ಡಾ.ಶರಣಬಸವಪ್ಪ ಅಪ್ಪಾ ಅವರ 85ನೇ ಜನ್ಮದಿನದಂಗವಾಗಿ ವೃದ್ಧಾಶ್ರಮದಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ

0
45

ಕಲಬುರಗಿ: ಶ್ರೀ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಡಾ.ಶರಣಬಸವಪ್ಪ ಅಪ್ಪಾ ಅವರ 85ನೇ ಜನ್ಮದಿನದಂಗವಾಗಿ ಹೊರವಲಯದ ಮಹಾದೇವಿ ತಾಯಿ ವೃದ್ಧಾಶ್ರಮದಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ ನಡೆಸುವ ಮೂಲಕ ಅರ್ಥಪೂರ್ಣ ಕಾರ್ಯಕ್ರಮವೊಂದನ್ನು ಇಲ್ಲಿನ ವಿಶ್ವಜ್ಯೋತಿ ಪ್ರತಿಷ್ಠಾನ ಹಾಗೂ ಮೋಹನರಾಜ್ ಆಸ್ಪತ್ರೆ ಸಹೋಯೋಗದಡಿ ನಡೆಯಿತು.

ಪ್ರತಿಷ್ಠಾನದ ಸಂಸ್ಥಾಪಕರೂ ಆದ ಸಾಂಸ್ಕೃತಿಕ ಸಂಘಟಕ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಕಲ್ಯಾಣ ನಾಡಿನ ಶೈಕ್ಷಣಿಕ ರಂಗದಲ್ಲಿ ಶ್ರೇಷ್ಠ ಕೊಡುಗೆ ನೀಡುವ ಮೂಲಕ ಪೂಜ್ಯ ಡಾ.ಶರಣಬಸವಪ್ಪ ಅಪ್ಪಾ ಅವರು, ಈ ರಾಷ್ಟ್ರ ಕಂಡ ಅಪರೂಪದ ಶಕ್ತಿಯಾಗಿದ್ದಾರೆ. ಅವರ ಹುಟ್ಟು ಹಬ್ಬ ಸಂಸ್ಥೆಗೆ ಸೀಮಿತಗೊಳಿಸದೇ ಸಾರ್ವತ್ರಿಕವಾಗಿ ಆಚರಿಸುವಂತಾಗಬೇಕು ಎಂದು ಹೇಳಿದರು.

Contact Your\'s Advertisement; 9902492681

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಭವಾನಿಸಿಂಗ್ ಠಾಕೂರ್ ಮಾತನಾಡಿ, ಈ ಭಾಗದ ಲಕ್ಷಾಂತರ ಪ್ರತಿಭಾವಂತ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿಗೆ ಬೆಳಕು ಕೊಟ್ಟ ಶ್ರೇಯಸ್ಸು ಅಪ್ಪಾಜೀ ಅವರಿಗೆ ಸಲ್ಲುತ್ತದೆ ಎಂದರು. ಎಪಿಎಂಸಿ ಮಾಜಿ ಅಧ್ಯಕ್ಷ ಶರಣಬಸಪ್ಪ ಭೂಸನೂರ ಮಾತನಾಡಿ, ಪೂಜ್ಯ ಶ್ರೀ ಡಾ ಶರಣಬಸವಪ್ಪ ಅಪ್ಪಾಜೀ ಅವರು ಒಬ್ಬ ವ್ಯಕ್ತಿ ಅಲ್ಲ. ಬದಲಾಗಿ ಬಹು ದೊಡ್ಡ ಶಕ್ತಿಯಾಗಿದ್ದಾರೆ. ಅವರ ಕಾಯಕ ನಿಷ್ಠೆ ಇಂದಿನ ಸಮಾಜಕ್ಕೆ ಮಾದರಿಯಾದುದು ಎಂದು ಮನದುಂಬಿ ಹೇಳಿದರು.

ಪ್ರತಿಷ್ಠಾನದ ಅಧ್ಯಕ್ಷ ಶ್ರೀಕಾಂತ ಪಾಟೀಲ ತಿಳಗೂಳ, ಪ್ರಮುಖರಾದ  ಶಿವಾನಂದ ಮಠಪತಿ, ಸವಿತಾ ಪಾಟೀಲ್, ಡಾ.ದೇವಾನಂದ ಬಿರಾದಾರ, ಡಾ.ನಿವೇದಿತಾ ಬಿರಾದಾರ, ನೀಲಾಂಬಿಕಾ ಚೌಕಿಮಠ, ಸಂಘದ ಜಲಜಾಕ್ಷಿ ಕೋರೆ, ಪರಮೇಶ್ವರ ಶಟಕಾರ, ರವೀಂದ್ರಕುಮಾರ ಭಂಟನಳ್ಳಿ, ಜಗದೀಶ ಮರಪಳ್ಳಿ, ಹಣಮಂತರಾಯ ಅಟ್ಟೂರ, ಸೇರಿ ಅನೇಕರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here