ಕಲಬುರಗಿ: ಚಿಂಚೋಳ್ಳಿ ತಾಲ್ಲೂಕಿನಲ್ಲಿ ಕರ್ನಾಟಕ ನೀರಾವರಿ ನಿಗಮ ನಿಯಮಿತ, ಗುಲ್ಬರ್ಗಾ ನೀರಾವರಿ ಯೋಜನೆ ವಲಯ ವ್ಯಾಪ್ತಿಯಲ್ಲಿ ಬರುವ ಮುಲ್ಲಾಮುರಿ ಕೆಳದಂಡೆ ಯೋಜನೆಯಡಿಯಲ್ಲಿ 124 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಕಾಲುವೆ ನವೀಕರಣ ಕಾಮಗಾರಿಯು ಅತ್ಯಂತ ಕಳಪೆ ಹಾಗೂ ಭ್ರಷ್ಟಚಾರದಿಂದ ನಡೆಯುತ್ತಿದೆ ಎಂದು ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿಗಳಿಗೆ ತನಿಖೆ ನಡೆಸಿ ಕ್ರಮ ಕೈಗೊಳಲ್ಲು ಆಗ್ರಹಿಸಿದ್ದಾರೆ.
ಕಾಲುವೆ ನವೀಕರಣ ಕಾಮಗಾರಿಯನ್ನು 2014-15ರಲ್ಲಿ 18 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು, ಕಾಮಗಾರಿ ಪೂರ್ಣಗೊಂಡು ಕೆವಲ ಮೂರು ವರ್ಷಗಳು ಮಾತ್ರ ಆಗಿರುತ್ತದೆ. ಆದರೆ ಸದರಿ ಕಾಮಗಾರಿಯನ್ನು ಒಳಗೊಂಡಂತೆ ಕಾಲುವೆ ನವೀಕರಣ ಕಾಮಗಾರಿಗಾಗಿ ಈಗ 124 ಕೊಣ, ರೂ. ಮಂಜೂರಾಗಿ ಆಡಳಿತಾತ್ಮಕ ಅನುಮೋದನೆ ದೊರೆತಿದ್ದು, ಕಾಮಗಾರಿಯು ಅರ್ಧದಷ್ಟು ಮುಗಿದಿರುತ್ತದೆ ತಿಳಿಸಿದರು
ಇದೆಲ್ಲವನ್ನು ಗಮನಿಸಿದಾಗ 2014-15 ರಲ್ಲಿ ನಡೆದ ಕಾಮಗಾರಿಯೂ ಕೂಡ ಅತ್ಯಂತ ಕಳಪೆ ಗುಣಮಟ್ಟದ ಕಾಮಗಾರಿಯಾಗಿದ್ದು, ಸರಿಯಾದ ರೀತಿಯಲ್ಲಿ ಗುಣಮಟ್ಟ ಪರಿಶೀಲಿಸದೇ ಭ್ರಷ್ಟಚಾರ ವೆಸಗಿರುವುದು ಸ್ಪಷ್ಟವಾಗುತ್ತದೆ. ಅಷ್ಟೆ ಅಲ್ಲದೆ ಪುನಃ ಅದೇ ಕಾಮಗಾರಿ ಸೇರಿಸಿ, 124 ಕೋಟಿ ರೂ. ವೆಚ್ಚದಲ್ಲಿ ಪ್ರಸ್ತುತ ನಿರ್ಮಾಣ ಮಾಡಲಾಗುತ್ತಿರುವ ಕಾಲುವೆ ನವೀಕರಣ ಕಾಮಗಾಯು ಕೂಡ ಅತ್ಯಂತ ಕಳಪೆ ಹಾಗೂ ಅವ್ಯವಹಾರದಿಂದ ಕೂಡಿದೆ ಎಂದು ಅನೇಕ ದೂರುಗಳು ಬಂದಿರುತ್ತವೆ ಎಂದು ಹೇಳಿದ್ದಾರೆ.
ಅಲ್ಲದೇ ಈ ಹಿಂದೆ ನಡೆದ ಕಾಮಗಾರಿಯೂ ಕಳಪೆ ಗುಣಮಟ್ಟದ ಕಾಮಗಾರಿ ಯಾಗಿದೆ ಎಂದು ತಿಳಿದರೂ ಕೂಡ, ಯಾವುದೇ ಕ್ರಮ ಕೈಗೊಳ್ಳದೇ ಮತ್ತೆ ಅಂದಾಜು ಪಟ್ಟಿ ತಯಾರಿಸಿ ಮರು ಕಾಮಗಾರಿ ಕೈಗೊಳ್ಳುವುದರ ಮೂಲಕ ಭ್ರಷ್ಟಚಾರಕ್ಕೆ ಅನುಕೂಲ ಮಾಡಿಕೊಟ್ಟಾಂತಾಗಿದೆ. ಆದುದರಿಂದ ಕಾಮಗಾರಿಯ ಗುಣ ಮಟ್ಟ ಪರಿಶೀಲನೆಗೆ ಸಮಿತಿಯೊಂದನ್ನು ರಚಿಸಿ ಕೂಲಂಕುಶವಾಗಿ ತನಿಖೆ ಮಾಡಿ, ತಪ್ಪಿತಸ್ಥರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವ ಮೂಲಕ ಸರ್ಕಾರದ ಹಣ ಈರೀತಿಯಾಗಿ ದುರ್ಬಳಕೆ ಆಗುವುದನ್ನು ತಪ್ಪಿಸಬೇಕೆಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ತನಿಖೆಗೆ ಒತ್ತಾಯಿಸಿದ್ದಾರೆ.
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…