ಬಿಸಿ ಬಿಸಿ ಸುದ್ದಿ

ಮಕ್ಕಳ ವಿಕಾಸ ವೈಭವ: ಸ್ವಾಗತ ಸಮಿತಿ ರಚನೆ

ಕಲಬುರಗಿ: ವಿಶ್ವಜ್ಯೋತಿ ಪ್ರತಿಷ್ಠಾನವು ನವೆಂಬರ್ ಮಾಸಾಂತ್ಯಕ್ಕೆ ಹಮ್ಮಿಕೊಳ್ಳಲು ಉದ್ದೇಶಿಸಲಾಗಿರುವ ಮಕ್ಕಳ ವಿವೇಕಕ್ಕೆ ಬೆಳಕು ನೀಡುವ ಮಕ್ಕಳ ವಿಕಾಸ ವೈಭವ-2019′ ದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಜಿಪಂನ ಮಾಜಿ ಉಪಾಧ್ಯಕ್ಷ ಸುರೇಶ ಆರ್.ಸಜ್ಜನ್ ಹಾಗೂ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾದ ಶರಣ ಚಿಂತಕ ಶರಣರಾಜ್ ಛಪ್ಪರಬಂದಿ ಅವರಿಗೆ ಅಧಿಕೃತವಾಗಿ ಆಹ್ವಾನ ನೀಡಿ, ಗೌರವಿಸಲಾಯಿತು.

ನಂತರ ಮಾತನಾಡಿದ ಸುರೇಶ ಸಜ್ಜನ್ ಹಾಗೂ ಶರಣರಾಜ್ ಛಪ್ಪರಬಂದಿ, ಇಂದಿನ ಮಗುವೇ ದೇಶದ ಕನಸು ಹಾಗೂ ಮುಂದಿನ ಭವಿಷ್ಯ ಎಂಬುದನ್ನು ನಾವು ಮನಗಾಣಬೇಕಾಗಿದೆ. ಮಗುವಿನ ಸರ್ವಾಂಗೀಣ ವಿಕಾಸವೇ ಶಿಕ್ಷಣದ ಗುರಿಯಾಗಿದೆ. ಮಗುವಿನಲ್ಲಿ ಅಡಗಿದ ಪ್ರತಿಭಾ ವೈವಿದ್ಯವನ್ನು ಪ್ರಕಾಶಿಸುವ ಕಾರ್ಯ ಈ ಮಕ್ಕಳ ವಿಕಾಸ ವೈಭವದಿಂದ ಆಗುತ್ತಿದೆ ಎಂದ ಅವರು, ಈ ನಿಟ್ಟಿನಲ್ಲಿ ವಿಶ್ವಜ್ಯೋತಿ ಪ್ರತಿಷ್ಠಾನದ ಸಂಸ್ಥಾಪಕ ವಿಜಯಕುಮಾರ ತೇಗಲತಿಪ್ಪಿ ಇಂಥ ಅನೇಕ ಜನಮುಖಿ ಕಾರ್ಯಗಳನ್ನು ಮಾಡಿ ಈ ಭಾಗದ ಜನರಿಂದ ಸೈ ಎನಿಸಿಕೊಂಡಿದ್ದಾರೆ ಎಂದು ಮನದುಂಬಿ ಮಾತನಾಡಿದರು.

ಪ್ರತಿಷ್ಠಾನದ ಸಂಸ್ಥಾಪಕರೂ ಆದ ಸಾಂಸ್ಕೃತಿಕ ಸಂಘಟಕ ವಿಜಯಕುಮಾರ ತೇಗಲತಿಪ್ಪಿ ಮಾತನಾಡಿ, ಎಳೆಯ ಮಕ್ಕಳಿಗೆ ಸಾಹಿತ್ಯ, ಸಾಂಸ್ಕೃತಿಕ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಮತ್ತು ಮಕ್ಕಳು ಕೇವಲ ಅಂಕ ಗಳಿಸಬೇಕೆಂಬ ಹಂಬಲದಿಂದ ಹೊರಗೆ ಬಂದು ತಮ್ಮಲ್ಲಿ ಹುದುಗಿರುವ ಪ್ರತಿಭೆ ಹೊರಹಾಕಲು ಈ ಮಕ್ಕಳ ವಿಕಾಸ ವೈಭವ ಉತ್ತಮ ವೇದಿಕೆ ನೀಡಲಿದೆ ಎಂದರು.

