ದಾಸೋಹ ಸೂತ್ರಗಳು ಜೀವನದ ಮೌಲ್ಯ ಹೊಂದಿವೆ: ಪ್ರೊ.ಎಚ್.ಎಂ ಮಹೇಶ್ವರಯ್ಯ

ಕಲಬುರಗಿ: ಶರಣಬಸವೇಶ್ವರ ಸಂಸ್ಥಾನದ ೮ನೇ ಪೀಠಾಧಿಪತಿ ಪರಮ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾರವರು ಬರೆದ ದಾಸೋಹ ಸೂತ್ರಗಳು ಆಧ್ಯಾತ್ಮಿಕತೆ, ಸಾಮಾಜಿಕ ಸಮಾನತೆ, ಆರ್ಥಿಕ ಪ್ರಗತಿ ಮತ್ತು ಜೀವನದ ಮೌಲ್ಯವನ್ನು ಒಳಗೊಂಡಿವೆ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಚ್.ಎಂ ಮಹೇಶ್ವರಯ್ಯ ಅಭಿಪ್ರಾಯ ಪಟ್ಟರು.

ಶರಣಬಸವ ವಿಶ್ವವಿದ್ಯಾಲಯ ಆವರಣದ ದೊಡ್ಡಪ್ಪ ಅಪ್ಪಾ ಸಭಾ ಮಂಟಪದಲ್ಲಿ ಗುರುವಾರ ಶರಣಬಸವ ವಿಶ್ವವಿದ್ಯಾಲಯ ಶರಣಬಸವೇಶ್ವರ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯ, ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯ, ಗೋದುತಾಯಿ ಮಹಿಳಾ ಮಹಾವಿದ್ಯಾಲಯ, ಎಸ್.ಎಸ್.ಕೆ. ಬಸವೇಶ್ವರ ಯುಜಿ ಮತ್ತು ಪಿಜಿ ಕಾಲೇಜು ಜಂಟಿಯಾಗಿ ಆಯೋಜಿಸಿದ್ದ ದಾಸೋಹ ಸೂತ್ರಗಳ ಒಂದು ದಿನದ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಪೂಜ್ಯ ಅಪ್ಪಾಜೀಯವರು ಬರೆದ ಮಹಾದಾಸೋಹ ಸೂತ್ರಗಳು ಸಮಾಜದ ಸೇವೆ ಮತ್ತು ಸಮರ್ಪಣೆಯ ಹಾಗೂ ಆಧ್ಯಾತ್ಮಿಕ ಆಲೋಚನೆಯ ಅತ್ಯುತ್ತಮ ಅಂಶಗಳನ್ನು ಒಳಗೊಂಡಿವೆ ಎಂದು ಹೇಳಿದರು.

ದಾಸೋಹದ ಪರಿಕಲ್ಪನೆ ಈಗಾಗಲೆ ಪ್ರಕೃತಿಯಲ್ಲಿ ಅಸ್ತಿತ್ವದಲ್ಲಿರುವುದು ಕಾಣುತ್ತೇವೆ. ಸಸ್ಯಗಳು, ಪಕ್ಷಿಗಳು ಮತ್ತು ಪ್ರಾಣಿಗಳು ಪರಸ್ಪರ ಸಹಾಯ ಮಾಡುತ್ತವೆ ಹಾಗೂ ಇತರರ ಅಗತ್ಯಗಳನ್ನು ಪೂರೈಸುವದನ್ನು ಮಹಾದಾಸೋಹ ಸೂತ್ರಗಳಲ್ಲಿ ನೈಜವಾಗಿ, ಅತೀ ಸುಂದರವಾದ ರೀತಿಯಲ್ಲಿ ವಿವರಿಸಲಾಗಿದೆ. ದಾಸೋಹ ಸೂತ್ರಗಳಲ್ಲಿ ಆಹಾರ, ಬಟ್ಟೆ, ಆಶ್ರಯ, ಹಣ ಮತ್ತು ಜ್ಞಾನದಂತಹ ಮೂಲಭೂತ ಅಗತ್ಯ ಸಂತೃಪ್ತಿ ಮತ್ತು ಸಂತೋಷದ ಬದುಕು ಸಾಗಿಸಲು ಸಹಕಾರಿಯಾಗಿವೆ ಎಂದು ತಿಳಿಸಿದರು.

