ಕಲಬುರಗಿ: ಉತ್ತರ ಕರ್ನಾಟಕದ ಯಾದಗಿರಿ, ಸುರಪುರ ತಾಲ್ಲೂಕಿನಲ್ಲಿ ಹಲವಾರು ಕಡೆ ಮಳೆಯಿಂದಾಗಿ ನಮ್ಮ ಭಾಗದ ಜನರು ಕಷ್ಟದಲ್ಲಿರುವಾಗ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವುದು ಸರಿಯಲ್ಲ, ಈ ಬಾರಿ ಸಮ್ಮೇಳನ ಮುಂದೂಡಿ ಮುಂದಿನ ವರ್ಷ ಸಮ್ಮೇಳನ ಅದ್ದೂರಿಯಾಗಿ ನಡೆಸಬೇಕೆಂದು ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಎಂ ಎಸ್ ಪಾಟೀಲ್ ನರಿಬೋಳ ಆಗ್ರಹಿಸಿದ್ದಾರೆ.
ಕಲಬುರಗಿಯಲ್ಲಿ ನಡೆಯುತ್ತಿರುವುದು ಸಂತೋಷದ ವಿಚಾರ ಆದರೆ ಉತ್ತರ ಕರ್ನಾಟಕದಲ್ಲಿ ವಿಶೇಷವಾಗಿ ಯಾದಗಿರಿ ಜಿಲ್ಲೆಯಲ್ಲಿ ಸುರಪುರ ತಾಲ್ಲೂಕಿನಲ್ಲಿ ಹಲವಾರು ಕಡೆ ಮಳೆಯಿಂದಾಗಿ ನಮ್ಮಜನರು ಕಷ್ಟದಲ್ಲಿರುವಾಗ ಈ ಉದ್ದೇಶದಿಂದಲೇ ಈ ವರ್ಷದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಹಲವಾರು ಜಯಂತಿಗಳು ಕೂಡ ಸರಳವಾಗಿ ಆಚರಿಸಿ ಅದರ ಖರ್ಚನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಗಿದೆ.
ಸಮ್ಮೇಳನ ಆಚರಿಸುವ ಮೂಲಕ ಕಷ್ಟದಲ್ಲಿರುವ ಜನರಿಗೆ ನಾವು ತಪ್ಪು ಸಂದೇಶ ನೀಡಿದಂತಾಗಬಹುದೆಂದು ಅವರು ಕಳವಳ ವ್ಯಕ್ತಪಡಿಸಿ ಕನ್ನಡದ ಹಬ್ಬ ಎಲ್ಲರೂ ಖುಷಿಯಿಂದ ಸಮ್ಮೇಳನ ಮಾಡಬಹುದೆಂದು ಕರೆ ನೀಡಿದರು.
ಸಮಂಜಸವಲ್ಲ ಎನ್ನುವ ದೃಷ್ಟಿಯಿಂದ ನಾಳೆ ಎಲ್ಲ ಕನ್ನಡಪರ ಜನಪರ ಸಂಘಟನೆಗಳ ಮುಖಂಡರು ಮತ್ತು ಚಿಂತಕರು, ಸಾಹಿತಿಗಳ ಜೊತೆ ಚರ್ಚಿಸಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಸಮ್ಮೇಳನ ಮುಂದೂಡುವ ಕುರಿತು ಮನವಿ ಮಾಡಲಾಗುವುದೆಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ರವಿಚಂದ್ರ ಪಾಟೀಲರ ಹರಸೂರ, ಮುಖಂಡ ತಾತ ಗೌಡ ಪಾಟೀಲ, ಮಹೇಶ್ ಕೆ ಪಾಟೀಲ ಇದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…