ಸಮಾಜದ ಹಿರಿಯ ಧುರೀಣ ಕಲ್ಯಾಣಪ್ಪ ಪಾಟೀಲ ಮಳಖೇಡ, ದಕ್ಷಿಣ ಕನ್ನಡ ಸಂಘದ ಪ್ರಮುಖ ನರಸಿಂಹ ಮೆಂಡನ್, ಪ್ರಮುಖರಾದ ವಿದ್ಯಾಸಾಗರ ದೇಶಮುಖ, ರವೀಂದ್ರಕುಮಾರ ಭಂಟನಳ್ಳಿ, ಶ್ರೀಕಾಂತ ಪಾಟೀಲ ತಿಳಗೂಳ, ಪರಮೇಶ್ವರ ಶಟಕಾರ, ಪ್ರಭುಲಿಂಗ ಮೂಲಗೆ, ಎಂ.ಬಿ.ನಿಂಗಪ್ಪ, ಡಾ.ಕೆ.ಗಿರಿಮಲ್ಲ, ಶಿವಾನಂದ ಮಠಪತಿ, ಮನೋಹರ ಪೊದ್ದಾರ, ಅಯ್ಯಣ್ಣಗೌಡ ಪಾಟೀಲ, ಮಹಾಂತೇಶ ಕಲಬುರಗಿ, ಶಿವಕುಮಾರ ಸಿ.ಹೊನಗೇರಾ, ಸತೀಶ ಸಜ್ಜನ್, ಸುಬ್ರಹ್ಮಣ್ಯಂ, ಶಿವರಾಜ ಅಂಡಗಿ, ವಿನೋದಕುಮಾರ ಜೇನವೇರಿ, ಡಾ.ನಾಗರಾಜ ಹೆಬ್ಬಾಳ ಸೇರಿ ಅನೇಕ ಗಣ್ಯರು ಉಪಸ್ಥಿತರಿದ್ದರು.

emedialine

Recent Posts

ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿ

ಶಹಾಬಾದ: ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿಯಾಗಿದ್ದು, ಖುಷಿಯಿಂದ ಆಟವಾಡಿ ಎಂದು ತಹಸೀಲ್ದಾರ ಜಗದೀಶ ಚೌರ್ ಹೇಳಿದರು. ಅವರು…

10 hours ago

ಪಾಲಿಕೆ ಸದಸ್ಯ ಸಚಿನ್ ಶಿರವಾಳಗೆ ಭೀಮನಗೌಡ ಪರಗೊಂಡ ಸನ್ಮಾನ

ಕಲಬುರಗಿ: ಜಿಲ್ಲಾ ಕಾಂಗ್ರೇಸ್ ಕಚೇರಿಯಲ್ಲಿ ಮಹಾನಗರದ ವಿದ್ಯಾನಗರ ವಾರ್ಡ್ ದ ಮಹಾನಗರ ಪಾಲಿಕೆಯ ಸದಸ್ಯ ಆಗಿರುವ ಸಚಿನ್ ಶಿರವಾಳ ಅವರು…

12 hours ago

ಕಲಬುರಗಿ ನೂತನ ಪೊಲೀಸ್ ಆಯುಕ್ತರಾಗಿ ಡಾ. ಶರಣಪ್ಪ ಎಸ್.ಡಿ ನೇಮಕ

ಕಲಬುರಗಿ: 2009 ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಡಾ. ಶರಣಪ್ಪ ಎಸ್.ಡಿ ಅವರು ಕಲಬುರಗಿ ನೂತನ ಪೊಲೀಸ್ ಆಯುಕ್ತರಾಗಿ ನಿಯೋಕ್ತಗೊಂಡಿದ್ದಾರೆ.…

13 hours ago

ಪ್ರಾಧ್ಯಾಪಕಿ ಡಾ.ಜಯಶ್ರೀ ಅಗರಖೇಡ್ ಗೆ ಪೆÇ್ರ.ಸತೀಶ್ ಧವನ್ ಪ್ರಶಸ್ತಿ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಿಯರಿಂಗ ಕಾಲೇಜಿನ ಕಂಪ್ಯೂಟರ್ ಸಾಯಿನ್ಸ್ ಇಂಜಿನಿಯರಿಂಗ (ಸಿಎಸ್‍ಇ) ವಿಭಾಗದ…

15 hours ago

ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಎರಡು ಪದಕಗೆದ್ದ ಲೋಕೇಶ್ ಪೂಜಾರ್

ಕಲಬುರಗಿ: ರಾಜ್ಯಮಟ್ಟದ ಸರ್ಕಾರಿ ನೌಕರರಕ್ರೀಡಾಕೂಟದಈಜು ಸ್ಪರ್ಧೆಯಲ್ಲಿ ಕಲಬುರಗಿಯ ವಿಭಾಗೀಯಆಹಾರ ಪ್ರಯೋಗಾಲಯದ ಹಿರಿಯಆಹಾರ ವಿಶ್ಲೇಷಣಅಧಿಕಾರಿ ಲೋಕೇಶ್ ಪೂಜಾರ್‍ಅವರುಉತ್ತಮ ಪ್ರದರ್ಶನ ನೀಡಿಒಂದು ಬಂಗಾರ…

15 hours ago

ತೊಗರಿ ಬೆಳೆಯಲ್ಲಿ ಗೊಣ್ಣೆ ಹುಳದ ಭಾದೆ ಹತೋಟಿಗೆ ಡಾ. ಮಲ್ಲಪ್ಪ ಅವರಿಂದ ಸಲಹೆ

ಕಲಬುರಗಿ: ತಾಲೂಕಿನಲ್ಲಿ ತೊಗರಿ ಬೆಳೆಗೆ ಅಲ್ಲಲ್ಲಿ ಗೊಣ್ಣೆ ಹುಳದ ಭಾದೆ ಕಂಡು ಬಂದಿದ್ದು ರೈತಾಪಿ ಜನರು ಹತೋಟಿಗೆ ಕೃಷಿ ವಿಜ್ಞಾನ…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420