ಬಿಸಿ ಬಿಸಿ ಸುದ್ದಿ

ಕಜಾಪ ರಾಜ್ಯಾಧ್ಯಕ್ಷ ಡಾ.ಎಸ್.ಬಾಲಾಜಿ ಅಭಿಮತ ’ಜನಪದ ಸಾಹಿತ್ಯ ಅಧ್ಯಯನದಿಂದ ವ್ಯಕ್ತಿತ್ವ ವಿಸಕನ’

ಕಲಬುರಗಿ: ಕನ್ನಡ ಸಾಹಿತ್ಯಕ್ಕೆ ಒಂದು ಗಟ್ಟಿತನ ತರಲು ತನ್ನದೇ ಆದ ಪಾತ್ರವನ್ನು ನಿರ್ವಹಿಸಿರುವ ಜಾನಪದ ಸಾಹಿತ್ಯವು, ಕೇವಲ ಕಾಲ್ಪನಿಕ ಸಾಹಿತ್ಯವಾಗಿರದೇ, ಜನಸಾಮಾನ್ಯರ ಅನುಭವದ ಭಂಡಾರ ಸಾಹಿತ್ಯ ಮತ್ತು ಜೀವನದ ಅವಿಭಾಜ್ಯ ಅಂಗವಾಗಿದೆ. ಇದರ ಅಧ್ಯಯನದಿಂದ ನಮ್ಮ ದೇಶದ ಮೂಲ ಸಂಸ್ಕೃತಿ ಅರಿತು ವ್ಯಕ್ತಿತ್ವ ವಿಕಸನವಾಗುತ್ತದೆಯೆಂದು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ.ಎಸ್.ಬಾಲಾಜಿ ಅಬಿಮತ ವ್ಯಕ್ತಪಡಿಸಿದರು.

ಅವರು ನಗರದ ಎಸ್.ಪಿ.ಕಚೇರಿ ಸಮೀಪದಲ್ಲಿರುವ ’ಬಾಲಕಿಯರ ಸರ್ಕಾರಿ ಪಿಯು ಕಾಲೇಜ್’ನಲ್ಲಿ ’ಕಜಾಪ ಜಿಲ್ಲಾ ಘಟಕ’ವು ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ’ಯುವಕರ ನಡೆ, ಜಾನಪದ ಕಡೆ’ ವಿಶೇಷ ಕಾರ್ಯಕ್ರಮ’ವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಪರಿಷತ ಜಿಲ್ಲಾಧ್ಯಕ್ಷ ಎಂ.ಬಿ.ನಿಂಗಪ್ಪ, ನಶಿಸಿ ಹೋಗುತ್ತಿರುವ ಜಾನಪದ ಕಲೆಗಳನ್ನು ಉಳಿಸಿ, ಬೆಳೆಸಿಕೊಂಡು ಹೋಗಬೇಕಾದದ್ದು ಇಂದಿನ ಯುವ ಪೀಳಿಗೆಯ ಮೇಲಿದೆ ಜೊತೆಗೆ ಇದರ ತುರ್ತು ಅಗತ್ಯವಾಗಿದೆ. ಇದರಿಂದ ದೇಶಿ ಸಂಸ್ಕೃತಿ ಮತ್ತು ನಮ್ಮತನದ ರಕ್ಷಣೆ ಸಾಧ್ಯವಾಗುತ್ತದೆಯೆಂದರು.
ಕಾಲೇಜಿನ ಪ್ರಾಂಶುಪಾಲ ಶುಭಾಶ್ಚಂದ್ರ ಮಾತನಾಡಿ, ಜಾನಪದವು ಸಂಸ್ಕ್ರತಿ,ಕಲೆ,ಜೀವನ,ಆಡುಭಾಷೆ,ಪರಂಪರೆ ಒಳಗೊಂಡಿದೆ.ಜನಸಾಮಾನ್ಯರು ಅನುಭವಿಸಿ,ಅವರಿಂದ ಹೊರಹೊಮ್ಮಿದ ಸಾಹಿತ್ಯವಾಗಿದೆ.ಇದು ಪರಂಪರಾಗತ ವಿಷಯಗಳನ್ನು ಪ್ರತೇಕಿಸಿಕೊಂಡು ತನ್ನ ಅಧ್ಯಯನದ ವ್ಯಾಪ್ತಿಗೆ ಒಳಪಡಿಸಿಕೊಳ್ಳತ್ತದೆಯೆಂದು ನುಡಿದರು.

ಕಾಲೇಜಿನ ವಿದ್ಯಾರ್ಥಿನಿಯರು ಜಾನಪದ ಗೀತೆಗಳನ್ನು ಹಾಡಿದರು. ಕಜಾಪ ತಾಲೂಕಾ ಅಧ್ಯಕ್ಷ ಚನ್ನವೀರ ಕಣ್ಣಿ, ನಾಲವಾರ ಆದ್ಯಕ್ಷ ರಾಜೇಂದ್ರ ಕೊಲ್ಲೂರ, ಕಲಾವಿ ದುಂಡಪ್ಪ ಕೊಲ್ಲೂರ, ಉಪನ್ಯಾಸಕರಾದ ಶ್ರೀದೇವಿ ಭಾವಿದೊಡ್ಡಿ, ಎಸ್.ಎನ್.ಕಮತಗಿ ಸೇರಿದಂತೆ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

46 mins ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

52 mins ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

55 mins ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

60 mins ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

1 hour ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

1 hour ago