ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ ವಜಾಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

0
102

ಶಹಾಪುರ: ರಾಜ್ಯ ಸರಕಾರದ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾದ ಉಮಾಶಂಕರ್ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ಶಹಾಪುರದಲ್ಲಿ ದಲಿತಪರ ಸಂಘಟನೆಗಳ ಒಕ್ಕೂಟದಲ್ಲಿ ಪ್ರತಿಭಟನೆ ನಡೆಸಲಾಯಿತು.

ಅಂಬೇಡ್ಕರ್ ಅವರಿಗೆ ಅವಹೇಳನಕಾರಿಯಾಗಿ ಮಾತನಾಡಿರುವ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಉಮಾಶಂಕರ್ ಅವರನ್ನು ವಜಾಗೊಳಿಸುವಂತೆ ಶಹಾಪುರದ ಬಸವೇಶ್ವರ ವೃತ್ತದಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದವರೆಗೆ ಪಾದಯಾತ್ರೆ ಹಮ್ಮಿಕೊಂಡು ಮನವಿ ಪತ್ರ ಸಲ್ಲಿಸಲಾಯಿತು.

Contact Your\'s Advertisement; 9902492681

ಈ ಸಂದರ್ಭದಲ್ಲಿ ದಲಿತ ಮುಖಂಡರಾದ ಟಿ ಶಶಿಧರ್ ಶಿವಕುಮಾರ್ ತಳವಾರ, ರಾಯಣ್ಣ ಸಾಲಿಮನಿ, ಶಿವಪುತ್ರಪ್ಪ ಜವಳಿ,ಅಶೋಕ ಹೊಸಮನಿ,ಭೀಮರಾಯ ಬಡಿಗೇರ್,ಮರೆಪ್ಪ ಜಾಲಿಬೆಂಚಿ,ಶಾಂತಪ್ಪ ಕಟ್ಟಿಮನಿ , ಹಾಗೂ ಇತರರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here