ಇದೇ 22 ರಿಂದ ಕಲಬುರಗಿ ಬೆಂಗಳೂರು ವಿಮಾನ ಹಾರಾಟ: ಮೊದಲ ಟಿಕೆಟ್ ಪಡೆದ ಸಂಸದ ಡಾ. ಜಾಧವ್

ಕಲಬುರಗಿ: ಈ ಭಾಗದ ಜನರ ಬಹುದಿನಗಳ ಬೇಡಿಕೆ ಇಡೇರುವ ಘಳಿಗೆ ಬಂದಿದೆ. ನವೆಂಬರ್ ೨೨ರಿಂದ ಕಲಬುರಗಿ – ಬೆಂಗಳೂರು ಮೊದಲ ವಿಮಾನಯಾನ ಪ್ರಾರಂಭವಾಗಲಿದೆ. ಸ್ಟಾರ್ ಏರ್ ಏರ್ಲೈನ್ಸ್ ಸಂಸ್ಥೆಯ ವಿಮಾನ ಬರಲಿದ್ದು, ಮೊದಲ ಟಿಕೆಟ್‌ನ್ನು ಸಂಸದ ಡಾ. ಉಮೇಶ್ ಜಾಧವ್ ಅವರು ಪಡೆದಿದ್ದಾರೆ.
ನವೆಂಬರ್ ೨೨ರಂದು ಮಧ್ಯಾಹ್ನ ೧೨-೨೦ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟು, ೧.೫೫ಕ್ಕೆ ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ಬಂದಿಳಿಯಲಿದೆ. ಮತ್ತೆ ೧.೫೫ಕ್ಕೆ ಕಲಬುರ್ಗಿಯಿಂದ ಬೆಂಗಳೂರಿಗೆ ತೆರಳಲಿದೆ.

ನವೆಂಬರ್ ೨೨ರಂದು ಪ್ರಾರಂಭವಾಗುವ ಮೊದಲ ವಿಮಾನದಲ್ಲಿ ಪ್ರಯಾಣಿಸಲು ಈಗಾಗಲೇ ಟಿಕೆಟ್ ಬುಕ್ಕಿಂಗ್ ಪ್ರಾರಂಭವಾಗಿದೆ. ಸಂಸದ ಡಾ. ಉಮೇಶ್ ಜಾಧವ್ ಅವರು ೭೯೯೮ರೂ.ಗಳ ಮೊದಲ ಟಿಕೆಟ್ ಪಡೆಯುವ ಮೂಲಕ ಮೊದಲ ಪ್ರಯಾಣಿಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಬೆಂಗಳೂರಿನಿಂದ ಕಲಬುರ್ಗಿಗೆ ಹಾಗೂ ಕಲಬುರ್ಗಿಯಿಂದ ಬೆಂಗಳೂರಿಗೆ ಮೊದಲ ಟಿಕೆಟ್ ಪಡೆದು ಮೊದಲ ಪ್ರಯಾಣಿಕರಾಗಿ ಪ್ರಯಾಣಿಸಲಿದ್ದೇನೆ ಎಂದು ಸಂಸದ ಡಾ. ಉಮೇಶ್ ಜಾಧವ್ ಅವರು ಟ್ವಿಟರ್ ಖಾತೆಯಲ್ಲಿ ತಮ್ಮ ಸಂತೋಷ ಹಂಚಿಕೊಂಡಿದ್ದಾರೆ.

ನವೆಂಬರ್ ೨೨ರಿಂದ ಕಲಬುರ್ಗಿಯಿಂದ ಬೆಂಗಳೂರಿಗೆ ವಿಮಾನ ಸೇವೆ ಆರಂಭವಾದರೂ ಸಹ ೨೩ರಂದು ವಿಮಾನ ಸೇವೆ ಇಲ್ಲ. ನವೆಂಬರ್ ೨೪ರಿಂದ ಪ್ರತಿದಿನ ವಿಮಾನ ಸೇವೆ ಇರಲಿದೆ. ಪ್ರತಿ ದಿನ ಮಧ್ಯಾಹ್ನ ೧೨-೨೦ಕ್ಕೆ ಬೆಂಗಳೂರಿನಿಂದ ಹೊರಡುವ ವಿಮಾನವು ಮಧ್ಯಾಹ್ನ ೧-೨೫ಕ್ಕೆ ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದೆ. ಮತ್ತೆ ೧.೫೫ಕ್ಕೆ ಕಲಬುರ್ಗಿ ವಿಮಾನ ನಿಲ್ದಾಣದಿಂದ ಹೊರಟು ವಿಮಾನವು ೩ ಗಂಟೆಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದೆ ಎಂದು ಸ್ಟಾರ್ ಏರ್ ಲೈನ್ಸ್ ವೆಬ್‌ಸೈಟ್ ಮೂಲಗಳಿಂದ ಗೊತ್ತಾಗಿದೆ. ಬೆಂಗಳೂರು- ಕಲಬುರ್ಗಿ ನಡುವಿನ ವಿಮಾನಯಾನ ದರವು ೨೮೫೦ರೂ.ಗಳಿಂದ ಪ್ರಾರಂಭವಾಗಲಿದೆ.

ಈ ಭಾಗದ ಜನರ ಹಾಗೂ ಉದ್ಯಮಿಗಳ ಬಹುದಿನಗಳ ಬೇಡಿಕೆಯಾದ ವಿಮಾನಯಾನ ಪ್ರಾರಂಭಕ್ಕೆ ಸಂಸದ ಡಾ. ಉಮೇಶ್ ಜಾಧವ್ ಅವರು ಮುತುವರ್ಜಿ ವಹಿಸಿ ಪಟ್ಟ ಶ್ರಮಕ್ಕೆ ಹಲವಾರು ಜನರು ಶ್ಲಾಘಿಸಿದ್ದಾರೆ. ಕೇವಲ ಕಲಬುರ್ಗಿ ನಗರದ ಜನತೆಯಲ್ಲದೇ ಯಾದಗಿರಿ, ರಾಯಚೂರು, ಕೊಪ್ಪಳ್, ವಿಜಯಪೂರ್, ಬೀದರ್, ತೆಲಂಗಾಣದ ಗಡಿಭಾಗವಾದ ತಾಂಡೂರ್, ಕೊಡಂಗಲ್, ಕೋಸಗಿ, ಜಹೀರಾಬಾದ್ ಜನರಿಗೂ ವಿಮಾನಯಾನ ಅನುಕೂಲವಾಗಲಿದೆ.

ಕಲಬುರಗಿ- ಬೆಂಗಳೂರು ವಿಮಾನಯಾನ ಸೇವೆಯ ಕುರಿತಂತೆ ಸಂಸದ ಡಾ. ಉಮೇಶ್ ಜಾಧವ್ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಹಲವಾರು ಜನರು ಟ್ವಿಟ್ ಮೂಲಕ ಶ್ಲಾಘಿಸಿದ್ದಾರೆ. ಆದಾಗ್ಯೂ, ಕೇಂದ್ರದ ಮಾಜಿ ಸಚಿವ ಡಾ. ಮಲ್ಲಿಕಾರ್ಜುನ್ ಖರ್ಗೆಯವರ ಬೆಂಬಲಿಗರು ನಿಮ್ಮದೇನು ಕೊಡುಗೆ? ಎಂದು ಸಂಸದ ಡಾ. ಉಮೇಶ್ ಜಾಧವ್ ಅವರನ್ನು ಪ್ರಶ್ನಿಸುವ ಮೂಲಕ ಕಾಲೆಳೆದಿದ್ದಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420