ಸುಳ್ಳು ಸಂಗತಿ ಹರಿಬಿಟ್ಟ ಸಚಿವ ಸುರೇಶ ವಜಾ, ಅಧಿಕಾರಿ ಅಮಾನತು ಮಾಡಿ ಸಿಎಂ ಕ್ಷಮೆಯಾಚಿಸಲಿ

ಯಾದಗಿರಿ: ಬಿಜೆಪಿ ನೇತೃತ್ವದ ಕರ್ನಾಟಕ ಸರ್ಕಾರದ ಸಾರ್ವಜನಿಕ ಶಕ್ಷಣ ಇಲಾಖೆಯ
ವಿವಾದಾತ್ಮಕ ಸುತ್ತೋಲೆಯನ್ನು ಹೊರಡಿಸಿ ಡಾ. ಅಂಬೇಡ್ಕರ ರವರಿಗೆ ಅಪಮಾನವನ್ನು ಮಾಡಿದ್ದು ಸಚಿವ ಸುರೇಶ ಕುಮಾರ ರನ್ನು ಸಂಪುಟದಿಂದ ಕೈಬಿಡಬೇಕು, ಉಮಾಶಂಕರ ವಜಾಗೊಳಿಸಬೇಕು ಸಿಎಂ ಯಡಿಯೂರಪ್ಪ ಅಂಬೇಡ್ಕರ್ ಅನುಯಾಯಿಗಳ ಕ್ಷೇಮೆ ಕೇಳಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.

ದಸಂಸ ಜಿಲ್ಲಾ ಸಂಚಾಲಕ ಮರೆಪ್ಪ ಚೆಟ್ಟರಕರ್ ನೇತೃತ್ವದಲ್ಲಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.  ಈ ಸಂದರ್ಭದಲ್ಲಿ ಮನವಿ ಸಲ್ಲಿಸಿ ಮಾತನಾಡಿದ ಜಿಲ್ಲಾ ಸಂಚಾಲಕ ಮರೆಪ್ಪ ಚಟ್ಟೆರಕರ್, ಡಾ. ಅಂಬೇಡ್ಕರ್ ರವರು ಒಬ್ಬರೆ ಸಂವಿಧಾನವನ್ನು ರಚಸಿಲ್ಲಾ ಎಂದು ಹೇಳುವ ಮೂಲಕ ಮಕ್ಕಳಿಗೆ ಡಾ. ಅಂಬೇಡ್ಕರ್‌ರವರ ಬಗ್ಗೆ ತಪ್ಪು ಮಾಹಿತಿಯನ್ನು ನೀಡಿ ಸಮಾಜದಲ್ಲಿ ವಿಷಮಯ ವಾತಾವರಣ ಸೃಷ್ಪಿಸಲು ಮುಂದಾಗಿದ್ದಾರೆ.

ಇಡೀ ವಿಶ್ವವೇ ಮೆಚ್ಚುವಂತಹ ವಿಶ್ವಜ್ಞಾನಿ, ವಿಶ್ವರತ್ನ ಡಾ. ಬಾಬಾ ಸಾಹೇಬ ಅಂಬೇಡ್ಕರ್ ರವರು
ಭಾರತ ದೇಶದ ಸಂವಿಧಾನ ಶಿಲ್ಪಿಯಾಗಿದ್ದಾರೆ, ಭಾರತ ದೇಶ ಹಾಗೂ ಇಡೀ ವಿಶ್ವವೇ ಮೆಚ್ಚುವಂತಹ
ಸಂವಿಧಾನವನ್ನು ರೂಪಿಸುವ ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ, ಅವರ ಶ್ರಮ, ತ್ಯಾಗಸತತ
ಅಧ್ಯಾಯನ ಪರಿಶ್ರಮದ ಮೂಲಕ ಸಂವಿಧಾನ ರಚಿಸಿದಾರೆ, ಇಡೀ ವಿಶ್ವಕ್ಕೆ ತಿಳಿದಿರುವ ಹಾಗೆ ಡಾ. ಅಂಬೇಡ್ಕರ್ ರವರು ಸಂವಿಧಾನ ರಚನಾ ಕರಡು ಸಮಿತಿ ಅಧ್ಯಕ್ಷರಾಗಿ ಹಾಗೂ ಇನ್ನೂಳಿದ ೭ ಜನ ಸದಸ್ಯರ ಸಮಿತಿ ರಚನೆಯಾದ ನಂತರ ಕಾರಣಾಂತಗಳಿಂದ ಅನಾರೋಹ್ಯ, ಮರಣ ಹಾಗೂ ಕೆಲವರು ದೆಹಲಿಗೆ ಬಾರದೇ ದೂರನೆಉಳಿಯುವ ಮೂಲಕ ಸಂವಿಧಾನ ರಚನೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದಿಲ್ಲ, ಅದರ ಸಂಪೂರ್ಣಜವಾಬ್ದಾರಿ ಭಾರ ಡಾ. ಅಂಬೇಡ್ಕರ್ ರವರ ಮೇಲೆ ಬೇಳುತ್ತದೆ, ಇದಕ್ಕೆಲಾ ಅಂಜದೇ, ಅಳುಕದೇ ಶ್ರಮವಹಿಸಿ ಅಧ್ಯಯನ ಮಾಡಿ ವಿವಿಧತೆಯಿಂದ ಕೂಡಿರುವ ಭಾರತದಂತಹ ದೇಶಕ್ಕೆ ಏಕತೆಯ ಪ್ರತೀಕವಾಗಿ ಇಡೀ ವಿಶ್ವವೇಮೆಚ್ಚುವಂತಹ ಸಂವಿಧಾನ ರಚನೆ ಮಾಡಿಕೊಟ್ಟಿರುವುದು ಕಟು ಸತ್ಯವಾಗಿದೆ.

ವಾಸ್ತವ ಹೀಗಿದ್ದಾಗ್ಯೂ ಅಂಬೇಡ್ಕರ್ ಅವರೊಬ್ಬರೆ ರಚಿಸಲಿಲ್ಲ ಎಂದು ಸುಳ್ಳು ಹೇಳಿದ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ ಜರುಗಿಸಬೇಕೆಂದು ಅವರು ಆಗ್ರಹಿಸಿದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

4 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

7 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

7 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

7 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

7 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

7 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420