ದಾಸೋಹ ಸೂತ್ರಗಳ ಬಗ್ಗೆ ಮುಖ್ಯ ಉಪನ್ಯಾಸಕರಾಗಿ ಆಗಮಿಸಿದ್ದ ಉತ್ತರ ಪ್ರದೇಶದ ಲಕ್ನೋದ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಪಕರಾದ ಡಾ. ಮನೀಶಕುಮಾರ ಗೌರವ ಮಾತನಾಡಿದ ಅವರು, ಸಂತ ಕಬೀರ ಮತ್ತು ಪೂಜ್ಯ ಅಪ್ಪಾಜಿ ಆಲೋಚನೆಗಳಲ್ಲಿ ಗಮನಾರ್ಹ ಆಲೋಚನೆಗಳಿವೆ. ಜೀವನ ಮತ್ತು ಸಮಾಜದ ಬಗೆಗಿನ ಮನೋಭಾವದಲ್ಲಿ ಆಹ್ಲಾದಕರ ಸಂಗತಿಯಾಗಿದೆ. ರಾಷ್ಟ್ರ ಮಟ್ಟದಲ್ಲಿ ಬೆಳೆಯಲು ಮಾರ್ಗದರ್ಶನವಾಗಿವೆ ಎಂದರು.

ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಮಾತನಾಡಿ ಕಾಯಕ ಮತ್ತು ದಾಸೋಹದ ಪರಿಕಲ್ಪನೆಯನ್ನು ಹೊಂದಿದ್ದ ಅಪ್ಪಾಜಿಯವರು ಕನ್ನಡ ಅಭಿಮಾನ ಹೊಂದಿದ್ದಾರೆ. ಮುಂಬರುವ ದಿನಗಳಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗುತ್ತದೆ ಎಂದು ಹೇಳಿದರು. ವಿವಿ ಕುಲಪತಿ ಡಾ.ನಿರಂಜನ ನಿಷ್ಠಿ ಮಾತನಾಡಿ, ಎಲ್ಲಾ ಧರ್ಮ ಸಂಸ್ಕೃತಿಗಳ ಮೌಲ್ಯಗಳ ಸಂಗಮ ದಾಸೋಹ ಸೂತ್ರಗಳಲ್ಲಡಗಿವೆ. ವೀರಶೈವ ತತ್ವಗಳಾದ ಕಾಯಕ, ದಾಸೋಹ ಹಾಗೂ ಅಷ್ಟಾವರಣದ ಮಹತ್ವವನ್ನು ದಾಸೋಹ ಸೂತ್ರಗಳು ಒಳಗೊಂಡಿವೆ ಎಂದರು. ಪೂಜ್ಯ ಅಪ್ಪಾಜೀಯವರ ಜನ್ಮ ದಿನದ ಪ್ರಯುಕ್ತ ಕಾರ್ಯಕ್ರಮದ ನಂತರ ಸಸಿ ನೇಡಲಾಯಿತು.

ಪ್ರೊ.ಸಾವಿತ್ರಾ ಜಂಬಲದಿನ್ನಿ ನಿರೂಪಿಸಿದರು. ಡಾ.ಡೌಳ್ಳೇಗೌಡರ್ ಸ್ವಾಗತಿಸಿದರು. ಡಾ.ನೀಲಾಂಬಿಕಾ ಶೇರಿಕಾರ ವಂದಿಸಿದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

9 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

9 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

9 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

9 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420