ಕಲಬುರಗಿ: ವಿದ್ಯಾರ್ಥಿನಿಯರ ಅನುಕೂಲಕ್ಕಾಗಿ ನಗರದ ಹೊರವಲಯದಲ್ಲಿರುವ ನಾಗನಹಳ್ಳಿ ರಿಂಗ್ರಸ್ತೆ ಸುಸಜ್ಜಿತ ಹಾಸ್ಟೆಲ್ ನಿರ್ಮಿಸಲಾಗುವುದು’ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಶರಣು ಮೋದಿ ಹೇಳಿದರು.
ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಖಿಲ ಭಾರತ ವೀರಶೈವ ಮಹಾಸಭಾ ಘಟಕದ ನೂತನ ಪದಾಧಿಕಾರಿಗಳ ಸನ್ಮಾನ ಸಮಾರಂಭದಲ್ಲಿ ಅವರು ಹೇಳಿದರು. ಗ್ರಾಮೀಣ ಪ್ರದೇಶ, ಹೊಬ್ಬಳಿ, ತಾಲ್ಲೂಕು ಮಟ್ಟದಲ್ಲಿ ಸಮುದಾಯವನ್ನು ಸಂಘಟಿತವಾಗಿಸಬೇಕಾಗಿದೆ. ಸಮುದಾಯದವರಿಗೆ ಆರ್ಥಿಕ ಸಹಾಯ, ಉದ್ಯೋಗ ಮತ್ತಿತರ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿ ಅವರು ಹೇಳಿದರು.
ರಾಜ್ಯದಲ್ಲಿ ಸಮಾಜದ ಮುಖಂಡರ ಮೇಲೆ ಸುಮಾರು 1600 ಜಾತಿ ನಿಂದನೆ ಕೇಸ್ಗಳಿವೆ. ಅವುಗಳ ಇತ್ಯರ್ಥಗೊಳಿಸಬೇಕಾಗಿದೆ ಎಂದರು. ಮಹಾಸಭಾದ ಯುವ ಘಟಕದ ಅಧ್ಯಕ್ಷ ಎಂ.ಎಸ್.ಪಾಟೀಲ ನರಿಬೋಳ ಮಾತನಾಡಿ, ನಗರದಲ್ಲಿ ಸಮುದಾಯವನ್ನು ಒಗ್ಗೂಡಿಸಿಬೇಕಾಗಿದೆ. ಸಮುದಾಯದ ಹಿಂದುಳಿದ ಜನರ ಸಮಸ್ಯೆಗಳಿಗೆ ಮಹಾಸಭಾ ಸ್ಪಂದಿಸುವುದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ನೂತನವಾಗಿ ಸಭಾ ಘಟಕಕ್ಕೆ ಆದ ಅಧ್ಯಕ್ಷ ಹಾಗೂ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. ಸಭಾದ ಉಪಾಧ್ಯಕ್ಷ ಸಿದ್ರಾಮ ಪಾಟೀಲ ಅಫಜಲಪುರಕರ್, ಡಾ.ಶರಣು ಬಿ.ಪಾಟೀಲ, ಶಿವಾನಂದ ಖಜುರಿ, ಡಾ.ಸುಧಾ ಆಲಕಾಯಿ, ಚಂದ್ರಶೇಖರ ಹರಸೂರ, ಶಾಂತು ಖ್ಯಾಮ, ಗೌರಿ ಆರ್, ವಿಜಯಕುಮಾರ ಹುಲಿ, ಡಾ.ರವಿ ಮಲಶೆಟ್ಟಿ, ಜಗದೇವಿ
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…