ಶಹಾಪುರ: ಈ ಭಾಗದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸಿದ ದಿ. ಬಾಪೂಗೌಡ ದರ್ಶನಾಪುರ ಅವರಿಗೆ ಈ ಭಾಗದ ಸಮಗ್ರ ಅಭಿವೃದ್ಧಿ ಬಗ್ಗೆ ನಿಜವಾದ ಕಾಳಜಿ ಇತ್ತು ಎಂದು ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ ಹೇಳಿದರು.
ನಗರದ ಚರಬಸವೇಶ್ವರ ಪ್ರೌಢಶಾಲಾ ಆವರಣದಲ್ಲಿ ಇಂದು ಹಮ್ಮಿಕೊಂಡಿದ್ದ ದಿ. ಬಾಪೂಗೌಡ ದರ್ಶನಾಪುರ ಅವರ 31ನೇ ಪುಣ್ಯ ಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಈ ಭಾಗಕ್ಕೆ ಹಸಿರುಣಿಸಿದ ಕೃಷ್ಣಾ ಮೇಲ್ದಂಡೆ ಯೋಜನೆ, ಚರಬಸವೇಶ್ವರ ಶಿಕ್ಷಣ ಸಂಸ್ಥೆ, ರಾಜ್ಯದ ಹೌಸಿಂಗ್ ಬೋರ್ಡ್, ಈ ಭಾಗದ ಹಲವು ನೀರಾವರಿ ಯೋಜನೆಗಳು ಸೇರಿದಂತೆ ಇನ್ನು ಹಲವಾರು ಕಾರ್ಯಗಳು ಅವರ ದೂರದೃಷ್ಟಿಯ ಫಲಗಳಾಗಿವೆ ಎಂದು ಸ್ಮರಿಸಿದರು.
ಯಾವೊತ್ತು ದ್ವೇಷದ ರಾಜಕಾರಣ ಮಾಡದ ಅವರು, ಈ ಭಾಗದ ಏಳಿಗೆಗೆ ಹಗಲು ರಾತ್ರಿ ಶ್ರಮಿಸಿದವರಾಗಿದ್ದರು. ಅವರ ಪುತ್ರ ಕ್ಷೇತ್ರದ ಶಾಸಕ ಶರಣ ಬಸಪ್ಪಗೌಡ ದರ್ಶನಾಪುರ ಸಹ ಒಬ್ಬ ಸಜ್ಜನ ರಾಜಕಾರಣಿಯಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಶರಣ ಮಾರ್ಗ ಪತ್ರಿಕೆಯ ಉಲ್ಲೇಖ: ಶರಣ ಮಾರ್ಗ ಪತ್ರಿಕೆಯಲ್ಲಿ ಬಂದ ಸತ್ಯಂಪೇಟೆ ಯವರ ಲೇಖನ ಉಲ್ಲೇಖಿಸಿದ ಸಂಸದ ಡಾ. ಉಮೇಶ ಜಾಧವ ಅವರು, ಬಾಪೂಗೌಡ ದರ್ಶನಾಪುರ ಅವರು ಇಂದಿನ ನಮ್ಮಂತಹ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ ಎಂದರು..
ಮುಖ್ಯ ಅತಿಥಿಯಾಗಿದ್ದ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಮಾತನಾಡಿ, ಗಾಂಧಿ, ನೆಹರೂ, ಜೆಪಿ ಮುಂತಾದವರ ವಿಚಾರಗಳಿಂದ ಪ್ರಭಾವಿತಾರಗಿದ್ದ ಗೌಡರು, ಸ್ವಾತಂತ್ರ್ಯ ಹೋರಾಟದ ಜೊತೆಗೆ ಹೈದರಾಬಾದ್ ಕರ್ನಾಟಕ ಏಕೀಕರಣ ಹೋರಾಟದಲ್ಲೂ ಮುಂಚೂಣಿಯಲ್ಲಿದ್ದರು. ಅವರ ಕಾರ್ಯಗಳನ್ನು ಅವರ ಪುತ್ರ ಶರಣಬಸಪ್ಪ ದರ್ಶನಾಪುರ ಮುಂದುವರಿಸಿಕೊಂಡು ಬರುತ್ತಿರುವುದು ಆಶಾದಾಯಕವಾದ ಸಂಗತಿ ಎಂದರು.
ಚರಬಸವೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಗೂ ಹಿರಿಯ ಮುಖಂಡ ಬಸವರಾಜಪ್ಪಗೌಡ ದರ್ಶನಾಪುರ, ಯಾದಗಿರಿ ಜಿಪಂ ಅಧ್ಯಕ್ಷ ರಾಜಶೇಖರ ಪಾಟೀಲ ವಜ್ಜಲ್, ನ್ಯಾಯವಾದಿ ಶ್ರೀನಿವಾಸರಾವ ಕುಲಕರ್ಣಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಆರಬೋಳ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬಸವರಾಜ ವಾಲಿ, ನಿರ್ದೇಶಕ ಸೋಮಶೇಖರ ಗೋನಾಯಕ, ಜಿಪಂ ಮಾಜಿ ಸದಸ್ಯ ಬಸನಗೌಡ ಸುಬೇದಾರ, ಜಿಪಂ ಸದಸ್ಯ ಕಿಶನ್ ರಾಠೋಡ್, ನಿವೃತ್ತ ಇಂಜಿನಿಯರ್ ಭೀಮರೆಡ್ಡಿ ಭೈರೆಡ್ಡಿ, ಜಿಪಂ ಮಾಜಿ ಅಧ್ಯಕ್ಷ ಶಂಕ್ರಣ್ಣ ವಣಿಕ್ಯಾಳ ವೇದಿಕೆಯಲ್ಲಿದ್ದರು. ಶಾಸಕ ಶರಣ ಬಸಪ್ಪಗೌಡ ದರ್ಶನಾಪುರ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಮಾಜಿ ಅಧ್ಯಕ್ಷ ಘೇವರಚಂದ ಜೈನ್ ಪ್ರಾಸ್ತಾವಿಕ ಮಾತನಾಡಿದರು. ಶಿವಲಿಂಗನಗೌಡ ನಿರೂಪಿಸಿದರು. ಚರಬಸವೇಶ್ವರ ಸಂಸ್ಥಾನದ ಪೂಜ್ಯ ಬಸವಯ್ಯ ಶರಣರು ಸಾನ್ನಿಧ್ಯ ವಹಿಸಿದ್ದರು.
ಇದಕ್ಕೂ ಮುನ್ನ ಭೀಮರಾಯನಗುಡಿಯಲ್ಲಿರುವ ಬಾಪೂಗೌಡ ದರ್ಶನಾಪುರ ಪುತ್ಥಳಿಗೆ ಮುಖಂಡರು ಮಾಲಾರ್ಪಣೆ ಮಾಡಿದರು.
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…