ಕಲಬುರಗಿ: ಜಿಲ್ಲೆಯ ಜನರಿಗೆ ಸ್ಟಾರ್ ಏರ್ ಸಿಹಿ ಸುದ್ದಿ ಕೊಟ್ಟಿದೆ. ಕಲಬುರ್ಗಿ ವಿಮಾನ ನಿಲ್ದಾಣದಲ್ಲಿ ವಾಣಿಜ್ಯ ಸಂಚಾರಕ್ಕೆ ನವೆಂಬರ್ ಒಂದರಂದು ಒಪ್ಪಿಗೆ ಸಿಕ್ಕಿತ್ತು.
ಸ್ಟಾರ್ ಏರ್ ಬೆಂಗಳೂರು- ತಿರುಪತಿ ನಡುವೆ ಶೀಘ್ರದಲ್ಲಿಯೇ ವಿಮಾನ ಸೇವೆಯನ್ನು ಆರಂಭಿಸಲಿದೆ. ಉಡಾನ್ ಯೋಜನೆಯಡಿ ಕಲಬುರ್ಗಿ ವಿಮಾನ ನಿಲ್ದಾಣ ಸೇರ್ಪಡೆಗೊಂಡಿದೆ. ಈ ಮಧ್ಯೆ, ಬೆಂಗಳೂರು- ಕಲಬುರ್ಗಿ- ತಿರುಪತಿ ನಡುವಿನ ವಿಮಾನ ಸೇವೆಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗಿದೆ ಎಂದು ಸ್ಟಾರ್ ಏರ್ ಸಂಸ್ಥಾಪಕ ಸಂಜಯ್ ಘೋಡಾವತ್ ಅವರು ಹೇಳಿದ್ದಾರೆ.
ಸುಮಾರು ೧೭೫.೫೭ ಕೋಟಿ ರೂ.ಗಳ ವೆಚ್ಚದಲ್ಲಿ ಕಲಬುರ್ಗಿ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡಲಾಗಿದೆ. ನವೆಂಬರ್ ಒಂದರಿಂದಲೇ ವಾಣಿಜ್ಯ ಸಂಚಾರ ಆರಂಭಿಸಲು ವಿಮಾನ ನಿಲ್ದಾಣ ಪ್ರಾಧಿಕಾರ ಒಪ್ಪಿಗೆ ನೀಡಿತು.
ಕಳೆದ ೨೦೧೮ರ ಆಗಸ್ಟ್ ೨೬ರಂದು ಪ್ರಾಯೋಗಿಕವಾಗಿ ಕಲಬುರ್ಗಿ ವಿಮಾನ ನಿಲ್ದಾಣದಲ್ಲಿ ಹಾರಾಟ ನಡೆಸಲಾಗಿತ್ತು. ೭೪೨.೨೩ ಎಕರೆ ಪ್ರದೇಶದಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡಲಾಗಿದೆ.
ಏರ್ ಬಸ್ನಂತಹ ಬೃಹತ್ ವಿಮಾನಗಳು ಸಹ ಬಂದಿಳಿಯಲು ಅನುಕೂಲ ಆಗುವಂತೆ ೩,೭೨೫ ಉದ್ದದ ರನ್ವೇಯನ್ನು ಸಹ ಕಲಬುರ್ಗಿ ವಿಮಾನ ನಿಲ್ದಾಣದಲ್ಲಿ ನಿರ್ಮಾಣ ಮಾಡಲಾಗಿದೆ. ಸ್ಟಾರ್ ಏರ್ ವಿಮಾನ ಮೊದಲ ಬಾರಿಗೆ ಇಲ್ಲಿಂದ ಸಂಚಾರ ನಡೆಸುವ ಸಾಧ್ಯತೆ ಇದೆ.
ಸಂಸದರ ಚರ್ಚೆ: ಗುರುವಾರ ಕಲಬುರ್ಗಿ ವಿಮಾನ ನಿಲ್ದಾಣದ ಉದ್ಘಾಟನೆ ಕುರಿತು ನಾಗರಿಕ ವಿಮಾನಯಾನ ಕಾರ್ಯದರ್ಶಿ ಪ್ರದೀಪ್ಸಿಂಗ್ ಕರೋಲಾ ಅವರೊಂದಿಗೆ ಸಂಸದ ಡಾ. ಉಮೇಶ್ ಜಾಧವ್ ಅವರು ಚರ್ಚೆ ನಡೆಸಿದರು.
ಕಲಬುರ್ಗಿಯಲ್ಲಿ ವಿಮಾನ ಹಾರಾಟ ಮಾಡುವ ಕುರಿತು ಇಂಡಿಗೋ ಏರ್ಲೈನ್ಸ್ ಅಧ್ಯಕ್ಷ ರಾಹುಲ್ ಭಾಟಿಯಾ ಅವರೊಂದಿಗೆ ಸಂಸದ ಡಾ. ಉಮೇಶ್ ಜಾಧವ್ ಅವರು ಚರ್ಚೆ ನಡೆಸಿದರು.
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…