಬಿಜೆಪಿ ಮುಖಂಡ ಹಾಗೂ ಗುತ್ತಿಗೆದಾರನ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆಸಿ ನಂತರ ಮಾರಾಕಾಸ್ರ್ತಗಳಿಂದ ಸಿನೀಮಯ ರೀತಿಯಲ್ಲಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಕಲಬುರಗಿ ಹೊರವಲಯದ ಶರಣಶಿರಸಗಿ ಮಡ್ಡಿ ಬಳಿ ನಡೆದಿದೆ.

ಜೇವರ್ಗಿ ತಾಲ್ಲೂಕಿನ ಮಯೂರ ಗ್ರಾಮದ ಬಿಜೆಪಿ ಮುಖಂಡ ಶಿವಲಿಂಗ ಮಾಳಪ್ಪ ಭಾವಿಕಟ್ಟಿ (46) ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ.

Contact Your\'s Advertisement; 9902492681

ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಕಾರ್ ಹಿಂದೆ ಬೆನ್ನತ್ತಿದ ದುಷ್ಕರ್ಮಿಗಳು ಶರಣಸಿರಸಗಿ ಬಳಿ ಅಡ್ಡಲಾಗಿ ನಿಲ್ಲಿಸಿ ಕೊಲೆ ಮಾಡಿದ್ದಾರೆ. ಹಳೆ ವೈಷಮ್ಶದ ಹಿನ್ನೆಲೆ ಹಾಗೂ ಗುತ್ತಿಗೆ ಕೆಲಸದ ವಿಚಾರವಾಗಿ ಅದೇ ಗ್ರಾಮದ ಹಲವರ ಜೊತೆ ವೈಷಮ್ಶ ಹೊಂದಿದ್ದರು. ಹಲವು ಸಲ ನ್ಶಾಯ ಪಂಚಾಯಿತಿ ಮೂಲಕ ವಿವಾದ ಬಗೆಹರಿಸಿದ್ದರು ಸಹ ಬಿಡದ ಗುಂಪು ಕೊಲೆ ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಯೂರ ಗ್ರಾಮದ ಗಣಮಂತ ಎಂಬಾತನನ್ನು ಬಂಧಿಸಿದ್ದು, ಇನ್ನೂ ಎಳು ಜನ ಆರೋಪಿಗಳು ಪರಾರಿಯಾಗಿದ್ದಾರೆ. ಉಳಿದ ಆರೋಪಿಗಳ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಕುರಿತು ಫರತಾಹಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶವವನ್ನು ಜಿಲ್ಲಾ ಆಸ್ಪತ್ರೆಯಿಂದ ಮರಣೋತ್ತರ ಪರೀಕ್ಷೆ ನಡೆಸಿ ಸ್ವಗ್ರಾಮ ಮಯೂರಕ್ಕೆ ರವಾನಿಸಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here