ಆಟದ ಮೈದಾನದ ಕಾಮಗಾರಿಗೆ ಶಾಸಕ ಸುಭಾಷ್ ಆರ್ ಗುತ್ತೇದಾರ ಅವರಿಂದ ಚಾಲನೆ

0
52

ಆಳಂದ: ತಾಲೂಕಿನ ಹೊದಲೂರ ತಾಂಡದಲ್ಲಿ ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆ ಅಡಿಯಲ್ಲಿ ರೂ. ೮.೦೦ಲಕ್ಷ ಅನುದಾನದ ಆಟದ ಮೈದಾನ ನಿರ್ಮಾಣ ಕಾಮಗಾರಿಗೆ ಶಾಸಕ ಸುಭಾಷ್ ಆರ್ ಗುತ್ತೇದಾರ ಗುದ್ದಲಿ ಪೂಜೆ ಕಾರ್ಯಕ್ರಮ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಒಳ್ಳೆಯ ಆಟದ ಮೈದಾನ ನಿರ್ಮಣ ಮಾಡುವುದರಿಂದ ಮಕ್ಕಳು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗುತ್ತಾರೆ. ಗ್ರಾಮೀಣ ಭಾಗದ ಶಾಲೆಗಳಿಗೆ ಮೂಲ ಸೌಲಭ್ಯ ಕಲ್ಪಿಸುವುದಕ್ಕೆ ನನ್ನ ಅಧಿಕಾರಾವಧಿಯಲ್ಲಿ ಅದ್ಯತೆ ನೀಡುತ್ತೆನೆ ಎಂದು ಹೇಳಿದರು.

Contact Your\'s Advertisement; 9902492681

ಕಾರ್ಯಕ್ರಮದಲ್ಲಿ ತಾ.ಪಂ. ಉಪಾಧ್ಯಕ್ಷ ಗುರುನಾಥ ಪಾಟೀಲ್, ತಾಲೂಕಾ ಬಿ.ಜೆ.ಪಿ. ಅಧ್ಯಕ್ಷ ಮಲ್ಲಿಕಾರ್ಜುನ ಕಂದಗೂಳೆ, ಗ್ರಾಮ ಪಂಚಾಯತ ಸದಸ್ಯ ನೀಲಕಂಠ ಚವ್ಹಾಣ, ಗೋಪಾಲ ನಾಯಕ, ಮಲ್ಲಿನಾಥ ಕೋರೆ, ಬಾಬು ರಾಠೋಡ, ಮಹಿಬೂಬ್ ಲೋಕೋಪಯೋಗಿ ಇಲಾಖೆ ಎಇಇ ಈರಣ್ಣ ಕುಣಕೇರಿ, ಜೆಇ ಕರಸಬಸಪ್ಪ ಪರಸಗಿ ಮುಂತಾದ ಪ್ರಮುಖರು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here