ಕಲಬುರಗಿ: ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಮಾತೋಶ್ರೀ ದಾಕ್ಷಾಯಿಣಿ ಅವ್ವನವರ ೪೯ನೇ ಜನ್ಮದಿನದ ಪ್ರಯುಕ್ತ ವಿದ್ಯಾವರ್ಧಕ ಸಂಘದ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಕೇರಳ ಸರ್ಕಾರ ಅನುಷ್ಠಾನಗೊಳಿಸಿದ ’ವಾಟರ್ ಬೆಲ್ ಕಾನ್ಸೆಪ್ಟ್’ವನ್ನು ಜನ್ಮದಿನದ ಸ್ಮರಣಾರ್ಥವಾಗಿ ಪ್ರಥಮಬಾರಿಗೆ ಆರಂಭಿಸಲಾಗುತ್ತದೆ.
ಕೇರಳ ಸರ್ಕಾರದ ವಾಟರ್ ಬೆಲ್ ಪರಿಕಲ್ಪನೆಯನ್ನು ಪರಿಚಯಿಸುವ ಉದ್ದೇಶದಿಂದ ಸ್ವತಃ ಅವ್ವಾಜೀಯವರು ಸಂಘದ ಎಲ್ಲಾ ಶಾಲಾ ಕಾಲೇಜುಗಳು ಈ ಪರಿಕಲ್ಪನೆಯನ್ನು ಅನುಸರಿಸಬೇಕು. ಮಕ್ಕಳು ಬಾಟಲಗಳಲ್ಲಿ ತರುವ ನೀರು ಸಂಪೂರ್ಣವಾಗಿ ಕುಡಿಯುವಂತೆ ಶಿಕ್ಷಕರು ಗಮನಹರಿಸುವ ಮೂಲಕ ಕಾಳಜಿ ವಹಿಸಬೇಕು. ಪ್ರತಿದಿನ ವಿದ್ಯಾರ್ಥಿಗಳು ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸುವದರಿಂದ ಸದೃಢ ಆರೋಗ್ಯ ಹೊಂದುತ್ತಾರೆ. ಈಗಾಗಲೇ ವಿದ್ಯಾವರ್ಧಕ ಸಂಘದ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರಿನ ಬಳಕೆಯನ್ನು ಸಶಕ್ತಗೊಳಿಸಿದೆ ಎಂದು ಮಾತೋಶ್ರೀ ಅವ್ವಾಜೀಯವರು ತಿಳಿಸಿದರು.
ಸಂಘದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ವಾಟರ್ ಬೆಲ್ ಪರಿಕಲ್ಪನೆಯನ್ನು ಪರಿಚಯಿಸುವ ಮಾತೋಶ್ರೀ ಅವ್ವಾಜೀಯವರ ನಿರ್ಧಾರವನ್ನು ಶರಣಬಸವೇಶ್ವರ ಸಂಸ್ಥಾನದ ೮ನೇ ಪೀಠಾಧಿಪತಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾರವರು ಶ್ಲಾಘಿಸಿ, ಸ್ವಾಗತಿಸಿದ್ದಾರೆ.
ಪ್ರತಿದಿನ ಮೂರು ಬಾರಿಯಂತೆ ಬೆಳಿಗ್ಗೆ ೧೦.೩೦ ಹಾಗೂ ಮಧ್ಯಾಹ್ನ ೧೨ ಹಾಗೂ ೩ ಗಂಟೆಗೆ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ನೀರು ಕುಡಿಯುವುದಕ್ಕೆ ಅವಕಾಶ ಮಾಡಿಕೊಡಲಾಗುವದು ಹಾಗೂ ಇದರ ಕುರಿತು ಶಿಕ್ಷಕರು ಗಮನವಹಿಸಬೇಕು. ಶಿಕ್ಷಣ ಸಂಸ್ಥೆಗಳಲ್ಲಿಯ ಎಲ್ಲಾ ಶೌಚಾಲಯಗಳನ್ನು ಸ್ವಚ್ಛತೆಯಿಂದ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.
ಕಲಬುರಗಿ : "ಜಿಲ್ಲೆಯಲ್ಲಿ ಡೆಂಗಿ ಜ್ವರ ಹಾವಳಿ ದಿನೇ ದಿನೇ ವ್ಯಾಪಕವಾಗುತ್ತಿದೆ. ಝಿಕಾ ವೈರಾಣು ಸೋಂಕು, ಚಿಕನ್ ಗುನ್ಯಾ…
ಚಿತ್ತಾಪುರ: ವಿಶ್ವ ರತ್ನ ನಡೆದಾಡುವ ಭಗವಂತ ಬಂಜಾರ ಸಮಾಜದ ಧರ್ಮಗುರುಗಳಾದ ಡಾ,ರಾಮ್ ರಾವ್ ಮಹಾರಾಜರು ಒಬ್ಬ ಮಹಾನ್ ಸರಳ ಸಜ್ಜನಿಕೆಯ…
ಬೆಂಗಳೂರು:ಕಲಾವಿದನ ಕಲ್ಪನೆ ಮತ್ತು ಭಾವನೆಗಳ ಅಭಿವ್ಯಕ್ತಿಯೆ ಚಿತ್ರಕಲೆ,ಹಾಗೂ ಸಾಮಾನ್ಯವಾಗಿ ಒಬ್ಬ ಕಲಾವಿದ ಕಲೆಯಲ್ಲಿ ತೊಡಗಿಕೊಳ್ಳುವುದರಿಂದ ಅವರ ಯೋಚನೆ ಮತ್ತು ಭಾವನೆಗಳು…
ಕಲಬುರಗಿ: ನಗರದ ಕಲಾಮಂಡಳದಲ್ಲಿ ಜಾÐನದೀಪ ನೃತ್ಯ ಕಲಾಸಂಸ್ಥೆ ರಿ ವತಿಯಿಂದ ಸಾಂಸ್ಕ್ರತಿಕ ಕಲಾಮಹೋತ್ಸ ಮತ್ತು ಎಸ್.ಎಸ್.ಎಲ್.ಸಿ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಪಟ್ಟಣದ ಶರಣ ಬಸವೇಶ್ವರರ ದೇವಸ್ಥಾನದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಚಿತ್ತಾಪುರ ತಾಲೂಕು ಘಟಕದ…
ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…